AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Just miss.. ವಿಮಾನ ಅವಘಡದಿಂದ ಅಮೆರಿಕ ಅಧ್ಯಕ್ಷ ಟ್ರಂಪ್​ ಸೇಫ್​!

ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ಕಾವು ದಿನದಿನಕ್ಕೂ ಏರುತ್ತಲೇ ಇದೆ. ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮರು ಆಯ್ಕೆಯ ಕನಸು ಹೊತ್ತಿದ್ದರೆ ಇತ್ತ ಡೆಮೋಕ್ರಾಟ್​ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್​ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸ ತೋರಿಸಿದ್ದಾರೆ. ಈ ನಡುವೆ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವಘಡ ಒಂದರಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಭಾನುವಾರ ಅಧ್ಯಕ್ಷ ಟ್ರಂಪ್​ರ ಅಧಿಕೃತ ವಿಮಾನ ಏರ್​ ಫೋರ್ಸ್​ ಒನ್​ಗೆ ಸಣ್ಣದೊಂದು ಡ್ರೋನ್​ ಡಿಕ್ಕಿಯಾಗುವಷ್ಟು ನಿಕಟವಾಗಿ ಹಾದು ಹೋಯಿತು ಎಂದು ಉನ್ನತ ಮೂಲಗಳು ಮಾಹಿತಿ […]

Just miss.. ವಿಮಾನ ಅವಘಡದಿಂದ ಅಮೆರಿಕ ಅಧ್ಯಕ್ಷ ಟ್ರಂಪ್​ ಸೇಫ್​!
KUSHAL V
| Edited By: |

Updated on: Aug 18, 2020 | 12:34 PM

Share

ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ಕಾವು ದಿನದಿನಕ್ಕೂ ಏರುತ್ತಲೇ ಇದೆ. ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮರು ಆಯ್ಕೆಯ ಕನಸು ಹೊತ್ತಿದ್ದರೆ ಇತ್ತ ಡೆಮೋಕ್ರಾಟ್​ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್​ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸ ತೋರಿಸಿದ್ದಾರೆ. ಈ ನಡುವೆ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವಘಡ ಒಂದರಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಭಾನುವಾರ ಅಧ್ಯಕ್ಷ ಟ್ರಂಪ್​ರ ಅಧಿಕೃತ ವಿಮಾನ ಏರ್​ ಫೋರ್ಸ್​ ಒನ್​ಗೆ ಸಣ್ಣದೊಂದು ಡ್ರೋನ್​ ಡಿಕ್ಕಿಯಾಗುವಷ್ಟು ನಿಕಟವಾಗಿ ಹಾದು ಹೋಯಿತು ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಿಬ್ಬಂದಿಯ ಪ್ರಕಾರ ವಾಷಿಂಗ್ಟನ್​ ಏರ್​ಪೋರ್ಟ್​ನಲ್ಲಿ ಅಧ್ಯಕ್ಷರ ವಿಮಾನ ಲ್ಯಾಂಡ್​ ಆಗುವ ವೇಳೆ ಈ ಘಟನೆ ಸಂಭವಿಸಿದೆ.

ಪ್ಲಸ್​ ಆಕಾರದ ಈ ಹಳದಿ ಮತ್ತು ಕಪ್ಪು ಬಣ್ಣದ ಡ್ರೋನ್​ ವಿಮಾನದ ಬಲಭಾಗಕ್ಕೆ ತಾಗುವಷ್ಟು ಹತ್ತಿರವಾಗಿ ಹಾದು ಹೋಯಿತು ಎಂದು ತಿಳಿದುಬಂದಿದೆ. ಸದ್ಯ, ಘಟನೆ ಕುರಿತು ಅಮೆರಿಕಾ ಅಧ್ಯಕ್ಷರ ಭದ್ರತಾ ಪಡೆ ಸೀಕ್ರೆಟ್​ ಸರ್ವೀಸ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವೈಮಾನಿಕ ತಜ್ಞರ ಪ್ರಕಾರ ಅಷ್ಟು ಪುಟ್ಟ ಗಾತ್ರದ ಡ್ರೋನ್​ ವಿಮಾನಕ್ಕೆ ತಾಗಿದ್ದರೆ ಯಾವುದೇ ಅಪಾಯವಿರುತ್ತಿರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಒಂದು ವೇಳೆ ಏರ್​ ಫೋರ್ಸ್​ ಒನ್​ನ ಕಾಕ್​ಪಿಟ್​ಗೆ ಅಥವಾ ಇಂಜಿನ್​ಗೆ ತಾಗಿದ್ದರೆ ಅವಘಡ ಸಂಭವಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ, ಅಧ್ಯಕ್ಷ ಟ್ರಂಪ್​ರನ್ನು ಸುರಕ್ಷಿತ ತಾಣಕ್ಕೆ ಕರೆದೊಯ್ದ ಭದ್ರತಾಧಿಕಾರಿಗಳು

Follow Us
KUSHAL V
KUSHAL V
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​