Amazon Forest: ವಿಮಾನ ಅಪಘಾತ: 40 ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ 4 ಮಕ್ಕಳು ಬದುಕುಳಿದಿದ್ದು ಹೇಗೆ?

ಕೊಲಂಬಿಯಾದಿಂದ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳ ಜತೆಗೆ ಸಣ್ಣ ವಿಮಾನದಲ್ಲಿ ಜಾಲಿ ರೈಡ್​ಗೆಂದು ಹೋಗಿದ್ದರು. ಆಗ ತಾಂತ್ರಿಕ ದೋಷದಿಂದಾಗಿ ವಿಮಾನ ಅಪಘಾತಕ್ಕೀಡಾಗಿತ್ತು, ವಿಮಾನವನ್ನು ಅರಸುತ್ತಾ ಬಂದ ರಕ್ಷಣಾ ಸಿಬ್ಬಂದಿಗೆ ತಾಯಿಯ ಶವ ದೊರೆತಿತ್ತು.

Amazon Forest: ವಿಮಾನ ಅಪಘಾತ: 40 ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ 4 ಮಕ್ಕಳು ಬದುಕುಳಿದಿದ್ದು ಹೇಗೆ?
ಮಕ್ಕಳುImage Credit source: NDTV
Follow us
|

Updated on: Jun 11, 2023 | 1:41 PM

ಕೊಲಂಬಿಯಾದಿಂದ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳ ಜತೆಗೆ ಸಣ್ಣ ವಿಮಾನದಲ್ಲಿ ಜಾಲಿ ರೈಡ್​ಗೆಂದು ಹೋಗಿದ್ದರು. ಆಗ ತಾಂತ್ರಿಕ ದೋಷದಿಂದಾಗಿ ವಿಮಾನ ಅಪಘಾತಕ್ಕೀಡಾಗಿತ್ತು, ವಿಮಾನವನ್ನು ಅರಸುತ್ತಾ ಬಂದ ರಕ್ಷಣಾ ಸಿಬ್ಬಂದಿಗೆ ತಾಯಿಯ ಶವ ದೊರೆತಿತ್ತು. ಹಾಗಾದರೆ ಮಕ್ಕಳೇನಾದರು ಎಂದು ಹುಡುಕುತ್ತಿದ್ದಾಗ ಅರ್ಧ ತಿಂದ ಹಣ್ಣು, ಮಗುವಿನ ಹಾಲಿನ ಬಾಟಲಿ, ಚಪ್ಪಲಿಗಳು ಸಿಕ್ಕಿದ್ದವು. ಹಾಗಾಗಿ ಮಕ್ಕಳು ಬದುಕಿರಬಹುದು ಎನ್ನುವ ನಂಬಿಕೆಯೊಂದಿಗೆ ಹುಡುಕಾಟ ಮುಂದುವರೆಸಿದ್ದರು.

ದೊಡ್ಡವನಿಗೆ 13 ವರ್ಷ. ಎರಡನೆಯದ್ದಕ್ಕೆ 9 ವರ್ಷ ,ಮೂರನೆಯದ್ದು 4 ವರ್ಷದ್ದು. ನಾಲ್ಕನೇ ಮಗು ಪಾಪ ಇನ್ನೂ ಒಂದು ವರ್ಷದ ಕಂದಮ್ಮ! ಅವರೆಲ್ಲಿದ್ದಾರೆ ಎಂದು ಮಿಲಿಟರಿ ಶೋಧ ಶುರುಮಾಡುತ್ತದೆ. ಮಕ್ಕಳು ಹುಟಿಟೋ ಕಮ್ಯುನಿಟಿಯವರು. ಹುಟಿಟೋ ಜನರಿಗೆ ಕಾಡೆಂದರೆ ಕ್ಯಾರೇ ಇಲ್ಲ. ಹೀಗಾಗಿ ಮಕ್ಕಳು ಕಾಡಿಗೆ,ಅದರ ಸವಾಲಿಗೆ ಜಗ್ಗುವುದಿಲ್ಲ ಎಂಬುದು ಮಿಲಿಟರಿಯ ವಿಶ್ವಾಸ.

ಮಕ್ಕಳ ಅಜ್ಜಿಯ ಧ್ವನಿ ದಾಖಲಿಸಿ, ಮಕ್ಳೇ ಎಲ್ಲೂ ಹೋಗ್ಬೇಡಿ, ಅಲ್ಲೇ ಇರಿ ಎನ್ನುವ ಕೂಗನ್ನು ದೊಡ್ಡದಾಗಿ ಕಾಡೊಳಗೆ ಹರಿಯಬಿಡುತ್ತಾರೆ. ನಲುವತ್ತು ದಿನಗಳಾದವು. ಈ ಆ ನಾಲ್ಕೂ ಮಕ್ಕಳು ಅಮೆಜಾನ್ ಎಂಬ ದಟ್ಟಡವಿಯೊಳಗೆ ಪತ್ತೆಯಾಗಿದ್ದಾರೆ. ಮಕ್ಕಳ ಜೊತೆ ಇರುವ ಫೋಟೋಗಳನ್ನು ಮಿಲಿಟರಿ ಪ್ರಕಟಿಸಿದೆ.

ಮತ್ತಷ್ಟು ಓದಿ: Amazon Forest: ವಿಮಾನ ಅಪಘಾತವಾಗಿ 1 ತಿಂಗಳಾಯ್ತು, ಅಮೆಜಾನ್​ ಕಾಡಿನಲ್ಲಿ 4 ಮಕ್ಕಳಿಗಾಗಿ ನಿರಂತರ ಹುಡುಕಾಟ, ಬದುಕಿರಬಹುದೆಂಬ ಭರವಸೆ

ಈ ಮಕ್ಕಳು ವಿಮಾನ ಕ್ರಾಶ್ ಆಗಿಯೂ ಬದುಕಿದ್ದಾರೆ, ಅಮೆಜಾನ್ ಕಾಡೊಳಗೆ ನಲುವತ್ತು ದಿನ ಕಳೆದೂ ಬದುಕಿದ್ದಾರೆ. ಅವರೇನು ತಿಂದರೋ ಅದೇನು ಕುಡಿದರೋ? ಆ ಅಡವಿಯ ಮೃಗಗಳೂ ಮಕ್ಕಳತ್ತ ಸುಳಿದಾಡಲಿಲ್ಲ. ಆ ಮೂವರು ಮಕ್ಕಳ ತನ್ನ ಪುಟಾಣಿ ಸಹೋದರನನ್ನು ಕ್ಷೇಮವಾಗಿ ನೋಡಿಕೊಂಡಿದ್ದಾರೆ.

ಬೀಜಗಳು, ಹಣ್ಣುಗಳು, ಬೇರುಗಳು ಮತ್ತು ಸಸ್ಯಗಳನ್ನು ಸಹ ಸೇವಿಸಿದ್ದಾರೆ, ಬಳಲಿಕೆ, ದೈಹಿ ನೋವು, ಕೀಟಗಳಿಂದ ಕಚ್ಚಿಸಿಕೊಂಡಿದ್ದರು, ಇದೆಲ್ಲಕ್ಕೂ ಚಿಕಿತ್ಸೆ ನೀಡಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘