AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರವನ್ನು ಇಂದಲ್ಲ ನಾಳೆ ಅಮೆರಿಕ ಗುರುತಿಸಲೇ ಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಹೇಳಿದ ಇನ್ನಷ್ಟು ಸಂಗತಿ ಈ ವರದಿಯಲ್ಲಿದೆ.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್
ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 03, 2021 | 12:49 AM

Share

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರದ ಪರವಾಗಿ ಮಾತನಾಡುವುದನ್ನು ಪಾಕಿಸ್ತಾನ ಮುಂದುವರಿಸಿದೆ. ತಾಲಿಬಾನ್​ ನೇತೃತ್ವದ ಸರ್ಕಾರವನ್ನು ಈಗಲ್ಲದಿದ್ದರೂ ಮುಂದೆಯಾದರೂ ಅಮೆರಿಕಾ ಒಪ್ಪಿಕೊಳ್ಳಲೇಬೇಕು ಎಂದು ಪಾಕ್​ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಟಿಆರ್​ಟಿ ವರ್ಲ್ಡ್ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವೊಂದು ಏಕಪಕ್ಷೀಯವಾಗಿ ತಾಲಿಬಾನ್​ ಸರ್ಕಾರವನ್ನು ಗುರುತಿಸುವ ಮೂಲಕ ಏನೂ ಬದಲಾವಣೆ ಆಗಲ್ಲ. ಅಮೆರಿಕ, ಯುರೋಪ್, ಚೀನಾ ಮತ್ತು ರಷ್ಯಾ ಕೂಡ ಆದ್ಯತೆಯ ಮೇಲೆ ಗುರುತಿಸಬೇಕಾಗುತ್ತದೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ. “ನೆರೆ ರಾಷ್ಟ್ರಗಳ ಜತೆ ಪಾಕಿಸ್ತಾನವು ಈ ಸಂಬಂಧವಾಗಿ ಮಾತುಕತೆ ನಡೆಸುತ್ತಿದೆ ಮತ್ತು ಭೇಟಿಯ ನಂತರ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು,” ಎಂದು ಖಾನ್ ಹೇಳಿರುವುದಾಗಿ ವರದಿಯಾಗಿದೆ.

ತಾಲಿಬಾನ್​ನಿಂದ ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಂಡ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಬೂಲ್ ವಶಕ್ಕೆ ಪಡೆಯುವಾಗ ಹರಿದ ರಕ್ತದಿಂದ ನಾವು ಗಾಬರಿ ಆಗಿದ್ದೆವು ಮತ್ತು ಶಾಂತಿಯುತವಾದ ಅಧಿಕಾರ ಹಸ್ತಾಂತರ ಅನಿರೀಕ್ಷಿತವಾದದ್ದು ಎಂದು ಇಮ್ರಾನ್​ ಖಾನ್ ಹೇಳಿದ್ದಾರೆ. ಅಂತರರಾಷ್ಟ್ರೀಯ ಸಮುದಾಯವು ಅಫ್ಘಾನಿಸ್ತಾನ ಸರ್ಕಾರಕ್ಕೆ ನೆರವು ಒದಗಿಸಬೇಕು. ಏಕೆಂದರೆ ಆ ದೇಶ ಬಹುತೇಕ ವಿದೇಶೀ ಹಣಕಾಸಿನ ನೆರವಿನ ಮೇಲೆ ಅವಲಂಬಿತ ಆಗಿದೆ ಎಂದು ಹೇಳಿದ್ದಾರೆ.

“ಒಂದು ವೇಳೆ ಅಂತರರಾಷ್ಟ್ರೀಯ ಸಮುದಾಯವು ಆಫ್ಘನ್ ಜನರ ನೆರವಿಗೆ ಮುಂದೆ ಬಾರದಿದ್ದಲ್ಲಿ ಮಾನವೀಯ ಬಿಕ್ಕಟ್ಟು ಉದ್ಭವಿಸಲಿದೆ,” ಎಂದು ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಪಾಕಿಸ್ತಾನವು ತಾಲಿಬಾನ್ ಅನ್ನು ಬಹಿರಂಗವಾಗಿ ಮತ್ತು ರಹಸ್ಯವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಇದನ್ನೂ ಓದಿ: Geopolitics: ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ 6 ದೇಶಗಳಿಗೆ ಆಹ್ವಾನ, ಅಫ್ಘಾನಿಸ್ತಾನದ ಭವಿಷ್ಯದ ಮೇಲೆ ಪ್ರಭಾವಿ ದೇಶಗಳ ನೆರಳು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು