AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

America Shootout: ಭಾರತೀಯ ಮೂಲದ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ

ಅಮೆರಿಕದಲ್ಲಿ ಶೂಟೌಟ್​​ ಪ್ರಕರಣಗಳು ಮುಂದುವರೆದಿದ್ದು, ಫಿಲಡೆಲ್ಫಿಯಾದಲ್ಲಿ ದರೋಡೆಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ.

America Shootout: ಭಾರತೀಯ ಮೂಲದ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: May 30, 2023 | 7:28 AM

Share

ವಾಷಿಂಗ್ಟನ್ ಡಿಸಿ: ಅಮೆರಿಕದಲ್ಲಿ (America) ಶೂಟೌಟ್​​ (Shootout) ಪ್ರಕರಣಗಳು ಮುಂದುವರೆದಿದ್ದು, ಫಿಲಡೆಲ್ಫಿಯಾದಲ್ಲಿ (Philadelphia) ದರೋಡೆಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಜುಡೆ ಚಾಕೋ (21) ಸಾವನ್ನಪ್ಪಿದ್ದಾರೆ. ದರೋಡೆಕೋರರು ವಿದ್ಯಾರ್ಥಿ ಜುಡೆ ಚಾಕೋರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದರು. ಇದಕ್ಕೆ ವಿದ್ಯಾರ್ಥಿ ಜುಡೆ ಚಾಕೋ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರು ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ವಿದ್ಯಾರ್ಥಿ ಜುಡೆ ಚಾಕೋ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತ ವಿದ್ಯಾರ್ಥಿಯ ಪೋಷಕರು ಕೇರಳದ ಕೊಲ್ಲಂ ಜಿಲ್ಲೆ ನಿವಾಸಿಗಳು ಎಂದು ತಿಳಿದುಬಂದಿದ್ದು, 30 ವರ್ಷಗಳ ಹಿಂದೆ ಕೇರಳದಿಂದ ಅಮೆರಿಕಕ್ಕೆ ಬಂದು ನೆಲೆಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: Thomas Lee: ತನ್ನ ಕಚೇರಿಯಲ್ಲಿ ಶೂಟೌಟ್ ಮಾಡಿಕೊಂಡ ಜಗತ್ತಿನ ಬಿಲಿಯನೇರ್ ಥಾಮಸ್ ಲೀ

ಹೈದ್ರಾಬಾದ್ ಮೂಲದ ಮಹಿಳೆ ಸಾವು

ಇದೇ ತಿಂಗಳು ದಿನಾಂಕ 7 ರಂದು ಅಮೆರಿಕಾದ ದಲ್ಲಾಸ್​ನಲ್ಲಿ ನಡೆದ ಶೂಟೌಟ್​ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದರು. ದಲ್ಲಾಸ್​ನ ಮಾಲ್​ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ ಎಂದು ವರದಿಯಾಗಿತ್ತು.

ಖಾಸಗಿ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ ತಾಟಿಕೊಂಡ ಹೈದರಾಬಾದ್‌ನ ಸರೂರ್‌ನಗರ ನಿವಾಸಿಯಾಗಿದ್ದು, ಭಾರತದಿಂದ ಅಮೆರಿಕಕ್ಕೆ ತೆರಳಿದ್ದರು. 27 ವರ್ಷದ ತಾಟಿಕೊಂಡ ದಲ್ಲಾಸ್ ಹೊರವಲಯ ಅಲ್ಲೆನ್ ಪ್ರೀಮಿಯಂನ ಮಳಿಗೆಯೊಂದರಲ್ಲಿ ಶಾಫಿಂಗ್ ಮಾಡುತ್ತಿದ್ದಾಗ ಬಂದೂಕುದಾರಿ ಗುಂಡಿನ ದಾಳಿ ನಡೆಸಿದ್ದನು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ