AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ದಾಳಿಯಲ್ಲಿ 6 ತಿಂಗಳ ಮಗು, ತಾಯಿ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jan 17, 2023 | 6:54 AM

ವಾಷಿಂಗ್ಟನ್ ಡಿಸಿ: ಅಮೆರಿಕಾದ ಮಧ್ಯ ಕ್ಯಾಲಿಫೋರ್ನಿಯಾದ ಗೋಶೆನ್​ನ ಮನೆಯೊಂದರಲ್ಲಿ ಸೋಮವಾರ ಮುಂಜಾನೆ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ 6 ತಿಂಗಳ ಮಗು, ತಾಯಿ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶಂಕಿತ ಇಬ್ಬರು ಹಂತಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಟ್ಯುಲೇರ್ ಕೌಂಟಿಯ ಶೆರಿಫ್ ಕಚೇರಿಯ ಶೆರಿಫ್ ಮೈಕ್ ಬೌಡ್ರೆಕ್ಸ್, ಕ್ಯಾಲಿಫೋರ್ನಿಯಾದ ಗೋಶೆನ್ ಎಂಬಲ್ಲಿ ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯ ಮೇಲೆ ದಾಳಿ ನಡೆಸಿ, ಗುಂಡು ಹಾರಿಸಿದ್ದಾರೆ. ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 7 ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಬಂದು ಪರಿಶೀಲನೆ ನಡೆಸಿದ್ದಾರೆ. 17 ವರ್ಷದ ತಾಯಿ ಮತ್ತು(ಅವಳ) ಆರು ತಿಂಗಳ ಮಗುವಿನ ತಲೆಗೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ:Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ 

ವರದಿಯ ಪ್ರಕಾರ, ಇಬ್ಬರು ಬೀದಿಯಲ್ಲಿ ಗುಂಡಿನ ದಾಳಿಗೆ ಪ್ರಾಯ ಕಳೆದುಕೊಂಡಿದ್ದು ಮೂರನೇ ವ್ಯಕ್ತಿ ತನ್ನ ನಿವಾಸದ ದ್ವಾರದಲ್ಲಿ ಪ್ರಾಣ ಬಿಟ್ಟಿದ್ದಾನೆ. ಇನ್ನೂ ಮೂವರು ಮನೆಯೊಳಗೆ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅದರಲ್ಲಿ ಒಬ್ಬ ವ್ಯಕ್ತಿ ಉಸಿರಾಡುತ್ತಿದ್ದು ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ದಾಳಿಯ ಹಿಂದೆ ಡ್ರಗ್ಸ್‌ ವಿಚಾರವಿದ್ದು ಶೆರಿಫ್ ಕಚೇರಿಯು ಕಳೆದ ವಾರ ನಿವಾಸದಲ್ಲಿ ಮಾದಕ ದ್ರವ್ಯ-ಸಂಬಂಧಿತ ದಾಳಿ ನಡೆಸಿತು ಅದರ ಪ್ರತಿಯಾಗಿ ಇಬ್ಬರು ಮುಸುಕುಧಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ  ಕ್ಲಿಕ್ ಮಾಡಿ

Published On - 6:54 am, Tue, 17 January 23

ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ