AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Just miss.. ವಿಮಾನ ಅವಘಡದಿಂದ ಅಮೆರಿಕ ಅಧ್ಯಕ್ಷ ಟ್ರಂಪ್​ ಸೇಫ್​!

ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ಕಾವು ದಿನದಿನಕ್ಕೂ ಏರುತ್ತಲೇ ಇದೆ. ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮರು ಆಯ್ಕೆಯ ಕನಸು ಹೊತ್ತಿದ್ದರೆ ಇತ್ತ ಡೆಮೋಕ್ರಾಟ್​ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್​ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸ ತೋರಿಸಿದ್ದಾರೆ. ಈ ನಡುವೆ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವಘಡ ಒಂದರಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಭಾನುವಾರ ಅಧ್ಯಕ್ಷ ಟ್ರಂಪ್​ರ ಅಧಿಕೃತ ವಿಮಾನ ಏರ್​ ಫೋರ್ಸ್​ ಒನ್​ಗೆ ಸಣ್ಣದೊಂದು ಡ್ರೋನ್​ ಡಿಕ್ಕಿಯಾಗುವಷ್ಟು ನಿಕಟವಾಗಿ ಹಾದು ಹೋಯಿತು ಎಂದು ಉನ್ನತ ಮೂಲಗಳು ಮಾಹಿತಿ […]

Just miss.. ವಿಮಾನ ಅವಘಡದಿಂದ ಅಮೆರಿಕ ಅಧ್ಯಕ್ಷ ಟ್ರಂಪ್​ ಸೇಫ್​!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 18, 2020 | 12:34 PM

ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ಕಾವು ದಿನದಿನಕ್ಕೂ ಏರುತ್ತಲೇ ಇದೆ. ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮರು ಆಯ್ಕೆಯ ಕನಸು ಹೊತ್ತಿದ್ದರೆ ಇತ್ತ ಡೆಮೋಕ್ರಾಟ್​ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್​ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸ ತೋರಿಸಿದ್ದಾರೆ. ಈ ನಡುವೆ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವಘಡ ಒಂದರಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಭಾನುವಾರ ಅಧ್ಯಕ್ಷ ಟ್ರಂಪ್​ರ ಅಧಿಕೃತ ವಿಮಾನ ಏರ್​ ಫೋರ್ಸ್​ ಒನ್​ಗೆ ಸಣ್ಣದೊಂದು ಡ್ರೋನ್​ ಡಿಕ್ಕಿಯಾಗುವಷ್ಟು ನಿಕಟವಾಗಿ ಹಾದು ಹೋಯಿತು ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಿಬ್ಬಂದಿಯ ಪ್ರಕಾರ ವಾಷಿಂಗ್ಟನ್​ ಏರ್​ಪೋರ್ಟ್​ನಲ್ಲಿ ಅಧ್ಯಕ್ಷರ ವಿಮಾನ ಲ್ಯಾಂಡ್​ ಆಗುವ ವೇಳೆ ಈ ಘಟನೆ ಸಂಭವಿಸಿದೆ.

ಪ್ಲಸ್​ ಆಕಾರದ ಈ ಹಳದಿ ಮತ್ತು ಕಪ್ಪು ಬಣ್ಣದ ಡ್ರೋನ್​ ವಿಮಾನದ ಬಲಭಾಗಕ್ಕೆ ತಾಗುವಷ್ಟು ಹತ್ತಿರವಾಗಿ ಹಾದು ಹೋಯಿತು ಎಂದು ತಿಳಿದುಬಂದಿದೆ. ಸದ್ಯ, ಘಟನೆ ಕುರಿತು ಅಮೆರಿಕಾ ಅಧ್ಯಕ್ಷರ ಭದ್ರತಾ ಪಡೆ ಸೀಕ್ರೆಟ್​ ಸರ್ವೀಸ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವೈಮಾನಿಕ ತಜ್ಞರ ಪ್ರಕಾರ ಅಷ್ಟು ಪುಟ್ಟ ಗಾತ್ರದ ಡ್ರೋನ್​ ವಿಮಾನಕ್ಕೆ ತಾಗಿದ್ದರೆ ಯಾವುದೇ ಅಪಾಯವಿರುತ್ತಿರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಒಂದು ವೇಳೆ ಏರ್​ ಫೋರ್ಸ್​ ಒನ್​ನ ಕಾಕ್​ಪಿಟ್​ಗೆ ಅಥವಾ ಇಂಜಿನ್​ಗೆ ತಾಗಿದ್ದರೆ ಅವಘಡ ಸಂಭವಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ, ಅಧ್ಯಕ್ಷ ಟ್ರಂಪ್​ರನ್ನು ಸುರಕ್ಷಿತ ತಾಣಕ್ಕೆ ಕರೆದೊಯ್ದ ಭದ್ರತಾಧಿಕಾರಿಗಳು

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ