AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಜೋ ಬೈಡೆನ್; ವೈಟ್​ಹೌಸ್​ನಲ್ಲಿ ದೀಪಾವಳಿ ಆಚರಣೆ

Deepavali 2021: ಹಿಂದೂ, ಸಿಖ್ಖ್, ಜೈನ್ ಮತ್ತು ಬೌದ್ಧ ಧರ್ಮದವರಿಗೆ, ಅಮೆರಿಕಾದಲ್ಲಿ ಹಾಗೂ ವಿಶ್ವದಾದ್ಯಂತ ದೀಪಾವಳಿ ಹಬ್ಬ ಆಚರಿಸುತ್ತಿರುವ ಎಲ್ಲರಿಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಜೋ ಬೈಡೆನ್ ದಂಪತಿ ಶುಭಹಾರೈಸಿದ್ದಾರೆ.

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಜೋ ಬೈಡೆನ್; ವೈಟ್​ಹೌಸ್​ನಲ್ಲಿ ದೀಪಾವಳಿ ಆಚರಣೆ
TV9 Web
| Edited By: |

Updated on:Nov 04, 2021 | 9:25 PM

Share

ನ್ಯೂಯಾರ್ಕ್: ದೀಪಾವಳಿ ಹಬ್ಬದ ಪ್ರಯುಕ್ತ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್​ ಶುಭಾಶಯ ಕೋರಿದ್ದಾರೆ. ಅಮೆರಿಕಾದ ವೈಟ್ ​ಹೌಸ್​ನಲ್ಲಿ ಬೈಡೆನ್​ ದಂಪತಿ ದೀಪಾವಳಿ ಆಚರಿಸಿದ್ದಾರೆ. ಕತ್ತಲೆ ಬಳಿಕ ಜ್ಞಾನ, ಬುದ್ಧಿವಂತಿಕೆ, ಸತ್ಯವಿದೆ ಎಂಬುದನ್ನು ದೀಪಾವಳಿಯ ಬೆಳಕು ನಮಗೆ ನೆನಪಿಸಲಿ. ಹತಾಶೆಯ ನಂತರ ಭರವಸೆ ಮತ್ತು ವಿವಿಧತೆಯಲ್ಲಿ ಏಕತೆ ಇದೆ ಎಂದು ತಿಳಿಯಲಿ. ದೀಪಾವಳಿ ಹಬ್ಬ ಆಚರಿಸುತ್ತಿರುವವರಿಗೆ ಶುಭಾಶಯಗಳು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶುಭಹಾರೈಸಿದ್ದಾರೆ.

ಹಿಂದೂ, ಸಿಖ್ಖ್, ಜೈನ್ ಮತ್ತು ಬೌದ್ಧ ಧರ್ಮದವರಿಗೆ, ಅಮೆರಿಕಾದಲ್ಲಿ ಹಾಗೂ ವಿಶ್ವದಾದ್ಯಂತ ದೀಪಾವಳಿ ಹಬ್ಬ ಆಚರಿಸುತ್ತಿರುವ ಎಲ್ಲರಿಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಜೋ ಬೈಡೆನ್ ದಂಪತಿ ಶುಭಹಾರೈಸಿದ್ದಾರೆ. ವೈಟ್​ ಹೌಸ್​ನಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ದೀಪಾವಳಿ ಹಬ್ಬವನ್ನು ಭಾರತ ದೇಶಾದ್ಯಂತ ಮಾತ್ರವಲ್ಲದೆ ವಿಶ್ವದ ವಿವಿಧ ಭಾಗಗಳಲ್ಲಿ ಆಚರಿಸಲಾಗುತ್ತದೆ. ಜಾತಿ, ಮತ, ಪಂತಗಳ ಭೇದವಿಲ್ಲದೆ ಎಲ್ಲರೂ ಬೆಳಕಿನ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ನರಕ ಚತುರ್ದಶಿ, ಲಕ್ಷ್ಮೀ ಪೂಜೆ, ಗೋಪೂಜೆ, ಬಲಿಪಾಡ್ಯಮಿ ಮುಂತಾದ ಸಂಪ್ರದಾಯಗಳೊಂದಿಗೆ ಸಂಭ್ರಮದಿಂದ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ.

ಭಾರತ ಮಾತ್ರವಲ್ಲ ವಿಶ್ವದ ವಿವಿಧ ಭಾಗಗಳಲ್ಲಿ ದೀಪಾವಳಿಯನ್ನು ಆಚರಣೆ ಮಾಡಲಾಗುತ್ತದೆ. ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು ಯಾವ ಹಬ್ಬವನ್ನು ಬಿಟ್ಟರೂ ದೀಪಾವಳಿಯನ್ನು ಆಚರಣೆ ಮಾಡದೆ ಉಳಿಯರು. ಅಂತಹ ವಿಶೇಷ ಹಬ್ಬವನ್ನು ಅಮೆರಿಕಾದ ವೈಟ್​ಹೌಸ್​ನಲ್ಲಿ ಕೂಡ ಆಚರಣೆ ಮಾಡಲಾಗುತ್ತದೆ. ಅಮೆರಿಕಾ ಅಧ್ಯಕ್ಷರು ದೀಪಾವಳಿ ಶುಭಕೋರುತ್ತಾರೆ. ಇಂದು (ನವೆಂಬರ್ 4) ಜೋ ಬೈಡೆನ್ ದೀಪಾವಳಿ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: Diwali 2021 Astrology: ದೀಪಾವಳಿಗೆ ಮೇಷದಿಂದ ಮೀನದ ತನಕ ದ್ವಾದಶ ರಾಶಿಗಳ ಹಣಕಾಸು ವರ್ಷ ಭವಿಷ್ಯ

ಇದನ್ನೂ ಓದಿ: ದೀಪಾವಳಿ ಪ್ರಯುಕ್ತ ಕಾಶ್ಮೀರದ ಗಡಿಯಲ್ಲಿ ಸಿಹಿ ಹಂಚಿಕೊಂಡ ಭಾರತ- ಪಾಕಿಸ್ತಾನ ಸೈನಿಕರು

Published On - 9:15 pm, Thu, 4 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ