AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಅವನತಿ ಮುಗಿಯಿತು, ಸುವರ್ಣ ಯುಗ ಆರಂಭ; ಪ್ರಮಾಣವಚನದ ಬಳಿಕ ಡೊನಾಲ್ಡ್ ಟ್ರಂಪ್

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿರುವ ಡೊನಾಲ್ಡ್ ಟ್ರಂಪ್ ಅಮೆರಿಕದ ಜನರಿಗೆ 'ಸಾಮಾನ್ಯ ಜ್ಞಾನದ ಕ್ರಾಂತಿ'ಯ ಭರವಸೆ ನೀಡಿದ್ದಾರೆ. ಹಾಗೇ, ಅಮೆರಿಕವನ್ನು ಮತ್ತೊಮ್ಮೆ ಶ್ರೇಷ್ಟ ದೇಶವನ್ನಾಗಿ ಮಾಡುವುದಾಗಿ ಘೋಷಿಸಿದ್ದಾರೆ. 'ಅಮೆರಿಕದ ಅವನತಿ ಮುಗಿದಿದೆ' ಎಂದು ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕರಿಸಿದ ಬಳಿಕ ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ ಮೆಕ್ಸಿಕೋ ಗಡಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಅಮೆರಿಕದ ಅವನತಿ ಮುಗಿಯಿತು, ಸುವರ್ಣ ಯುಗ ಆರಂಭ; ಪ್ರಮಾಣವಚನದ ಬಳಿಕ ಡೊನಾಲ್ಡ್ ಟ್ರಂಪ್
Trump
ಸುಷ್ಮಾ ಚಕ್ರೆ
|

Updated on:Jan 20, 2025 | 11:25 PM

Share

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ 2ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್ ಅಮೆರಿಕವನ್ನು ಮತ್ತೊಮ್ಮೆ ಶ್ರೇಷ್ಟ ದೇಶವನ್ನಾಗಿ ಮಾಡುತ್ತೇನೆಂದು ಪ್ರತಿಜ್ಞೆ ಮಾಡಿದ್ದಾರೆ. ಈ ಕ್ಷಣದಿಂದ ಅಮೆರಿಕದ ಅವನತಿ ಮುಗಿದಿದೆ ಎಂದು ಪ್ರಮಾಣವಚನ ಸ್ವೀಕರಿಸಿದ ನಂತರ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ ಇಂದು ಯುನೈಟೆಡ್ ಸ್ಟೇಟ್ಸ್ ಕ್ಯಾಪಿಟಲ್ ರೊಟುಂಡಾದಲ್ಲಿ ನಡೆದ ಸಮಾರಂಭದಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಇತರ ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದಾರೆ.

ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ಡೊನಾಲ್ಡ್ ಟ್ರಂಪ್, “ಈ ಕ್ಷಣದಿಂದ ಅಮೆರಿಕದ ಅವನತಿ ಮುಗಿದಿದೆ. ಅಮೆರಿಕದ ಸುವರ್ಣಯುಗ ಈಗ ಪ್ರಾರಂಭವಾಗುತ್ತದೆ. ನಾನು ಅಮೆರಿಕವನ್ನು ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿಡುವಂತೆ ಮಾಡುತ್ತೇನೆ. ಇಂದಿನಿಂದ ಅಮೆರಿಕಕ್ಕೆ ಸುವರ್ಣ ಯುಗ ಆರಂಭವಾಗಿದೆ.” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಟ್ರಂಪ್​ಗೆ ಪತ್ರ ಬರೆದು ಕಳುಹಿಸಿದ ಮೋದಿ

“ನಾವು ನಮ್ಮ ಸಂವಿಧಾನವನ್ನು ಮರೆಯುವುದಿಲ್ಲ, ಮತ್ತು ನಮ್ಮ ದೇವರನ್ನು ಮರೆಯುವುದಿಲ್ಲ” ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದೇ ವೇಳೆ ಡೊನಾಲ್ಡ್ ಟ್ರಂಪ್ ಮೆಕ್ಸಿಕೋ ಗಡಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ನಮ್ಮ ಉದ್ದೇಶವನ್ನು ತಡೆಯಲು ಬಯಸುವವರು ನನ್ನ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಮತ್ತು ನನ್ನ ಜೀವವನ್ನೇ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಕೆಲವೇ ತಿಂಗಳುಗಳ ಹಿಂದೆ ಸುಂದರವಾದ ಪೆನ್ಸಿಲ್ವೇನಿಯಾ ಮೈದಾನದಲ್ಲಿ ಕೊಲೆಗಾರನ ಗುಂಡು ನನ್ನ ಕಿವಿಯನ್ನು ಸೀಳಿದೆ. ಆದರೂ ನಾನು ಉಳಿದಿದ್ದೇನೆಂದರೆ ಯಾವುದೋ ಒಂದು ಕಾರಣಕ್ಕಾಗಿ ದೇವರು ನನ್ನನ್ನು ಉಳಿಸಿದ್ದಾನೆ ಎಂದು ಆಗ ನಾನು ಭಾವಿಸಿದೆ. ಅಮೆರಿಕವನ್ನು ಮತ್ತೆ ಶ್ರೇಷ್ಠಗೊಳಿಸಲು ದೇವರು ನನ್ನನ್ನು ರಕ್ಷಿಸಿದನು.” ಎಂದು ಡೊನಾಲ್ಡ್ ಟ್ರಂಪ್ ತಮ್ಮ ಮೇಲಿನ ಕೊಲೆ ಪ್ರಯತ್ನವನ್ನು ನೆನಪಿಸಿಕೊಂಡಿದ್ದಾರೆ.

“ಇತ್ತೀಚೆಗೆ ಲಾಸ್ ಏಂಜಲೀಸ್​ನಲ್ಲಿ ನಾವು ಇನ್ನೂ ದುರಂತವಾಗಿ ಉರಿಯುತ್ತಿರುವ ಬೆಂಕಿಯನ್ನು ನೋಡುತ್ತಿದ್ದೇವೆ. ವಿಪತ್ತಿನ ಸಮಯದಲ್ಲಿ ಸಹಾಯ ಮಾಡದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ನಮ್ಮಲ್ಲಿದೆ, ಆದರೆ ಪ್ರಪಂಚದ ಯಾವುದೇ ದೇಶಕ್ಕಿಂತ ಹೆಚ್ಚಿನ ಹಣವನ್ನು ಅದಕ್ಕಾಗಿ ಖರ್ಚು ಮಾಡಲಾಗುತ್ತದೆ. ನಮ್ಮ ಮಕ್ಕಳು ನಮ್ಮ ದೇಶವನ್ನು ದ್ವೇಷಿಸಲು ಕಲಿಸುವ ಶಿಕ್ಷಣ ವ್ಯವಸ್ಥೆ ನಮ್ಮಲ್ಲಿದೆ. ಅದೆಲ್ಲವೂ ಇಂದಿನಿಂದ ಬದಲಾಗುತ್ತದೆ ಮತ್ತು ಅದು ಬಹಳ ಬೇಗನೆ ಬದಲಾಗುತ್ತದೆ ಎಂದು ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ: Donald Trump: 2ನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕಾರ

“ಲಸಿಕೆ ಆದೇಶವನ್ನು ವಿರೋಧಿಸಿದ್ದಕ್ಕಾಗಿ ನಮ್ಮ ಸೇನೆಯಿಂದ ಅನ್ಯಾಯವಾಗಿ ಹೊರಹಾಕಲ್ಪಟ್ಟ ಎಲ್ಲ ಸೇವಾ ಸದಸ್ಯರನ್ನು ಈ ವಾರ ನಾನು ಪೂರ್ಣ ಮರುಪಾವತಿಯೊಂದಿಗೆ ಪುನಃ ನೇಮಿಸಿಕೊಳ್ಳುತ್ತೇನೆ. ನಮ್ಮ ಯೋಧರು ಕರ್ತವ್ಯದಲ್ಲಿರುವಾಗ ಆಮೂಲಾಗ್ರ ರಾಜಕೀಯ ಸಿದ್ಧಾಂತಗಳು ಮತ್ತು ಸಾಮಾಜಿಕ ಪ್ರಯೋಗಗಳಿಗೆ ಒಳಗಾಗುವುದನ್ನು ತಡೆಯಲು ನಾನು ಆದೇಶಕ್ಕೆ ಸಹಿ ಹಾಕುತ್ತೇನೆ. ಇದು ತಕ್ಷಣವೇ ಜಾರಿಯಾಗಲಿದೆ. ನಮ್ಮ ಸಶಸ್ತ್ರ ಪಡೆಗಳು ಅಮೆರಿಕದ ಶತ್ರುಗಳನ್ನು ಸೋಲಿಸುವ ತಮ್ಮ ಏಕೈಕ ಕಾರ್ಯಾಚರಣೆಯ ಮೇಲೆ ಕೇಂದ್ರೀಕರಿಸಲು ಮುಕ್ತವಾಗುತ್ತವೆ” ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 pm, Mon, 20 January 25

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ