AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ವೈಟ್​ಹೌಸ್​ ಬಳಿ ತಡೆಗೋಡೆಗೆ ಟ್ರಕ್​ ಡಿಕ್ಕಿ, ಪತ್ತೆಯಾಯ್ತು ನಾಜಿ ಫ್ಲ್ಯಾಗ್, ಜೋ ಬೈಡನ್​ ಹತ್ಯೆಗೆ ಸಂಚು ನಡೆದಿತ್ತಾ?

ಅಮೆರಿಕದ ಶ್ವೇತಭವನದ ಮೈದಾನದ ಪಕ್ಕದಲ್ಲಿರುವ ಭದ್ರತಾ ತಡೆಗೋಡೆಗಳಿಗೆ ಟ್ರಕ್​ ಒಂದು ಡಿಕ್ಕಿ ಹೊಡೆದಿದ್ದು, ಚಾಲಕನನ್ನು ಬಂಧಿಸಲಾಗಿದೆ. ಟ್ರಕ್​ನಲ್ಲಿ ನಾಜಿಯ ಫ್ಲ್ಯಾಗ್​ ಕಂಡುಬಂದಿದೆ.

ಅಮೆರಿಕದ ವೈಟ್​ಹೌಸ್​ ಬಳಿ ತಡೆಗೋಡೆಗೆ ಟ್ರಕ್​ ಡಿಕ್ಕಿ, ಪತ್ತೆಯಾಯ್ತು ನಾಜಿ ಫ್ಲ್ಯಾಗ್, ಜೋ ಬೈಡನ್​ ಹತ್ಯೆಗೆ ಸಂಚು ನಡೆದಿತ್ತಾ?
ಟ್ರಕ್ ಅಪಘಾತ
ನಯನಾ ರಾಜೀವ್
|

Updated on: May 24, 2023 | 7:59 AM

Share

ಅಮೆರಿಕದ ಶ್ವೇತಭವನದ ಮೈದಾನದ ಪಕ್ಕದಲ್ಲಿರುವ ಭದ್ರತಾ ತಡೆಗೋಡೆಗಳಿಗೆ ಟ್ರಕ್​ ಒಂದು ಡಿಕ್ಕಿ ಹೊಡೆದಿದ್ದು, ಚಾಲಕನನ್ನು ಬಂಧಿಸಲಾಗಿದೆ. ಟ್ರಕ್​ನಲ್ಲಿ ನಾಜಿಯ ಫ್ಲ್ಯಾಗ್​ ಕಂಡುಬಂದಿದೆ. ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್(Joe Biden) ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಹೊರಿಸಲಾಗಿದೆ.

ವಾಹನದ ಚಾಲಕನನ್ನು ಮಿಸೌರಿಯ ಚೆಸ್ಟರ್‌ಫೀಲ್ಡ್‌ನ ಸಾಯಿ ವರ್ಷಿತ್ ಕಂದುಲಾ (19) ಎಂದು ಗುರುತಿಸಲಾಗಿದೆ. ಹತ್ತಿರದ ಹೋಟೆಲ್​ನಲ್ಲಿರುವ ಜನರನ್ನು ಅಪಘಾತದ ನಂತರ ಸ್ಥಳಾಂತರಿಸಲಾಯಿತು.

ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ, ಉದ್ಯಾನದ ಸುತ್ತಲಿನ ಕೆಲವು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳನ್ನು ಮುಚ್ಚಲಾಗಿದೆ ತನಿಖೆ ಪ್ರಗತಿಯಲ್ಲಿದೆ.

ಮತ್ತಷ್ಟು ಓದಿ: Ukraine: ಕೊನೆಗೂ ಯುದ್ಧ ಭೂಮಿ ಉಕ್ರೇನ್​ಗೆ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, 500 ಮಿಲಿಯನ್ ಡಾಲರ್ ಶಸ್ತ್ರಾಸ್ತ್ರ ಸಹಾಯ

ವಾಷಿಂಗ್ಟನ್‌ನಲ್ಲಿ ವಾಸಿಸುವ 25 ವರ್ಷದ ಪೈಲಟ್ ಝಬೋಜಿ, ಲಫಯೆಟ್ಟೆ ಸ್ಕ್ವೇರ್‌ನ ಹತ್ತಿರ ಜಾಗಿಂಗ್ ಮಾಡುತ್ತಿದ್ದಾಗ ಅಪಘಾತದ ಶಬ್ದ ಕೇಳಿದ್ದರು. ಬಳಿಕ ಅಪಘಾತವನ್ನು ತಮ್ಮ ಫೋನ್​ನಲ್ಲಿ ಸೆರೆಹಿಡಿದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್