AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರವನ್ನು ಇಂದಲ್ಲ ನಾಳೆ ಅಮೆರಿಕ ಗುರುತಿಸಲೇ ಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಹೇಳಿದ ಇನ್ನಷ್ಟು ಸಂಗತಿ ಈ ವರದಿಯಲ್ಲಿದೆ.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್
ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 03, 2021 | 12:49 AM

Share

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರದ ಪರವಾಗಿ ಮಾತನಾಡುವುದನ್ನು ಪಾಕಿಸ್ತಾನ ಮುಂದುವರಿಸಿದೆ. ತಾಲಿಬಾನ್​ ನೇತೃತ್ವದ ಸರ್ಕಾರವನ್ನು ಈಗಲ್ಲದಿದ್ದರೂ ಮುಂದೆಯಾದರೂ ಅಮೆರಿಕಾ ಒಪ್ಪಿಕೊಳ್ಳಲೇಬೇಕು ಎಂದು ಪಾಕ್​ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಟಿಆರ್​ಟಿ ವರ್ಲ್ಡ್ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವೊಂದು ಏಕಪಕ್ಷೀಯವಾಗಿ ತಾಲಿಬಾನ್​ ಸರ್ಕಾರವನ್ನು ಗುರುತಿಸುವ ಮೂಲಕ ಏನೂ ಬದಲಾವಣೆ ಆಗಲ್ಲ. ಅಮೆರಿಕ, ಯುರೋಪ್, ಚೀನಾ ಮತ್ತು ರಷ್ಯಾ ಕೂಡ ಆದ್ಯತೆಯ ಮೇಲೆ ಗುರುತಿಸಬೇಕಾಗುತ್ತದೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ. “ನೆರೆ ರಾಷ್ಟ್ರಗಳ ಜತೆ ಪಾಕಿಸ್ತಾನವು ಈ ಸಂಬಂಧವಾಗಿ ಮಾತುಕತೆ ನಡೆಸುತ್ತಿದೆ ಮತ್ತು ಭೇಟಿಯ ನಂತರ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು,” ಎಂದು ಖಾನ್ ಹೇಳಿರುವುದಾಗಿ ವರದಿಯಾಗಿದೆ.

ತಾಲಿಬಾನ್​ನಿಂದ ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಂಡ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಬೂಲ್ ವಶಕ್ಕೆ ಪಡೆಯುವಾಗ ಹರಿದ ರಕ್ತದಿಂದ ನಾವು ಗಾಬರಿ ಆಗಿದ್ದೆವು ಮತ್ತು ಶಾಂತಿಯುತವಾದ ಅಧಿಕಾರ ಹಸ್ತಾಂತರ ಅನಿರೀಕ್ಷಿತವಾದದ್ದು ಎಂದು ಇಮ್ರಾನ್​ ಖಾನ್ ಹೇಳಿದ್ದಾರೆ. ಅಂತರರಾಷ್ಟ್ರೀಯ ಸಮುದಾಯವು ಅಫ್ಘಾನಿಸ್ತಾನ ಸರ್ಕಾರಕ್ಕೆ ನೆರವು ಒದಗಿಸಬೇಕು. ಏಕೆಂದರೆ ಆ ದೇಶ ಬಹುತೇಕ ವಿದೇಶೀ ಹಣಕಾಸಿನ ನೆರವಿನ ಮೇಲೆ ಅವಲಂಬಿತ ಆಗಿದೆ ಎಂದು ಹೇಳಿದ್ದಾರೆ.

“ಒಂದು ವೇಳೆ ಅಂತರರಾಷ್ಟ್ರೀಯ ಸಮುದಾಯವು ಆಫ್ಘನ್ ಜನರ ನೆರವಿಗೆ ಮುಂದೆ ಬಾರದಿದ್ದಲ್ಲಿ ಮಾನವೀಯ ಬಿಕ್ಕಟ್ಟು ಉದ್ಭವಿಸಲಿದೆ,” ಎಂದು ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಪಾಕಿಸ್ತಾನವು ತಾಲಿಬಾನ್ ಅನ್ನು ಬಹಿರಂಗವಾಗಿ ಮತ್ತು ರಹಸ್ಯವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಇದನ್ನೂ ಓದಿ: Geopolitics: ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ 6 ದೇಶಗಳಿಗೆ ಆಹ್ವಾನ, ಅಫ್ಘಾನಿಸ್ತಾನದ ಭವಿಷ್ಯದ ಮೇಲೆ ಪ್ರಭಾವಿ ದೇಶಗಳ ನೆರಳು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್