AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರವನ್ನು ಇಂದಲ್ಲ ನಾಳೆ ಅಮೆರಿಕ ಗುರುತಿಸಲೇ ಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಹೇಳಿದ ಇನ್ನಷ್ಟು ಸಂಗತಿ ಈ ವರದಿಯಲ್ಲಿದೆ.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್
ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 03, 2021 | 12:49 AM

Share

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರದ ಪರವಾಗಿ ಮಾತನಾಡುವುದನ್ನು ಪಾಕಿಸ್ತಾನ ಮುಂದುವರಿಸಿದೆ. ತಾಲಿಬಾನ್​ ನೇತೃತ್ವದ ಸರ್ಕಾರವನ್ನು ಈಗಲ್ಲದಿದ್ದರೂ ಮುಂದೆಯಾದರೂ ಅಮೆರಿಕಾ ಒಪ್ಪಿಕೊಳ್ಳಲೇಬೇಕು ಎಂದು ಪಾಕ್​ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಟಿಆರ್​ಟಿ ವರ್ಲ್ಡ್ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವೊಂದು ಏಕಪಕ್ಷೀಯವಾಗಿ ತಾಲಿಬಾನ್​ ಸರ್ಕಾರವನ್ನು ಗುರುತಿಸುವ ಮೂಲಕ ಏನೂ ಬದಲಾವಣೆ ಆಗಲ್ಲ. ಅಮೆರಿಕ, ಯುರೋಪ್, ಚೀನಾ ಮತ್ತು ರಷ್ಯಾ ಕೂಡ ಆದ್ಯತೆಯ ಮೇಲೆ ಗುರುತಿಸಬೇಕಾಗುತ್ತದೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ. “ನೆರೆ ರಾಷ್ಟ್ರಗಳ ಜತೆ ಪಾಕಿಸ್ತಾನವು ಈ ಸಂಬಂಧವಾಗಿ ಮಾತುಕತೆ ನಡೆಸುತ್ತಿದೆ ಮತ್ತು ಭೇಟಿಯ ನಂತರ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು,” ಎಂದು ಖಾನ್ ಹೇಳಿರುವುದಾಗಿ ವರದಿಯಾಗಿದೆ.

ತಾಲಿಬಾನ್​ನಿಂದ ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಂಡ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಬೂಲ್ ವಶಕ್ಕೆ ಪಡೆಯುವಾಗ ಹರಿದ ರಕ್ತದಿಂದ ನಾವು ಗಾಬರಿ ಆಗಿದ್ದೆವು ಮತ್ತು ಶಾಂತಿಯುತವಾದ ಅಧಿಕಾರ ಹಸ್ತಾಂತರ ಅನಿರೀಕ್ಷಿತವಾದದ್ದು ಎಂದು ಇಮ್ರಾನ್​ ಖಾನ್ ಹೇಳಿದ್ದಾರೆ. ಅಂತರರಾಷ್ಟ್ರೀಯ ಸಮುದಾಯವು ಅಫ್ಘಾನಿಸ್ತಾನ ಸರ್ಕಾರಕ್ಕೆ ನೆರವು ಒದಗಿಸಬೇಕು. ಏಕೆಂದರೆ ಆ ದೇಶ ಬಹುತೇಕ ವಿದೇಶೀ ಹಣಕಾಸಿನ ನೆರವಿನ ಮೇಲೆ ಅವಲಂಬಿತ ಆಗಿದೆ ಎಂದು ಹೇಳಿದ್ದಾರೆ.

“ಒಂದು ವೇಳೆ ಅಂತರರಾಷ್ಟ್ರೀಯ ಸಮುದಾಯವು ಆಫ್ಘನ್ ಜನರ ನೆರವಿಗೆ ಮುಂದೆ ಬಾರದಿದ್ದಲ್ಲಿ ಮಾನವೀಯ ಬಿಕ್ಕಟ್ಟು ಉದ್ಭವಿಸಲಿದೆ,” ಎಂದು ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಪಾಕಿಸ್ತಾನವು ತಾಲಿಬಾನ್ ಅನ್ನು ಬಹಿರಂಗವಾಗಿ ಮತ್ತು ರಹಸ್ಯವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಇದನ್ನೂ ಓದಿ: Geopolitics: ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ 6 ದೇಶಗಳಿಗೆ ಆಹ್ವಾನ, ಅಫ್ಘಾನಿಸ್ತಾನದ ಭವಿಷ್ಯದ ಮೇಲೆ ಪ್ರಭಾವಿ ದೇಶಗಳ ನೆರಳು

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ