AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರವನ್ನು ಇಂದಲ್ಲ ನಾಳೆ ಅಮೆರಿಕ ಗುರುತಿಸಲೇ ಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಹೇಳಿದ ಇನ್ನಷ್ಟು ಸಂಗತಿ ಈ ವರದಿಯಲ್ಲಿದೆ.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್
ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (ಸಂಗ್ರಹ ಚಿತ್ರ)
TV9 Web
| Updated By: Srinivas Mata|

Updated on: Oct 03, 2021 | 12:49 AM

Share

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರದ ಪರವಾಗಿ ಮಾತನಾಡುವುದನ್ನು ಪಾಕಿಸ್ತಾನ ಮುಂದುವರಿಸಿದೆ. ತಾಲಿಬಾನ್​ ನೇತೃತ್ವದ ಸರ್ಕಾರವನ್ನು ಈಗಲ್ಲದಿದ್ದರೂ ಮುಂದೆಯಾದರೂ ಅಮೆರಿಕಾ ಒಪ್ಪಿಕೊಳ್ಳಲೇಬೇಕು ಎಂದು ಪಾಕ್​ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಟಿಆರ್​ಟಿ ವರ್ಲ್ಡ್ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವೊಂದು ಏಕಪಕ್ಷೀಯವಾಗಿ ತಾಲಿಬಾನ್​ ಸರ್ಕಾರವನ್ನು ಗುರುತಿಸುವ ಮೂಲಕ ಏನೂ ಬದಲಾವಣೆ ಆಗಲ್ಲ. ಅಮೆರಿಕ, ಯುರೋಪ್, ಚೀನಾ ಮತ್ತು ರಷ್ಯಾ ಕೂಡ ಆದ್ಯತೆಯ ಮೇಲೆ ಗುರುತಿಸಬೇಕಾಗುತ್ತದೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ. “ನೆರೆ ರಾಷ್ಟ್ರಗಳ ಜತೆ ಪಾಕಿಸ್ತಾನವು ಈ ಸಂಬಂಧವಾಗಿ ಮಾತುಕತೆ ನಡೆಸುತ್ತಿದೆ ಮತ್ತು ಭೇಟಿಯ ನಂತರ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು,” ಎಂದು ಖಾನ್ ಹೇಳಿರುವುದಾಗಿ ವರದಿಯಾಗಿದೆ.

ತಾಲಿಬಾನ್​ನಿಂದ ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಂಡ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಬೂಲ್ ವಶಕ್ಕೆ ಪಡೆಯುವಾಗ ಹರಿದ ರಕ್ತದಿಂದ ನಾವು ಗಾಬರಿ ಆಗಿದ್ದೆವು ಮತ್ತು ಶಾಂತಿಯುತವಾದ ಅಧಿಕಾರ ಹಸ್ತಾಂತರ ಅನಿರೀಕ್ಷಿತವಾದದ್ದು ಎಂದು ಇಮ್ರಾನ್​ ಖಾನ್ ಹೇಳಿದ್ದಾರೆ. ಅಂತರರಾಷ್ಟ್ರೀಯ ಸಮುದಾಯವು ಅಫ್ಘಾನಿಸ್ತಾನ ಸರ್ಕಾರಕ್ಕೆ ನೆರವು ಒದಗಿಸಬೇಕು. ಏಕೆಂದರೆ ಆ ದೇಶ ಬಹುತೇಕ ವಿದೇಶೀ ಹಣಕಾಸಿನ ನೆರವಿನ ಮೇಲೆ ಅವಲಂಬಿತ ಆಗಿದೆ ಎಂದು ಹೇಳಿದ್ದಾರೆ.

“ಒಂದು ವೇಳೆ ಅಂತರರಾಷ್ಟ್ರೀಯ ಸಮುದಾಯವು ಆಫ್ಘನ್ ಜನರ ನೆರವಿಗೆ ಮುಂದೆ ಬಾರದಿದ್ದಲ್ಲಿ ಮಾನವೀಯ ಬಿಕ್ಕಟ್ಟು ಉದ್ಭವಿಸಲಿದೆ,” ಎಂದು ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಪಾಕಿಸ್ತಾನವು ತಾಲಿಬಾನ್ ಅನ್ನು ಬಹಿರಂಗವಾಗಿ ಮತ್ತು ರಹಸ್ಯವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಇದನ್ನೂ ಓದಿ: Geopolitics: ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ 6 ದೇಶಗಳಿಗೆ ಆಹ್ವಾನ, ಅಫ್ಘಾನಿಸ್ತಾನದ ಭವಿಷ್ಯದ ಮೇಲೆ ಪ್ರಭಾವಿ ದೇಶಗಳ ನೆರಳು

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ