AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಮತ್ತೊಮ್ಮೆ ಪರಮಾಣು ಬೆದರಿಕೆ ಹಾಕಿದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್

ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತಕ್ಕೆ ಪರಮಾಣು ಮತ್ತು ಆರ್ಥಿಕ ಬೆದರಿಕೆಗಳನ್ನು ಹಾಕಿದ್ದಾರೆ. ವಿಪರ್ಯಾಸವೆಂದರೆ ಪಾಕಿಸ್ತಾನದಲ್ಲಿ ಅಫ್ಘಾನ್ ದಾಳಿ ನಡೆಸುತ್ತಿದೆ. ಆದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದನ್ನು ಬಿಟ್ಟು ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತೊಮ್ಮೆ ಭಾರತ ವಿರೋಧಿ ಹಾಗೂ ಪರಮಾಣು ದಾಳಿಯ ಮಾತುಗಳನ್ನಾಡಿದ್ದಾರೆ.

ಭಾರತಕ್ಕೆ ಮತ್ತೊಮ್ಮೆ ಪರಮಾಣು ಬೆದರಿಕೆ ಹಾಕಿದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್
Asim Munir
ಸುಷ್ಮಾ ಚಕ್ರೆ
|

Updated on: Oct 18, 2025 | 8:06 PM

Share

ಇಸ್ಲಮಾಬಾದ್, ಅಕ್ಟೋಬರ್ 18: ಪಾಕಿಸ್ತಾನಿ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ (Asim Munir) ಭಾರತದ ವಿರುದ್ಧ ಹೊಸ ಬೆದರಿಕೆಗಳನ್ನು ಹಾಕಿದ್ದಾರೆ. ಪಾಕಿಸ್ತಾನದ ಮೇಲೆ ಅಫ್ಘಾನ್ ಬಾಂಬ್‌ಗಳ ಮಳೆ ಸುರಿಸುತ್ತಿದ್ದರೂ ಅಸಿಮ್ ಮುನೀರ್ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟಿಲ್ಲ. ಇಸ್ಲಾಮಾಬಾದ್‌ನ ವಿಸ್ತರಿಸುತ್ತಿರುವ ಮಿಲಿಟರಿ ಸಾಮರ್ಥ್ಯಗಳು ಭಾರತದ ಭೌಗೋಳಿಕ ಯುದ್ಧಭೂಮಿಯನ್ನು ಛಿದ್ರಗೊಳಿಸಬಹುದು” ಎಂದು ಅಸಿಮ್ ಮುನೀರ್ ಹೇಳಿದ್ದಾರೆ.

ಕಾಕುಲ್‌ನಲ್ಲಿರುವ ಪಾಕಿಸ್ತಾನ ಮಿಲಿಟರಿ ಅಕಾಡೆಮಿ (ಪಿಎಂಎ)ಯಲ್ಲಿ ಇಂದು ಪ್ರಚೋದನಕಾರಿ ಭಾಷಣ ಮಾಡಿದ ಅಸಿಮ್ ಮುನೀರ್, “ಪರಮಾಣು ರಹಿತ ವಾತಾವರಣದಲ್ಲಿ ಯುದ್ಧಕ್ಕೆ ಸ್ಥಳವಿಲ್ಲ” ಎಂದು ಹೇಳಿದ್ದಾರೆ. ನಮ್ಮ ಮೇಲಿನ ಸಣ್ಣ ಪ್ರಚೋದನೆ ಕೂಡ ಪಾಕಿಸ್ತಾನದಿಂದ ನಿರ್ಣಾಯಕವಾದ ಪ್ರತಿಕ್ರಿಯೆಯನ್ನು ಆಹ್ವಾನಿಸುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕಾಬೂಲ್ ಭಾರತದ ಕೈಗೊಂಬೆಯಾಗುತ್ತಿದೆ; ಎಲ್ಲ ಅಫ್ಘಾನಿಗಳಿಗೆ ವಾಪಾಸ್ ತೆರಳಲು ಪಾಕಿಸ್ತಾನ ಸಚಿವ ಖವಾಜಾ ಆಸಿಫ್ ಸೂಚನೆ

“ಹೊಸದಾಗಿ ಯುದ್ಧವನ್ನು ಪ್ರಚೋದಿಸಿದರೆ ಪಾಕಿಸ್ತಾನವು ಯುದ್ಧವನ್ನು ಪ್ರಾರಂಭಿಸಿದವರ ನಿರೀಕ್ಷೆಗಳನ್ನು ಮೀರಿ ಪ್ರತಿಕ್ರಿಯಿಸುತ್ತದೆ. ಆ ದುರಂತದ ಪರಿಣಾಮಗಳ ಹೊಣೆಗಾರಿಕೆ ಭಾರತದ ಮೇಲಿರುತ್ತದೆ” ಎಂದು ಅವರು ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.

ಡುರಾಂಡ್ ರೇಖೆಯ ಉದ್ದಕ್ಕೂ ಅಫ್ಘಾನ್ ತಾಲಿಬಾನ್ ನಡೆಸಿದ ಮಾರಕ ದಾಳಿಗಳ ಸರಣಿಯ ನಂತರ ಪಾಕಿಸ್ತಾನಿ ಸೇನೆಯ ಸೈನಿಕರು ಮೃತಪಟ್ಟಿದ್ದಾರೆ. ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ನಾಗರಿಕರನ್ನು ಕೊಲ್ಲುವ ಕೆಲವು ದಿನಗಳ ಮೊದಲು ಕೂಡ ಅಸಿಮ್ ಮುನೀರ್ ಭಾರತದ ವಿರುದ್ಧ ಇದೇ ರೀತಿಯ ಪ್ರಚೋದನಕಾರಿ ಭಾಷಣ ಮಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!