AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಕೋಪದಿಂದ ಕೊರೊನಾ ವೈರಸ್ ಸೃಷ್ಟಿಯಾಗಿದೆಯಂತೆ.. ಇದು ಉಗ್ರರ ‘ಭಯೋತ್ಪಾದಕತೆ’

ಕೊರೊನಾ ವೈರಸ್ ಎಂಬುದು ದೇವರ ಕೋಪದಿಂದ ಸೃಷ್ಟಿಯಾದಂತದ್ದು. ಇತ್ತೀಚಿನ ವರ್ಷಗಳಲ್ಲಿ ಮುಸ್ಲಿಂರನ್ನು ನಾಶಪಡಿಸಿದವರಿಗೆ ದೇವರು ಶಿಕ್ಷೆ ವಿಧಿಸುತ್ತಿದ್ದಾರೆ ಎಂದು ಐಎಸ್ಐಎಲ್ ಮತ್ತು ಅಲ್-ಖೈದಾ ಭಯೋತ್ಪಾದಕ ಸಂಘಟನೆಗಳು ತನ್ನ ಅವೈಜ್ಞಾನಿಕ ಪಿತೂರಿ ಸಿದ್ದಾಂತಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೊರಡಿಸಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಭಯೋತ್ಪಾದಕ ಸಂಘಟನೆಗಳು ಹೀಗೆ ಸಾಮಾಜಿಕ ಮಾಧ್ಯಮವನ್ನು ದುರುದ್ದೇಶಪೂರಕವಾಗಿ ಬಳಸಿಕೊಳ್ಳುತ್ತಿವೆ ಎಂದು ವಿಶ್ವಸಂಸ್ಥೆಯ ಅಂತರ್ಜಾಲ ಅಪರಾಧ ಮತ್ತು ನ್ಯಾಯ ಸಂಶೋಧನಾ ಸಂಸ್ಥೆ ಯುನಿಕ್ರಿ (UNICRI) ವರದಿ ಮಾಡಿದೆ. ಉಗ್ರಗಾಮಿಗಳು ತಮ್ಮ ಜಾಲವನ್ನು ಹೆಚ್ಚಿಸಲು, ಜನರಿಗಿರುವ ಸರ್ಕಾರದ ಮೇಲಿನ […]

ದೇವರ ಕೋಪದಿಂದ ಕೊರೊನಾ ವೈರಸ್ ಸೃಷ್ಟಿಯಾಗಿದೆಯಂತೆ.. ಇದು ಉಗ್ರರ ‘ಭಯೋತ್ಪಾದಕತೆ’
ಸಾಧು ಶ್ರೀನಾಥ್​
|

Updated on: Nov 19, 2020 | 5:56 PM

Share

ಕೊರೊನಾ ವೈರಸ್ ಎಂಬುದು ದೇವರ ಕೋಪದಿಂದ ಸೃಷ್ಟಿಯಾದಂತದ್ದು. ಇತ್ತೀಚಿನ ವರ್ಷಗಳಲ್ಲಿ ಮುಸ್ಲಿಂರನ್ನು ನಾಶಪಡಿಸಿದವರಿಗೆ ದೇವರು ಶಿಕ್ಷೆ ವಿಧಿಸುತ್ತಿದ್ದಾರೆ ಎಂದು ಐಎಸ್ಐಎಲ್ ಮತ್ತು ಅಲ್-ಖೈದಾ ಭಯೋತ್ಪಾದಕ ಸಂಘಟನೆಗಳು ತನ್ನ ಅವೈಜ್ಞಾನಿಕ ಪಿತೂರಿ ಸಿದ್ದಾಂತಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೊರಡಿಸಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಭಯೋತ್ಪಾದಕ ಸಂಘಟನೆಗಳು ಹೀಗೆ ಸಾಮಾಜಿಕ ಮಾಧ್ಯಮವನ್ನು ದುರುದ್ದೇಶಪೂರಕವಾಗಿ ಬಳಸಿಕೊಳ್ಳುತ್ತಿವೆ ಎಂದು ವಿಶ್ವಸಂಸ್ಥೆಯ ಅಂತರ್ಜಾಲ ಅಪರಾಧ ಮತ್ತು ನ್ಯಾಯ ಸಂಶೋಧನಾ ಸಂಸ್ಥೆ ಯುನಿಕ್ರಿ (UNICRI) ವರದಿ ಮಾಡಿದೆ.

ಉಗ್ರಗಾಮಿಗಳು ತಮ್ಮ ಜಾಲವನ್ನು ಹೆಚ್ಚಿಸಲು, ಜನರಿಗಿರುವ ಸರ್ಕಾರದ ಮೇಲಿನ ನಂಬಿಕೆಯನ್ನು ಹಾಳು ಮಾಡಲು, ದೇವರ ಕೋಪದಿಂದ ಈ ಸಾಂಕ್ರಾಮಿಕ ರೋಗ ಹರಡುತ್ತಿದೆ ಎಂಬ ದುರುದ್ದೇಶದ ಸಂದೇಶವನ್ನು ಬಿತ್ತುವ ಸಲುವಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಿದೆ ಎಂದು ವರದಿ ತಿಳಿಸಿದೆ.

ಐಸಿಸ್ ಅಥವಾ ದಾಶ್ ಭಯೋತ್ಪಾದಕ ಗುಂಪು, ಅಲ್-ಖೈದಾದೊಂದಿಗೆ ಸಂಬಂಧಿಸಿದ ಗುಂಪು ಮತ್ತು ಸಂಘಟಿತ ಅಪರಾಧ ಗುಂಪು ಎಂಬುದಾಗಿ ಮೂರು ಭಯೋತ್ಪಾದಕರ ಗುಂಪುಗಳಿವೆ. ಐಸಿಸ್ ಮತ್ತು ಅಲ್-ಖೈದಾಗೆ ಸಂಬಂಧಿಸಿದ ಗುಂಪುಗಳಿಂದ ಕೋವಿಡ್ ಸಂಬಂಧಿತ ಸಂದೇಶವನ್ನು ಪರಿಶೀಲಿಸಿದಾಗ, ಉದ್ದೇಶಪೂರ್ವಕವಾಗಿ ರೋಗವನ್ನು ಹರಡುವ ಮೂಲಕ ಜೈವಿಕ ಬಾಂಬ್​ಗಳಾಗಿ ಕಾರ್ಯ ನಿರ್ವಹಿಸಲು ಸಂಚು ಹೂಡಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಯುನಿಕ್ರಿ ಸಂಶೋಧನಾ ಸಂಸ್ಥೆ ನಿರ್ದೇಶಕಿ ಆಂಟೋನಿಯಾ ಮೇರಿ ಡಿ ವಿಯೋ ವರದಿಯಲ್ಲಿ ತಿಳಿಸಿರುವ ಪ್ರಕಾರ, ಭಯೋತ್ಪಾದಕ ಮತ್ತು ಹಿಂಸಾತ್ಮಕ ಉಗ್ರಗಾಮಿ ಗುಂಪುಗಳು ಸಾಮಾಜಿಕ ಮಾಧ್ಯಮವನ್ನು ದುರುಪಯೋಗ ಪಡಿಸಿಕೊಳ್ಳಲು ಸಂಭಾವ್ಯ ಭಯೋತ್ಪಾದಕರನ್ನು ಹೆಚ್ಚಿಸಲು ಕೋವಿಡ್19 ಅನ್ನು ಹರಡಲು ಬಳಸಿದ ಜೈವಿಕ ಆಯುಧ ಎಂದು ತಿಳಿಸಿದ್ದಾರೆ.

ದತ್ತಾಂಶ ವಿಜ್ಞಾನ ಉಪಕರಣಗಳು, ಸತ್ಯ-ಪರಿಶೀಲನೆ ಅಪ್ಲಿಕೇಶನ್​ಗಳು ಕೃತಕ ಬುದ್ಧಿವಂತಿಕೆ ಸೇರಿದಂತೆ ತಪ್ಪು ಮಾಹಿತಿಗಳನ್ನು ತೆಗೆದು ಹಾಕಲು ಯುನಿಕ್ರಿ (UNICRI) ಸಂಶೋಧಕರು ಹಲವು ಬಗೆಯ ತಂತ್ರಗಳನ್ನು ಹೂಡಿದ್ದಾರೆ. ಆದರೆ ತಂತ್ರಜ್ಞಾನ ಪ್ರತಿರೋಧಗಳು ಮಾತ್ರ ಸಾಮಾಜಿಕ ಮಾಧ್ಯಮ ದುರುಪಯೋಗ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಿಂದ ತಿಳಿದು ಬಂದಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು