AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ವೈಟ್​ಹೌಸ್​ ಬಳಿ ತಡೆಗೋಡೆಗೆ ಟ್ರಕ್​ ಡಿಕ್ಕಿ, ಪತ್ತೆಯಾಯ್ತು ನಾಜಿ ಫ್ಲ್ಯಾಗ್, ಜೋ ಬೈಡನ್​ ಹತ್ಯೆಗೆ ಸಂಚು ನಡೆದಿತ್ತಾ?

ಅಮೆರಿಕದ ಶ್ವೇತಭವನದ ಮೈದಾನದ ಪಕ್ಕದಲ್ಲಿರುವ ಭದ್ರತಾ ತಡೆಗೋಡೆಗಳಿಗೆ ಟ್ರಕ್​ ಒಂದು ಡಿಕ್ಕಿ ಹೊಡೆದಿದ್ದು, ಚಾಲಕನನ್ನು ಬಂಧಿಸಲಾಗಿದೆ. ಟ್ರಕ್​ನಲ್ಲಿ ನಾಜಿಯ ಫ್ಲ್ಯಾಗ್​ ಕಂಡುಬಂದಿದೆ.

ಅಮೆರಿಕದ ವೈಟ್​ಹೌಸ್​ ಬಳಿ ತಡೆಗೋಡೆಗೆ ಟ್ರಕ್​ ಡಿಕ್ಕಿ, ಪತ್ತೆಯಾಯ್ತು ನಾಜಿ ಫ್ಲ್ಯಾಗ್, ಜೋ ಬೈಡನ್​ ಹತ್ಯೆಗೆ ಸಂಚು ನಡೆದಿತ್ತಾ?
ಟ್ರಕ್ ಅಪಘಾತ
ನಯನಾ ರಾಜೀವ್
|

Updated on: May 24, 2023 | 7:59 AM

Share

ಅಮೆರಿಕದ ಶ್ವೇತಭವನದ ಮೈದಾನದ ಪಕ್ಕದಲ್ಲಿರುವ ಭದ್ರತಾ ತಡೆಗೋಡೆಗಳಿಗೆ ಟ್ರಕ್​ ಒಂದು ಡಿಕ್ಕಿ ಹೊಡೆದಿದ್ದು, ಚಾಲಕನನ್ನು ಬಂಧಿಸಲಾಗಿದೆ. ಟ್ರಕ್​ನಲ್ಲಿ ನಾಜಿಯ ಫ್ಲ್ಯಾಗ್​ ಕಂಡುಬಂದಿದೆ. ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್(Joe Biden) ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಹೊರಿಸಲಾಗಿದೆ.

ವಾಹನದ ಚಾಲಕನನ್ನು ಮಿಸೌರಿಯ ಚೆಸ್ಟರ್‌ಫೀಲ್ಡ್‌ನ ಸಾಯಿ ವರ್ಷಿತ್ ಕಂದುಲಾ (19) ಎಂದು ಗುರುತಿಸಲಾಗಿದೆ. ಹತ್ತಿರದ ಹೋಟೆಲ್​ನಲ್ಲಿರುವ ಜನರನ್ನು ಅಪಘಾತದ ನಂತರ ಸ್ಥಳಾಂತರಿಸಲಾಯಿತು.

ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ, ಉದ್ಯಾನದ ಸುತ್ತಲಿನ ಕೆಲವು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳನ್ನು ಮುಚ್ಚಲಾಗಿದೆ ತನಿಖೆ ಪ್ರಗತಿಯಲ್ಲಿದೆ.

ಮತ್ತಷ್ಟು ಓದಿ: Ukraine: ಕೊನೆಗೂ ಯುದ್ಧ ಭೂಮಿ ಉಕ್ರೇನ್​ಗೆ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, 500 ಮಿಲಿಯನ್ ಡಾಲರ್ ಶಸ್ತ್ರಾಸ್ತ್ರ ಸಹಾಯ

ವಾಷಿಂಗ್ಟನ್‌ನಲ್ಲಿ ವಾಸಿಸುವ 25 ವರ್ಷದ ಪೈಲಟ್ ಝಬೋಜಿ, ಲಫಯೆಟ್ಟೆ ಸ್ಕ್ವೇರ್‌ನ ಹತ್ತಿರ ಜಾಗಿಂಗ್ ಮಾಡುತ್ತಿದ್ದಾಗ ಅಪಘಾತದ ಶಬ್ದ ಕೇಳಿದ್ದರು. ಬಳಿಕ ಅಪಘಾತವನ್ನು ತಮ್ಮ ಫೋನ್​ನಲ್ಲಿ ಸೆರೆಹಿಡಿದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್