AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಸೇನಾ ಪ್ರಧಾನ ಕಚೇರಿ ಪೆಂಟಗನ್ ಸಮೀಪ ಗುಂಡು ಹಾರಾಟ: ಕಟ್ಟಡದತ್ತ ಧಾವಿಸಿದ ಭದ್ರತಾ ಸಿಬ್ಬಂದಿ

ವಿಶ್ವದ ಹಲವು ದೇಶಗಳಲ್ಲಿ ಅಮೆರಿಕ ಸೇನೆಯ ಕಾರ್ಯಾಚರಣೆಯನ್ನು ನಿರ್ವಹಿಸುವ ಅಮೆರಿಕ ರಕ್ಷಣಾ ಇಲಾಖೆಯ ಪ್ರಧಾನ ಕಚೇರಿ ಪೆಂಟಗನ್ ಸಮೀಪ ಮಂಗಳವಾರ ಮುಂಜಾನೆ ಗುಂಡು ಹಾರಾಟ ನಡೆದಿದೆ.

ಅಮೆರಿಕ ಸೇನಾ ಪ್ರಧಾನ ಕಚೇರಿ ಪೆಂಟಗನ್ ಸಮೀಪ ಗುಂಡು ಹಾರಾಟ: ಕಟ್ಟಡದತ್ತ ಧಾವಿಸಿದ ಭದ್ರತಾ ಸಿಬ್ಬಂದಿ
ಅಮೆರಿಕದ ಸೇನಾ ಪ್ರಧಾನ ಕಚೇರಿ ಪೆಂಟಗನ್ ಕಟ್ಟಡ
TV9 Web
| Edited By: |

Updated on:Aug 03, 2021 | 10:08 PM

Share

ವಾಷಿಂಗ್​ಟನ್: ವಿಶ್ವದ ಹಲವು ದೇಶಗಳಲ್ಲಿ ಅಮೆರಿಕ ಸೇನೆಯ ಕಾರ್ಯಾಚರಣೆಯನ್ನು ನಿರ್ವಹಿಸುವ ಅಮೆರಿಕ ರಕ್ಷಣಾ ಇಲಾಖೆಯ ಪ್ರಧಾನ ಕಚೇರಿ ಪೆಂಟಗನ್ ಸಮೀಪ ಮಂಗಳವಾರ ಮುಂಜಾನೆ ಗುಂಡು ಹಾರಾಟ ನಡೆದಿದೆ. ಕನಿಷ್ಠ ಒಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾನೆ. ಆತನ ವಿವರ ಮತ್ತು ಸದ್ಯದ ಪರಿಸ್ಥಿತಿಯ ಮಾಹಿತಿ ತಿಳಿದಿಲ್ಲ ಎಂದು ಘಟನೆಯ ಇಬ್ಬರು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಎಎಫ್​ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಪೆಂಟಗನ್ ಟ್ರಾನ್ಸಿಟ್​ ಸೆಂಟರ್​ನ ಭಾಗವಾಗಿರುವ ಮೆಟ್ರೊ ಬಸ್ ಪ್ಲಾಟ್​ಫಾರ್ಮ್​ನಲ್ಲಿ ಈ ಘಟನೆ ನಡೆದಿದೆ ಎಂದು ಪೆಂಟಗನ್ ರಕ್ಷಣಾ ದಳ ಟ್ವೀಟ್ ಮಾಡಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕಟ್ಟಡದಲ್ಲಿ ಲಾಕ್​ಡೌನ್​ ಘೋಷಿಸಲಾಗಿದೆ. ಮೆಟ್ರೊ ಸಬ್​ವೇ ರೈಲುಗಳಿಗೂ ಪೆಂಟಗನ್ ನಿಲ್ದಾಣದಲ್ಲಿ ನಿಲುಗಡೆ ನಿಷೇಧಿಸಲಾಗಿದೆ. ತನಿಖೆ ಚುರುಕಾಗಿದೆ.

ಪೆಂಟಗನ್ ಸಮೀಪವೇ ಇದ್ದ ಅಸೋಸಿಯೇಟೆಡ್​ ಪ್ರೆಸ್​ (ಎಪಿ) ಸುದ್ದಿಸಂಸ್ಥೆಯ ವರದಿಗಾರ ಸಹ ಗುಂಡುಗಳ ಹಾರಾಟದ ಧ್ವನಿ ಕೇಳಿಸಿದ್ದನ್ನು ದೃಢಪಡಿಸಿದ್ದಾರೆ.

ಕಟ್ಟಡದಲ್ಲಿರುವ ಎಲ್ಲ ಸಿಬ್ಬಂದಿಗೂ ಸುರಕ್ಷಿತ ಸ್ಥಳದಲ್ಲಿ ಭದ್ರತೆ ಒದಗಿಸಲಾಗಿದೆ. ಸ್ಥಳೀಯ ಸುದ್ದಿವಾಹಿನಿಗಳು ಭದ್ರತಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ವಾಹನಗಳು ಪೆಂಟಗನ್​ನತ್ತ ಧಾವಿಸುತ್ತಿರುವ ದೃಶ್ಯಗಳನ್ನು ಪ್ರಸಾರ ಮಾಡಿವೆ.

(American Defense Headquarters Pentagon on lockdown after gunshots fired near Metro)

ಇದನ್ನೂ ಓದಿ: ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ

ಇದನ್ನೂ ಓದಿ: ಅಮೆರಿಕದ ವೈಮಾನಿಕ ದಾಳಿಯ ನೆರವಿನಿಂದ ತಾಲಿಬಾನ್​​ನ್ನು ಹಿಮ್ಮೆಟ್ಟಿಸಿದ ಅಫ್ಘಾನ್ ಭದ್ರತಾ ಪಡೆ

Published On - 10:04 pm, Tue, 3 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?