AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಗುಲುವ ಭೀತಿಯಲ್ಲಿ ಕೊವಿಡ್​ ಸೋಂಕಿತ ಮಗನನ್ನು ಕಾರ್ ಡಿಕ್ಕಿಯೊಳಗೆ ಲಾಕ್ ಮಾಡಿದ ತಾಯಿ!

ಕೊವಿಡ್ ಪಾಸಿಟಿವ್ ಬಂದಿದ್ದ ಮಗನಿಂದ ತನ್ನನ್ನು ರಕ್ಷಿಸಿಕೊಳ್ಳಲು ತಾಯಿ ಕಾರಿನ ಡಿಕ್ಕಿಯೊಳಗೆ ಮಗನನ್ನು ಲಾಕ್ ಮಾಡಿದ್ದಾಳೆ.

ಕೊರೊನಾ ತಗುಲುವ ಭೀತಿಯಲ್ಲಿ ಕೊವಿಡ್​ ಸೋಂಕಿತ ಮಗನನ್ನು ಕಾರ್ ಡಿಕ್ಕಿಯೊಳಗೆ ಲಾಕ್ ಮಾಡಿದ ತಾಯಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 08, 2022 | 2:39 PM

Share

ನವದೆಹಲಿ: ಕೊವಿಡ್ ಪಾಸಿಟಿವ್​ ಇದ್ದ ಮಗನಿಂದ ತನಗೆ ಕೊರೊನಾ ತಗುಲುವ ಭೀತಿಯಲ್ಲಿ ಅಮೆರಿಕದ ಟೆಕ್ಸಾಸ್‌ನಲ್ಲಿ ತಾಯಯೊಬ್ಬಳು ತನ್ನ ಮಗನನನ್ನು ಕಾರಿನ ಡಿಕ್ಕಿಯೊಳಗೆ ಲಾಕ್ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೊವಿಡ್ ಪಾಸಿಟಿವ್ ಬಂದಿದ್ದ ಮಗನಿಂದ ತನ್ನನ್ನು ರಕ್ಷಿಸಿಕೊಳ್ಳಲು ತಾಯಿ ಕಾರಿನ ಡಿಕ್ಕಿಯೊಳಗೆ ಮಗನನ್ನು ಲಾಕ್ ಮಾಡಿದ್ದಾಳೆ.

ಇದರಿಂದ ಉಸಿರು ಕಟ್ಟಿದಂತಾಗಿದ್ದ ಮಗನನ್ನು ರಕ್ಷಿಸಲಾಗಿದ್ದು, ತಾಯಿಯನ್ನು ಬಂಧಿಸಲಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಸಾರಾ ಬೀಮ್ ಎಂಬ 41 ವರ್ಷದ ಮಹಿಳೆ ಜನವರಿ 3ರಂದು ತನ್ನ ಮಗನನ್ನು ಕೊರೊನಾ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದಳು. ಆಗ ಆತನಿಗೆ ಕೊರೊನಾ ಪಾಸಿಟಿವ್ ಬಂದಿರುವುದು ದೃಢವಾಗಿತ್ತು. ಹೀಗಾಗಿ, ಆತನಿಂದ ತನಗೂ ಕೊವಿಡ್ ತಗುಲುತ್ತದೆ ಎಂಬ ಆತಂಕದಿಂದ ಆಕೆ ಮಗನನ್ನು ಕಾರಿನ ಡಿಕ್ಕಿಯಲ್ಲಿ ಲಾಕ್ ಮಾಡಿದ್ದಾಳೆ.

ಈ ಘಟನೆಯ ಪ್ರತ್ಯಕ್ಷದರ್ಶಿ click2houston.comಗೆ ಮಾಹಿತಿ ನೀಡಿದ್ದು, ಕಾರಿನ ಡಿಕ್ಕಿಯಿಂದ ಜೋರಾಗಿ ಶಬ್ದ ಕೇಳುತ್ತಿರುವುದನ್ನು ಗಮನಿಸಿದರು. ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ ನಂತರ ಆ ಬಾಲಕನನ್ನು ರಕ್ಷಿಸಲಾಯಿತು. ಬೀಮ್ ಅವರು ತಮ್ಮ 13 ವರ್ಷದ ಮಗನಿಗೆ ಕೋವಿಡ್ -19 ತಗುಲಿದ್ದರಿಂದ ಆತನಿಂದ ತನಗೂ ಸೋಂಕು ತಗುಲಬಹುದು ಎಂಬ ಆತಂಕದಿಂದ ಕಾರಿನ ಡಿಕ್ಕಿಯೊಳಗೆ ಲಾಕ್ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಅದೃಷ್ಟವಶಾತ್ ಆ ಬಾಲಕನಿಗೆ ಯಾವುದೇ ಅಪಾಯವಾಗಿಲ್ಲ.

ಇದನ್ನೂ ಓದಿ: Viral News: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಎಂಗೇಜ್​ಮೆಂಟ್ ಮಾಡಿಕೊಂಡ ಸಲಿಂಗಿ ವೈದ್ಯರು!

Viral News: ಹೀಗೂ ಇರ್ತಾರಾ?; ಗರ್ಭ ಧರಿಸಿದ ಮುದ್ದಿನ ಬೆಕ್ಕುಗಳಿಗೆ ಸೀಮಂತ ಮಾಡಿದ ಮಾಲೀಕರು!

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ