AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine Updates: ಉಕ್ರೇನ್ ದೇಶದ​ ನೆರವಿಗೆ ನಿಂತ ಅಮೆರಿಕ, ಭಾರತದ 219 ವಿದ್ಯಾರ್ಥಿಗಳಿದ್ದ ವಿಮಾನ ಮುಂಬೈಗೆ ಆಗಮನ

ಭಾರತದ 219 ವಿದ್ಯಾರ್ಥಿಗಳಿದ್ದ ವಿಮಾನ ಮುಂಬೈ ತಲುಪಿದೆ. ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ವಿಮಾನ ಮೂಲಕ ಕರೆತರಲಾಗಿದೆ. ರೊಮೇನಿಯಾದ ಬುಕಾರೆಸ್ಟ್​ನಿಂದ ವಿದ್ಯಾರ್ಥಿಗಳ ಶಿಫ್ಟ್‌ ಮಾಡಲಾಗಿದೆ,

Ukraine Updates: ಉಕ್ರೇನ್ ದೇಶದ​ ನೆರವಿಗೆ ನಿಂತ ಅಮೆರಿಕ, ಭಾರತದ 219 ವಿದ್ಯಾರ್ಥಿಗಳಿದ್ದ ವಿಮಾನ ಮುಂಬೈಗೆ ಆಗಮನ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Feb 26, 2022 | 8:25 PM

Share

ಉಕ್ರೇನ್ ದೇಶದ ಮೇಲೆ ರಷ್ಯಾ ಯುದ್ಧ ಸಾರಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಜಾಗತಿಕ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ನಡುವೆ, ದೊಡ್ಡಣ್ಣ ಅಮೆರಿಕವು ಉಕ್ರೇನ್ ದೇಶದ​ ನೆರವಿಗೆ ನಿಂತಿದೆ. ಅಮೆರಿಕವು ಉಕ್ರೇನ್​ಗೆ ₹350 ಮಿಲಿಯನ್ ಮಿಲಿಟರಿ ನೆರವು ನೀಡಿದೆ. ರಷ್ಯಾ ವಿರುದ್ಧ ರಕ್ಷಿಸಿಕೊಳ್ಳಲು ಉಕ್ರೇನ್​ಗೆ US ನೆರವು ನೀಡಿದೆ. ಈ ಬಗ್ಗೆ ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಉಕ್ರೇನ್ ಮುಖ್ಯ ರಸ್ತೆಗಳಲ್ಲಿ ರಷ್ಯಾ ಟ್ಯಾಂಕರ್​ಗಳ ಓಡಾಟ ನಡೆಯುತ್ತಿದೆ. ಕಾರ್‌ಕೀವ್‌ನ ಮುಖ್ಯ ರಸ್ತೆಗಳಲ್ಲಿ ಟ್ಯಾಂಕರ್‌ಗಳ ಆರ್ಭಟ ಕಂಡುಬಂದಿದೆ. ಅಪಾರ್ಟ್​​ಮೆಂಟ್​ ಬಳಿಯೇ ಬಾಂಬ್​​ ಸ್ಫೋಟಗೊಳ್ಳುತ್ತಿದೆ.

ಇತ್ತ, ಭಾರತದ 219 ವಿದ್ಯಾರ್ಥಿಗಳಿದ್ದ ವಿಮಾನ ಮುಂಬೈ ತಲುಪಿದೆ. ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ವಿಮಾನ ಮೂಲಕ ಕರೆತರಲಾಗಿದೆ. ರೊಮೇನಿಯಾದ ಬುಕಾರೆಸ್ಟ್​ನಿಂದ ವಿದ್ಯಾರ್ಥಿಗಳ ಶಿಫ್ಟ್‌ ಮಾಡಲಾಗಿದೆ. ಏರ್​ ಇಂಡಿಯಾ ವಿಮಾನದಲ್ಲಿ ವಿದ್ಯಾರ್ಥಿಗಳ ಸ್ಥಳಾಂತರ ಮಾಡಿದ್ದು, ನಾಳೆ ದೆಹಲಿಗೆ ಎರಡನೇ ವಿಮಾನ ಬರಲಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ಉಕ್ರೇನ್ ಅಧ್ಯಕ್ಷ ಪ್ರಧಾನಿ ಮೋದಿಗೆ ಕರೆ ಮಾಡಿ ಮಾತನಾಡಿದ್ದಾರೆ. ರಷ್ಯಾ ಉಕ್ರೇನ್ ಆಕ್ರಮಿಸಿಕೊಳ್ಳುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಮಾಹಿತಿ ನೀಡಿದ್ದಾರೆ. ಒಂದು ಲಕ್ಷ ರಷ್ಯಾ ಸೈನಿಕರು ಉಕ್ರೇನ್ ನೆಲದಲ್ಲಿದ್ದಾರೆ ಎಂಬ ಮಾಹಿತಿ ನೀಡಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಮಾತನಾಡುವಂತೆ ಉಕ್ರೇನ್ ಅಧ್ಯಕ್ಷ ಬೆಂಬಲ ಕೋರಿದ್ದಾರೆ.

ಉಕ್ರೇನ್​​ನಲ್ಲಿ ಕನ್ನಡಿಗ ವಿದ್ಯಾರ್ಥಿಗಳು ಸಿಲುಕಿದ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದೆ. ವಿದೇಶಾಂಗ ಇಲಾಖೆ ಸಚಿವರು ಸಂಪರ್ಕದಲ್ಲಿದ್ದಾರೆ. ಪೂರ್ವ ಭಾಗದಲ್ಲೇ ವಿದ್ಯಾರ್ಥಿಗಳು ಹೆಚ್ಚಿದ್ದಾರೆ ಅವರನ್ನು ಕರೆತರಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Russia-Ukraine War: ಮದುವೆಯಾದ ಮರುದಿನವೇ ಉಕ್ರೇನ್ ಸೇನೆ ಸೇರಿದ ದಂಪತಿ; ಫೋಟೋಗಳು ವೈರಲ್

ಇದನ್ನೂ ಓದಿ: Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ

Published On - 8:24 pm, Sat, 26 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ