AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನೇಜರ್​ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾಗೊಳಿಸಿದ ಚೀನಾದ ಅಲಿಬಾಬಾ ಕಂಪನಿ

ನನ್ನ ಆರೋಪವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮತ್ತು ತನಿಖೆ ನಡೆಸುವುದಾಗಿ ಕಂಪನಿ ಹೇಳಿತ್ತು. ಆದರೆ ನಂತರ ನವೆಂಬರ್ ಅಂತ್ಯದಲ್ಲಿ ಏಕಾಏಕಿ ನನಗೆ ನೋಟಿಫಿಕೇಶನ್​ ಕೊಟ್ಟು, ಕೆಲಸದಿಂದ ತೆಗೆದ ಬಗ್ಗೆ ಹೇಳಿದರು ಎಂದು ಝೌ ಹೇಳಿಕೊಂಡಿದ್ದಾರೆ.

ಮ್ಯಾನೇಜರ್​ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾಗೊಳಿಸಿದ ಚೀನಾದ ಅಲಿಬಾಬಾ ಕಂಪನಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 13, 2021 | 4:33 PM

Share

ಮ್ಯಾನೇಜರ್​ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಅಲಿಬಾಬಾ ಗ್ರೂಪ್​ ಹೋಲ್ಡಿಂಗ್​ ಲಿಮಿಟೆಡ್​ ಕೆಲಸದಿಂದ ವಜಾಗೊಳಿಸಿದೆ. ಇ-ಕಾಮರ್ಸ್, ಚಿಲ್ಲರೆ ವ್ಯಾಪಾರ, ಇಂಟರ್ನೆಟ್ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಸರು ಮಾಡಿರುವ ಚೀನಾ ಮೂಲದ ಅಲಿಬಾಬಾ ಕಂಪನಿಯಲ್ಲಿ  ಈ ಝೌ ಎಂಬ ಸರ್​ನೇಮ್​ ಇರುವ ಮಹಿಳೆ ಕೆಲಸ ಮಾಡುತ್ತಿದ್ದರು. ಅವರೇ ವಜಾಗೊಂಡ ಉದ್ಯೋಗಿಯಾಗಿದ್ದಾರೆ. ಈ ಬಗ್ಗೆ ದಹೆ ಡೈಲಿ ಎಂಬ ಸುದ್ದಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ನನ್ನ ಮೇಲೆ ಹಿರಿಯ ಮ್ಯಾನೇಜರ್​ವೊಬ್ಬರು ಅತ್ಯಾಚಾರ ಮಾಡಿದ್ದರು. ಈ ಬಗ್ಗೆ ದೂರು ನೀಡಿದ್ದೆ. ಆದರೆ ಕಂಪನಿ  ನನ್ನನ್ನು ವಜಾಗೊಳಿಸಿತು. ನವೆಂಬರ್ ಅಂತ್ಯದಲ್ಲಿ  ಹಿರಿಯ ಮ್ಯಾನೇಜರ್​ ವಿರುದ್ಧ ಸುಳ್ಳುಸುದ್ದಿ ಹಬ್ಬಿಸಿದ ಕಾರಣ ಕೆಲಸದಿಂದ ತೆಗೆಯುತ್ತಿರುವುದಾಗಿ ಕಂಪನಿ ಹೇಳಿತು ಎಂದು ಝೌ ತಿಳಿಸಿದ್ದಾರೆ. ಹಾಗೇ, ಈ ಬಗ್ಗೆ ಕಂಪನಿ ಕೊಟ್ಟ ಮೆಮೋವನ್ನೂ ಕೂಡ ಝೌ ಹಂಚಿಕೊಂಡಿದ್ದಾರೆ. 

ನನ್ನ ಆರೋಪವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮತ್ತು ತನಿಖೆ ನಡೆಸುವುದಾಗಿ ಕಂಪನಿ ಹೇಳಿತ್ತು. ಆದರೆ ನಂತರ ನವೆಂಬರ್ ಅಂತ್ಯದಲ್ಲಿ ಏಕಾಏಕಿ ನನಗೆ ನೋಟಿಫಿಕೇಶನ್​ ಕೊಟ್ಟು, ಕೆಲಸದಿಂದ ತೆಗೆದ ಬಗ್ಗೆ ಹೇಳಿದರು ಎಂದು ಝೌ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಝೌರನ್ನು ವಜಾಗೊಳಿಸಿದ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲೂ ಸಿಕ್ಕಾಪಟೆ ಚರ್ಚೆಗೆ ಕಾರಣವಾಗಿತ್ತು. ಅಂದಹಾಗೆ ಕೆಲಸದ ಟ್ರಿಪ್​​ಗೆ ಹೋಗಿದ್ದಾಗ ಮ್ಯಾನೇಜರ್​ ಕುಡಿದ ಮತ್ತಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸುಮಾರು 8000 ಶಬ್ದಗಳ ಆರೋಪವನ್ನು ಈ ಮಹಿಳೆ ಮಾಡಿದ್ದರು. ಹಾಗೇ, ಕೆಲಸದಿಂದ ತೆಗೆಯುವಾಗ ಕಂಪನಿಯವರು ನೀಡಿದ ಪತ್ರದಲ್ಲಿ, ಮಹಿಳೆ ಹಿರಿಯ ಅಧಿಕಾರಿ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಜಾರಿಗೆ ಭಾರತೀಯ ಕ್ರೈಸ್ತ ಒಕ್ಕೂಟ ವಿರೋಧ; ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ

Published On - 4:32 pm, Mon, 13 December 21

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್