ಟೇಕ್​ಆಫ್​ಗೂ ಮುನ್ನ ರನ್​ವೇನಲ್ಲೇ ಅಮೆರಿಕನ್ ಏರ್​ಲೈನ್ಸ್​ ವಿಮಾನದ ಟೈರ್​ ಸ್ಫೋಟ, ವಿಡಿಯೋ ಇಲ್ಲಿದೆ

ಫ್ಲೋರಿಡಾದ ಟ್ಯಾಂಪಾ ವಿಮಾನ ನಿಲ್ದಾಣದಿಂದ ಫಿಯೋನಿಕ್ಸ್​ಗೆ ಹೊರಟಿದ್ದ ಅಮೆರಿಕನ್ ಏರ್​ಲೈನ್ಸ್​ ವಿಮಾನದ ಟೈರ್​ ಸ್ಫೋಟಗೊಂಡಿರುವ ಘಟನೆ ವರದಿಯಾಗಿದೆ.

ಟೇಕ್​ಆಫ್​ಗೂ ಮುನ್ನ ರನ್​ವೇನಲ್ಲೇ ಅಮೆರಿಕನ್ ಏರ್​ಲೈನ್ಸ್​ ವಿಮಾನದ ಟೈರ್​ ಸ್ಫೋಟ, ವಿಡಿಯೋ ಇಲ್ಲಿದೆ
ಅಮೆರಿಕನ್ ಏರ್​ಲೈನ್ಸ್​
Follow us
|

Updated on: Jul 11, 2024 | 12:59 PM

ಅಮೆರಿಕನ್ ಏರ್​ಲೈನ್ಸ್ ವಿಮಾನ ಟೇಕ್​ ಆಫ್​ ಆಗುವುದಕ್ಕೂ ಮುನ್ನ ರನ್​ವೇನಲ್ಲೇ ಟೈರ್​ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಘಟನೆ ಅಮೆರಿಕದ ಟ್ಯಾಂಪಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಫ್ಲೋರಿಡಾ ವಿಮಾನ ನಿಲ್ದಾಣದಿಂದ ಅಮೆರಿಕದ ಫಿಯೋನಿಕ್ಸ್​ಗೆ ಈ ವಿಮಾನ ಹೋಗುತ್ತಿತ್ತು ಎನ್ನಲಾಗಿದೆ. ಬೆಳಗ್ಗೆ 8 ಗಂಟೆಯ ವೇಳೆ ಈ ಅವಘಡ ಸಂಭವಿಸಿದೆ.

ಇನ್ನೇನು ವಿಮಾನ ಟೇಕ್​ಆಫ್​ ಆಗಬೇಕು ಎನ್ನುವಾಗ ಜೋರಾಗಿ ರನ್​ವೇನಲ್ಲಿ ಓಡುತ್ತಾ ಹೊರಟಿದ್ದ ವಿಮಾನದ ಬಲಭಾಗದ ಟೈರ್​ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡಿತ್ತು. ಹೇಗೋ ಮಾಡಿ ವಿಮಾನವನ್ನು ರನ್​ವೇನಲ್ಲೇ ನಿಲ್ಲಿಸಲಾಯಿತು. ವಿಮಾನದಲ್ಲಿ 174 ಪ್ರಯಾಣಿಕರು ಹಾಗೂ ಆರು ಸಿಬ್ಬಂದಿ ಇದ್ದರು ಯಾರಿಗೂ ಯಾವುದೇ ಅಪಾಯವಾಗಿಲ್ಲ.

ವಿಮಾನವನ್ನು ಟರ್ಮಿನಲ್​ಗೆ ಕಳುಹಿಸಲಾಗಿದೆ ಎಂದು ಅಮೆರಿಕನ್ ಏರ್​ಲೈನ್ಸ್ ವಕ್ತಾರ ಆಲ್ಫ್ರೆಡೊ ಗಾರ್ಡುನೊ ಹೇಳಿದ್ದಾರೆ.

ಪ್ರಯಾಣಿಕರನ್ನು ಬೇರೊಂದು ವಿಮಾನಕ್ಕೆ ಸ್ಥಳಾಂತರಿಸಲಾಯಿತು, ಘಟನೆಯಿಂದಾಗಿ ಫ್ಲೋರಿಡಾ ವಿಮಾನ ನಿಲ್ದಾಣದಲ್ಲಿ ಇತರೆ ವಿಮಾನ ಕಾರ್ಯಚರಣೆಗಳಿಗೆ ತೊಂದರೆಯಾಗಿಲ್ಲ ಎಂದು ಏರ್​ಲೈನ್ಸ್​ ಹೇಳಿದೆ.

ಮತ್ತಷ್ಟು ಓದಿ: ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ; 12 ಗಂಟೆಗಳಿಂದ ವಿಮಾನದಲ್ಲಿ ಲಾಕ್ ಆಗಿರುವ ಪ್ರಯಾಣಿಕರು

ಹೇಳಿಕೆಯಲ್ಲಿ, ಅಮೆರಿಕನ್ ಏರ್​ಲೈನ್ಸ್​ ಫ್ಲೈಟ್​ 590 ಟೇಕ್ ಆಫ್ ಮಾಡುವ ಮೊದಲು ರನ್​ವೇನಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು, ಅನನುಕೂಲತೆಗಾಗಿ ಪ್ರಯಾಣಿಕರ ಬಳಿ ಕ್ಷಮೆಯಾಚಿಸಿದ್ದಾರೆ. ವಿಮಾನವು ಫೀನಿಕ್ಸ್ ಸ್ಕೈ ಹಾರ್ಬರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ