AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine Updates: ಉಕ್ರೇನ್ ದೇಶದ​ ನೆರವಿಗೆ ನಿಂತ ಅಮೆರಿಕ, ಭಾರತದ 219 ವಿದ್ಯಾರ್ಥಿಗಳಿದ್ದ ವಿಮಾನ ಮುಂಬೈಗೆ ಆಗಮನ

ಭಾರತದ 219 ವಿದ್ಯಾರ್ಥಿಗಳಿದ್ದ ವಿಮಾನ ಮುಂಬೈ ತಲುಪಿದೆ. ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ವಿಮಾನ ಮೂಲಕ ಕರೆತರಲಾಗಿದೆ. ರೊಮೇನಿಯಾದ ಬುಕಾರೆಸ್ಟ್​ನಿಂದ ವಿದ್ಯಾರ್ಥಿಗಳ ಶಿಫ್ಟ್‌ ಮಾಡಲಾಗಿದೆ,

Ukraine Updates: ಉಕ್ರೇನ್ ದೇಶದ​ ನೆರವಿಗೆ ನಿಂತ ಅಮೆರಿಕ, ಭಾರತದ 219 ವಿದ್ಯಾರ್ಥಿಗಳಿದ್ದ ವಿಮಾನ ಮುಂಬೈಗೆ ಆಗಮನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 26, 2022 | 8:25 PM

Share

ಉಕ್ರೇನ್ ದೇಶದ ಮೇಲೆ ರಷ್ಯಾ ಯುದ್ಧ ಸಾರಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಜಾಗತಿಕ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ನಡುವೆ, ದೊಡ್ಡಣ್ಣ ಅಮೆರಿಕವು ಉಕ್ರೇನ್ ದೇಶದ​ ನೆರವಿಗೆ ನಿಂತಿದೆ. ಅಮೆರಿಕವು ಉಕ್ರೇನ್​ಗೆ ₹350 ಮಿಲಿಯನ್ ಮಿಲಿಟರಿ ನೆರವು ನೀಡಿದೆ. ರಷ್ಯಾ ವಿರುದ್ಧ ರಕ್ಷಿಸಿಕೊಳ್ಳಲು ಉಕ್ರೇನ್​ಗೆ US ನೆರವು ನೀಡಿದೆ. ಈ ಬಗ್ಗೆ ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಉಕ್ರೇನ್ ಮುಖ್ಯ ರಸ್ತೆಗಳಲ್ಲಿ ರಷ್ಯಾ ಟ್ಯಾಂಕರ್​ಗಳ ಓಡಾಟ ನಡೆಯುತ್ತಿದೆ. ಕಾರ್‌ಕೀವ್‌ನ ಮುಖ್ಯ ರಸ್ತೆಗಳಲ್ಲಿ ಟ್ಯಾಂಕರ್‌ಗಳ ಆರ್ಭಟ ಕಂಡುಬಂದಿದೆ. ಅಪಾರ್ಟ್​​ಮೆಂಟ್​ ಬಳಿಯೇ ಬಾಂಬ್​​ ಸ್ಫೋಟಗೊಳ್ಳುತ್ತಿದೆ.

ಇತ್ತ, ಭಾರತದ 219 ವಿದ್ಯಾರ್ಥಿಗಳಿದ್ದ ವಿಮಾನ ಮುಂಬೈ ತಲುಪಿದೆ. ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ವಿಮಾನ ಮೂಲಕ ಕರೆತರಲಾಗಿದೆ. ರೊಮೇನಿಯಾದ ಬುಕಾರೆಸ್ಟ್​ನಿಂದ ವಿದ್ಯಾರ್ಥಿಗಳ ಶಿಫ್ಟ್‌ ಮಾಡಲಾಗಿದೆ. ಏರ್​ ಇಂಡಿಯಾ ವಿಮಾನದಲ್ಲಿ ವಿದ್ಯಾರ್ಥಿಗಳ ಸ್ಥಳಾಂತರ ಮಾಡಿದ್ದು, ನಾಳೆ ದೆಹಲಿಗೆ ಎರಡನೇ ವಿಮಾನ ಬರಲಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ಉಕ್ರೇನ್ ಅಧ್ಯಕ್ಷ ಪ್ರಧಾನಿ ಮೋದಿಗೆ ಕರೆ ಮಾಡಿ ಮಾತನಾಡಿದ್ದಾರೆ. ರಷ್ಯಾ ಉಕ್ರೇನ್ ಆಕ್ರಮಿಸಿಕೊಳ್ಳುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಮಾಹಿತಿ ನೀಡಿದ್ದಾರೆ. ಒಂದು ಲಕ್ಷ ರಷ್ಯಾ ಸೈನಿಕರು ಉಕ್ರೇನ್ ನೆಲದಲ್ಲಿದ್ದಾರೆ ಎಂಬ ಮಾಹಿತಿ ನೀಡಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಮಾತನಾಡುವಂತೆ ಉಕ್ರೇನ್ ಅಧ್ಯಕ್ಷ ಬೆಂಬಲ ಕೋರಿದ್ದಾರೆ.

ಉಕ್ರೇನ್​​ನಲ್ಲಿ ಕನ್ನಡಿಗ ವಿದ್ಯಾರ್ಥಿಗಳು ಸಿಲುಕಿದ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದೆ. ವಿದೇಶಾಂಗ ಇಲಾಖೆ ಸಚಿವರು ಸಂಪರ್ಕದಲ್ಲಿದ್ದಾರೆ. ಪೂರ್ವ ಭಾಗದಲ್ಲೇ ವಿದ್ಯಾರ್ಥಿಗಳು ಹೆಚ್ಚಿದ್ದಾರೆ ಅವರನ್ನು ಕರೆತರಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Russia-Ukraine War: ಮದುವೆಯಾದ ಮರುದಿನವೇ ಉಕ್ರೇನ್ ಸೇನೆ ಸೇರಿದ ದಂಪತಿ; ಫೋಟೋಗಳು ವೈರಲ್

ಇದನ್ನೂ ಓದಿ: Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ

Published On - 8:24 pm, Sat, 26 February 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು