AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನೇಜರ್​ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾಗೊಳಿಸಿದ ಚೀನಾದ ಅಲಿಬಾಬಾ ಕಂಪನಿ

ನನ್ನ ಆರೋಪವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮತ್ತು ತನಿಖೆ ನಡೆಸುವುದಾಗಿ ಕಂಪನಿ ಹೇಳಿತ್ತು. ಆದರೆ ನಂತರ ನವೆಂಬರ್ ಅಂತ್ಯದಲ್ಲಿ ಏಕಾಏಕಿ ನನಗೆ ನೋಟಿಫಿಕೇಶನ್​ ಕೊಟ್ಟು, ಕೆಲಸದಿಂದ ತೆಗೆದ ಬಗ್ಗೆ ಹೇಳಿದರು ಎಂದು ಝೌ ಹೇಳಿಕೊಂಡಿದ್ದಾರೆ.

ಮ್ಯಾನೇಜರ್​ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾಗೊಳಿಸಿದ ಚೀನಾದ ಅಲಿಬಾಬಾ ಕಂಪನಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 13, 2021 | 4:33 PM

Share

ಮ್ಯಾನೇಜರ್​ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಅಲಿಬಾಬಾ ಗ್ರೂಪ್​ ಹೋಲ್ಡಿಂಗ್​ ಲಿಮಿಟೆಡ್​ ಕೆಲಸದಿಂದ ವಜಾಗೊಳಿಸಿದೆ. ಇ-ಕಾಮರ್ಸ್, ಚಿಲ್ಲರೆ ವ್ಯಾಪಾರ, ಇಂಟರ್ನೆಟ್ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಸರು ಮಾಡಿರುವ ಚೀನಾ ಮೂಲದ ಅಲಿಬಾಬಾ ಕಂಪನಿಯಲ್ಲಿ  ಈ ಝೌ ಎಂಬ ಸರ್​ನೇಮ್​ ಇರುವ ಮಹಿಳೆ ಕೆಲಸ ಮಾಡುತ್ತಿದ್ದರು. ಅವರೇ ವಜಾಗೊಂಡ ಉದ್ಯೋಗಿಯಾಗಿದ್ದಾರೆ. ಈ ಬಗ್ಗೆ ದಹೆ ಡೈಲಿ ಎಂಬ ಸುದ್ದಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ನನ್ನ ಮೇಲೆ ಹಿರಿಯ ಮ್ಯಾನೇಜರ್​ವೊಬ್ಬರು ಅತ್ಯಾಚಾರ ಮಾಡಿದ್ದರು. ಈ ಬಗ್ಗೆ ದೂರು ನೀಡಿದ್ದೆ. ಆದರೆ ಕಂಪನಿ  ನನ್ನನ್ನು ವಜಾಗೊಳಿಸಿತು. ನವೆಂಬರ್ ಅಂತ್ಯದಲ್ಲಿ  ಹಿರಿಯ ಮ್ಯಾನೇಜರ್​ ವಿರುದ್ಧ ಸುಳ್ಳುಸುದ್ದಿ ಹಬ್ಬಿಸಿದ ಕಾರಣ ಕೆಲಸದಿಂದ ತೆಗೆಯುತ್ತಿರುವುದಾಗಿ ಕಂಪನಿ ಹೇಳಿತು ಎಂದು ಝೌ ತಿಳಿಸಿದ್ದಾರೆ. ಹಾಗೇ, ಈ ಬಗ್ಗೆ ಕಂಪನಿ ಕೊಟ್ಟ ಮೆಮೋವನ್ನೂ ಕೂಡ ಝೌ ಹಂಚಿಕೊಂಡಿದ್ದಾರೆ. 

ನನ್ನ ಆರೋಪವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮತ್ತು ತನಿಖೆ ನಡೆಸುವುದಾಗಿ ಕಂಪನಿ ಹೇಳಿತ್ತು. ಆದರೆ ನಂತರ ನವೆಂಬರ್ ಅಂತ್ಯದಲ್ಲಿ ಏಕಾಏಕಿ ನನಗೆ ನೋಟಿಫಿಕೇಶನ್​ ಕೊಟ್ಟು, ಕೆಲಸದಿಂದ ತೆಗೆದ ಬಗ್ಗೆ ಹೇಳಿದರು ಎಂದು ಝೌ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಝೌರನ್ನು ವಜಾಗೊಳಿಸಿದ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲೂ ಸಿಕ್ಕಾಪಟೆ ಚರ್ಚೆಗೆ ಕಾರಣವಾಗಿತ್ತು. ಅಂದಹಾಗೆ ಕೆಲಸದ ಟ್ರಿಪ್​​ಗೆ ಹೋಗಿದ್ದಾಗ ಮ್ಯಾನೇಜರ್​ ಕುಡಿದ ಮತ್ತಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸುಮಾರು 8000 ಶಬ್ದಗಳ ಆರೋಪವನ್ನು ಈ ಮಹಿಳೆ ಮಾಡಿದ್ದರು. ಹಾಗೇ, ಕೆಲಸದಿಂದ ತೆಗೆಯುವಾಗ ಕಂಪನಿಯವರು ನೀಡಿದ ಪತ್ರದಲ್ಲಿ, ಮಹಿಳೆ ಹಿರಿಯ ಅಧಿಕಾರಿ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಜಾರಿಗೆ ಭಾರತೀಯ ಕ್ರೈಸ್ತ ಒಕ್ಕೂಟ ವಿರೋಧ; ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ

Published On - 4:32 pm, Mon, 13 December 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್