AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಅಧ್ಯಕ್ಷ ಬೈಡನ್​-ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ನಡುವೆ ಭಿನ್ನಾಭಿಪ್ರಾಯ !; ವೈಯಕ್ತಿಕ ಸ್ಪರ್ಧೆಗೆ ಬಿದ್ದರಾ ನಾಯಕರು?

ಆಗಸ್ಟ್​​ನಲ್ಲಿ ಅಫ್ಘಾನಿಸ್ತಾನದಿಂದ ಯುಎಸ್​ ತನ್ನ ಸೇನೆಯನ್ನು ಸಂಪೂರ್ಣವಾಗಿ ವಾಪಸ್​ ಪಡೆಯಿತು. ಆದರೆ ಈ ವಿಚಾರದ ಬಗ್ಗೆ ನನ್ನೊಂದಿಗೆ ಸರಿಯಾಗಿ ಸಮಾಲೋಚನೆ ನಡೆಸಲಿಲ್ಲ ಎಂದು ಕಮಲಾ ಹ್ಯಾರಿಸ್​ ಹೇಳಿದ್ದಾಗಿ ತಿಳಿದುಬಂದಿದೆ.

ಅಮೆರಿಕದಲ್ಲಿ ಅಧ್ಯಕ್ಷ ಬೈಡನ್​-ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ನಡುವೆ ಭಿನ್ನಾಭಿಪ್ರಾಯ !; ವೈಯಕ್ತಿಕ ಸ್ಪರ್ಧೆಗೆ ಬಿದ್ದರಾ ನಾಯಕರು?
ಜೋ ಬೈಡನ್​ ಮತ್ತು ಕಮಲಾ ಹ್ಯಾರಿಸ್​
Lakshmi Hegde
|

Updated on: Nov 16, 2021 | 8:08 PM

Share

ಯುಎಸ್​ನ ಉಪಾಧ್ಯಕ್ಷ ಸ್ಥಾನಕ್ಕೆ ಏರುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಕಮಲಾ ಹ್ಯಾರಿಸ್​ ಮತ್ತು ಅಧ್ಯಕ್ಷ ಜೋ ಬೈಡನ್​ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆಯಾ ಎಂಬುದೊಂದು ಅನುಮಾನ ಹುಟ್ಟುಹಾಕುವಂತ ವರದಿಯನ್ನು ಸಿಎನ್​ಎನ್​ ಅಂತಾರಾಷ್ಟ್ರೀಯ ಮಾಧ್ಯಮ ಪ್ರಕಟ ಮಾಡಿದೆ. ಹ್ಯಾರಿಸ್ ಸಾರ್ವಜನಿಕರೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದಾರೆ. ಈ ಮೂಲಕ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಹ್ಯಾರಿಸ್​ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದರಿಂದ ಅಧ್ಯಕ್ಷ ಜೋ ಬೈಡನ್​ ತಂಡ ಹತಾಶೆಗೆ ಒಳಗಾಗಿದ್ದು, ಬೇಕಂತಲೇ ಆಡಳಿತ ವಿಷಯದಲ್ಲಿ ಕಮಲಾ ಹ್ಯಾರಿಸ್​​ ಮತ್ತು ಅವರ ತಂಡದ ಸಿಬ್ಬಂದಿಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಉಪಾಧ್ಯಕ್ಷೆ ಹ್ಯಾರಿಸ್​ ಬೆಂಬಲಿಗರು, ಅವರ ಆಪ್ತರು ಆರೋಪ ಮಾಡುತ್ತಿದ್ದಾರೆ ಎಂದು ಸಿಎನ್​ಎನ್​ ವರದಿಯಲ್ಲಿ ಉಲ್ಲೇಖಿಸಿದೆ. 

ಬೈಡನ್​ ಮತ್ತು ಹ್ಯಾರಿಸ್​ ತಂಡದ ನಡುವೆ ಅಂತರ ಶುರುವಾಗಿದೆ ಎಂಬ ಬಗ್ಗೆ ಅಮೆರಿಕ ಶ್ವೇತಭವನದ ಸಿಬ್ಬಂದಿಯೇ ಮಾಹಿತಿ ಬಹಿರಂಗಪಡಿಸಿದ್ದಾಗಿ ಸಿಎನ್​ಎನ್​ ತನ್ನ ಸುದೀರ್ಘ ಲೇಖನದಲ್ಲಿ ಹೇಳಿದೆ.  ಸಣ್ಣಪುಟ್ಟ ಕಿರಿಕಿರಿಗಳು ಹೆಚ್ಚುತ್ತಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದೂ ವೈಟ್​ಹೌಸ್​ ಸಿಬ್ಬಂದಿ ಹೇಳಿಕೊಂಡಿದ್ದಾರೆ. ಈ ಮಧ್ಯೆ ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಟ್ವೀಟ್​ ವೈರಲ್​ ಆಗುತ್ತಿದೆ. ಅದರಲ್ಲಿ ಅವರು, ಉಪಾಧ್ಯಕ್ಷರು ಕೇವಲ ಆಡಳಿತದ ವಿಚಾರದಲ್ಲಿ ಪ್ರಮುಖ ಪಾಲುದಾರರಷ್ಟೇ ಅಲ್ಲ.  ದೇಶದಲ್ಲಿರುವ ಮತದಾನದ ಹಕ್ಕು, ವಲಸೆ ಸಮಸ್ಯೆಗಳಂಥ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರುವ ದಿಟ್ಟ ನಾಯಕರೂ ಹೌದು ಎಂದು ಹೇಳಿಕೊಂಡಿದ್ದಾರೆ. ಹೀಗೆ ಉಪಾಧ್ಯಕ್ಷರನ್ನು ಸಮರ್ಥನೆ ಮಾಡಿಕೊಳ್ಳುವ ಈ ಟ್ವೀಟ್​, ಬೈಡನ್​ ಮತ್ತು ಹ್ಯಾರಿಸ್​ ನಡುವಿನ ಆಂತರಿಕ ಸ್ಪರ್ಧೆಗೆ ಪುಷ್ಟಿ ನೀಡುವಂತಿದೆ.

ಅಫ್ಘಾನ್​ ವಿಚಾರದಲ್ಲಿ ನಿರ್ಲಕ್ಷ್ಯ ಆಗಸ್ಟ್​​ನಲ್ಲಿ ಅಫ್ಘಾನಿಸ್ತಾನದಿಂದ ಯುಎಸ್​ ತನ್ನ ಸೇನೆಯನ್ನು ಸಂಪೂರ್ಣವಾಗಿ ವಾಪಸ್​ ಪಡೆಯಿತು. ಆದರೆ ಈ ವಿಚಾರದ ಬಗ್ಗೆ ನನ್ನೊಂದಿಗೆ ಸರಿಯಾಗಿ ಸಮಾಲೋಚನೆ ನಡೆಸಲಿಲ್ಲ ಎಂದು ಕಮಲಾ ಹ್ಯಾರಿಸ್​ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಮುಂದಿನ ಅವಧಿಗೆ ಅಧ್ಯಕ್ಷೆಯಾಗಲು ಕಮಲಾ ಹ್ಯಾರಿಸ್ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಧ್ಯಕ್ಷ ಜೋ ಬೈಡನ್​ ಮತ್ತು ತಂಡಕ್ಕೆ ಇದು ಸಹ್ಯವಾಗುತ್ತಿಲ್ಲ ಎಂಬ ಮಾತುಗಳು ಶ್ವೇತಭವನದಿಂದ ಕೇಳಿಬರುತ್ತಿದೆ.

ಇದನ್ನೂ ಓದಿ: ‘ನನ್ನ ತಮ್ಮನಿಗೆ ನನ್ನದೇ ದೃಷ್ಟಿ ಬಿತ್ತೇನೋ ಅನಿಸುತ್ತಿದೆ’; ‘ಪುನೀತ ನಮನ’ದಲ್ಲಿ ಅಳುತ್ತಲೇ ಮಾತನಾಡಿದ ಶಿವಣ್ಣ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್