AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal: ರನ್​ ವೇದಲ್ಲಿ ಆಯತಪ್ಪಿದ ವಿಮಾನ; 80 ಪ್ರಯಾಣಿಕರ ಸುರಕ್ಷಿತ ಸ್ಥಳಾಂತರ

ವಿಮಾನದಲ್ಲಿ ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ರೆಂಜಿ ಶೇರ್ಪಾ ತಿಳಿಸಿದ್ದಾರೆ.

Nepal:  ರನ್​ ವೇದಲ್ಲಿ ಆಯತಪ್ಪಿದ ವಿಮಾನ; 80 ಪ್ರಯಾಣಿಕರ ಸುರಕ್ಷಿತ ಸ್ಥಳಾಂತರ
ಕಾಟ್ಮಂಡು ವಿಮಾನ ನಿಲ್ದಾಣ
TV9 Web
| Updated By: Lakshmi Hegde|

Updated on:Oct 05, 2021 | 6:35 PM

Share

ಕಾಟ್ಮಂಡು: ನೇಪಾಳದ ದೇಶೀಯ ವಿಮಾನ (Nepal’s Domestic Aircraft)  ಅಂದರೆ ದೇಶದೊಳಗೇ ಸಂಚರಿಸುವ ವಿಮಾನವೊಂದು ರನ್​ವೇದಲ್ಲಿ ಆಯತಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಈ ವಿಮಾನದಲ್ಲಿ ಸುಮಾರು 80 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್​ ಯಾರಿಗೂ ಏನೂ ಆಗಲಿಲ್ಲ. ನೇಪಾಳದ ಶ್ರೀ ಏರ್​​ಲೈನ್​​ಗೆ ಸೇರಿದ ವಿಮಾನ, ಇಂದು ಬೆಳಗ್ಗೆ 10.30ರ ಹೊತ್ತಿಗೆ ಕಾಟ್ಮಂಡುವಿನ ತ್ರಿಭುವನ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇಪಾಳ್​ಗುಂಜ್​ಗೆ ಹೊರಟಿತ್ತು. ಟೇಕ್​ಆಫ್​ಗೂ ಮುನ್ನ ಟ್ಯಾಕ್ಸಿ ವೇದಲ್ಲಿ ಸಂಚಾರ ಮಾಡುತ್ತಿದ್ದಾಗ ಸ್ಕಿಡ್​ ಆಗಿದೆ ಎಂದು ವರದಿಯಾಗಿದೆ. 

ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲ ಪ್ರಯಾಣಿಕರನ್ನೂ ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ. ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರ ರೆಂಜಿ ಶೇರ್ಪಾ ತಿಳಿಸಿದ್ದಾರೆ.  ಈ ವಿಮಾನವನ್ನು ತಾಂತ್ರಿಕ ಪರಿಶೀಲನೆಗಾಗಿ ತೆಗೆದುಕೊಂಡು ಹೋಗಲಾಗಿದ್ದು, ಅದನ್ನು ಸಂಪೂರ್ಣವಾಗಿ ಪರಿಶೀಲಿಸಿ, ನೇಪಾಳ ನಾಗರಿಕ ವಿಮಾನಯಾನ ಪ್ರಾಧಿಕಾರದ ಅನುಮೋದನೆ ಬಳಿಕವಷ್ಟೇ ಮತ್ತೆ ಹಾರಾಟ ನಡೆಸಲಾಗುವುದು ಎಂದೂ ಹೇಳಿದ್ದಾರೆ. ರನ್​ವೇದಲ್ಲಿ ಹೋಗುತ್ತಿದ್ದಾಗ ವಿಮಾನದ ಎಡಗಾಲಿ ಹುಲ್ಲಿನ ಮೇಲೆ ಹೋಗಿದೆ ಎನ್ನಲಾಗಿದೆ. ಈ ವಿಮಾನ ಆಯತಪ್ಪಿ ಸಣ್ಣಮಟ್ಟದ ಅವಘಡ ಸಂಭವಿಸಿದ್ದರೂ ಏರ್​ಪೋರ್ಟ್​​ನಲ್ಲಿ ಉಳಿದ ವಿಮಾನಗಳ ಕಾರ್ಯಾಚರಣೆ ನಡೆಯುತ್ತಲೇ ಇದೆ.

ಇದನ್ನೂ ಓದಿ: Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ

Covaxin: ಕೋವ್ಯಾಕ್ಸಿನ್​ಗೆ ಅನುಮೋದನೆ ನೀಡುವ ಬಗ್ಗೆ WHO ಸಭೆ; ಸದ್ಯದಲ್ಲೇ ಅಂತಿಮ ನಿರ್ಧಾರ ಸಾಧ್ಯತೆ

Published On - 6:35 pm, Tue, 5 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ