AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

America Shootout: ಭಾರತೀಯ ಮೂಲದ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ

ಅಮೆರಿಕದಲ್ಲಿ ಶೂಟೌಟ್​​ ಪ್ರಕರಣಗಳು ಮುಂದುವರೆದಿದ್ದು, ಫಿಲಡೆಲ್ಫಿಯಾದಲ್ಲಿ ದರೋಡೆಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ.

America Shootout: ಭಾರತೀಯ ಮೂಲದ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: May 30, 2023 | 7:28 AM

Share

ವಾಷಿಂಗ್ಟನ್ ಡಿಸಿ: ಅಮೆರಿಕದಲ್ಲಿ (America) ಶೂಟೌಟ್​​ (Shootout) ಪ್ರಕರಣಗಳು ಮುಂದುವರೆದಿದ್ದು, ಫಿಲಡೆಲ್ಫಿಯಾದಲ್ಲಿ (Philadelphia) ದರೋಡೆಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಜುಡೆ ಚಾಕೋ (21) ಸಾವನ್ನಪ್ಪಿದ್ದಾರೆ. ದರೋಡೆಕೋರರು ವಿದ್ಯಾರ್ಥಿ ಜುಡೆ ಚಾಕೋರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದರು. ಇದಕ್ಕೆ ವಿದ್ಯಾರ್ಥಿ ಜುಡೆ ಚಾಕೋ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರು ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ವಿದ್ಯಾರ್ಥಿ ಜುಡೆ ಚಾಕೋ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತ ವಿದ್ಯಾರ್ಥಿಯ ಪೋಷಕರು ಕೇರಳದ ಕೊಲ್ಲಂ ಜಿಲ್ಲೆ ನಿವಾಸಿಗಳು ಎಂದು ತಿಳಿದುಬಂದಿದ್ದು, 30 ವರ್ಷಗಳ ಹಿಂದೆ ಕೇರಳದಿಂದ ಅಮೆರಿಕಕ್ಕೆ ಬಂದು ನೆಲೆಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: Thomas Lee: ತನ್ನ ಕಚೇರಿಯಲ್ಲಿ ಶೂಟೌಟ್ ಮಾಡಿಕೊಂಡ ಜಗತ್ತಿನ ಬಿಲಿಯನೇರ್ ಥಾಮಸ್ ಲೀ

ಹೈದ್ರಾಬಾದ್ ಮೂಲದ ಮಹಿಳೆ ಸಾವು

ಇದೇ ತಿಂಗಳು ದಿನಾಂಕ 7 ರಂದು ಅಮೆರಿಕಾದ ದಲ್ಲಾಸ್​ನಲ್ಲಿ ನಡೆದ ಶೂಟೌಟ್​ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದರು. ದಲ್ಲಾಸ್​ನ ಮಾಲ್​ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ ಎಂದು ವರದಿಯಾಗಿತ್ತು.

ಖಾಸಗಿ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ ತಾಟಿಕೊಂಡ ಹೈದರಾಬಾದ್‌ನ ಸರೂರ್‌ನಗರ ನಿವಾಸಿಯಾಗಿದ್ದು, ಭಾರತದಿಂದ ಅಮೆರಿಕಕ್ಕೆ ತೆರಳಿದ್ದರು. 27 ವರ್ಷದ ತಾಟಿಕೊಂಡ ದಲ್ಲಾಸ್ ಹೊರವಲಯ ಅಲ್ಲೆನ್ ಪ್ರೀಮಿಯಂನ ಮಳಿಗೆಯೊಂದರಲ್ಲಿ ಶಾಫಿಂಗ್ ಮಾಡುತ್ತಿದ್ದಾಗ ಬಂದೂಕುದಾರಿ ಗುಂಡಿನ ದಾಳಿ ನಡೆಸಿದ್ದನು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!