AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avtar Khanda: ಲಂಡನ್​ನ ರಾಯಭಾರ ಕಚೇರಿಯಲ್ಲಿ ಭಾರತದ ರಾಷ್ಟ್ರಧ್ವಜ ಕೆಳಗಿಳಿಸಿದ್ದ ಅವತಾರ್ ಖಂಡಾ ರಕ್ತ ಕ್ಯಾನ್ಸರ್​ನಿಂದ ಸಾವು

ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್​ ಸಿಂಗ್ ಆಪ್ತ ಅವತಾರ್ ಖಂಡಾ(Avtar Khanda) ಯುಕೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರು ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು ಎನ್ನಲಾಗಿದೆ.

Avtar Khanda: ಲಂಡನ್​ನ ರಾಯಭಾರ ಕಚೇರಿಯಲ್ಲಿ ಭಾರತದ ರಾಷ್ಟ್ರಧ್ವಜ ಕೆಳಗಿಳಿಸಿದ್ದ ಅವತಾರ್ ಖಂಡಾ ರಕ್ತ ಕ್ಯಾನ್ಸರ್​ನಿಂದ ಸಾವು
ಅವತಾರ್ ಸಿಂಗ್Image Credit source: Free Press Journal
ನಯನಾ ರಾಜೀವ್
|

Updated on:Jun 15, 2023 | 11:23 AM

Share

ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್​ ಸಿಂಗ್ ಆಪ್ತ ಅವತಾರ್ ಸಿಂಗ್ ಖಂಡಾ(Avtar Singh Khanda) ಯುಕೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರು ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವತಾರ್ ಬರ್ಮಿಂಗ್‌ಹ್ಯಾಮ್ ಸಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ರಕ್ತದ ಕ್ಯಾನ್ಸರ್ ಇರುವುದು ಪತ್ತೆಯಾದ ನಂತರ ಖಂಡಾ ಅವರನ್ನು ಲಂಡನ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಂಡನ್‌ನಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾರತದ ರಾಷ್ಟ್ರಧ್ವಜವನ್ನು ಕೆಳಗಿಳಿದಿದ್ದಕ್ಕಾಗಿ ಅವರನ್ನು ಯುಕೆಯಲ್ಲಿ ಬಂಧಿಸಲಾಗಿತ್ತು.

ಜೀವಂತ ಬಾಂಬ್‌ಗಳನ್ನು ಹೇಗೆ ತಯಾರಿಸುವುದು ಮತ್ತು ಐಇಡಿಗಳನ್ನು ಹೇಗೆ ನಿರ್ವಹಿಸುವುದು ಎಂಬುದರ ಕುರಿತು ಸಿಖ್ ಯುವಕರಿಗೆ ತರಬೇತಿ ನೀಡಿದ ಆರೋಪದ ಖಂಡಾ ಮೇಲಿತ್ತು. ಖಂಡಾ ಅವರು ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್‌ಎಫ್) ನ ಲಂಡನ್ ಘಟಕದ ಮುಖ್ಯಸ್ಥರಾಗಿದ್ದರು ಮತ್ತು ಕೆಎಲ್‌ಎಫ್ ಭಯೋತ್ಪಾದಕ ಕುಲ್ವಂತ್ ಸಿಂಗ್ ಖುಖ್ರಾನಾ ಅವರ ಪುತ್ರರಾಗಿದ್ದರು.

ಮತ್ತಷ್ಟು ಓದಿ:ಲಂಡನ್​ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ, ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಖಲಿಸ್ತಾನಿ ಉಗ್ರರ ಗದ್ದಲ

ಏಪ್ರಿಲ್ 23 ರಂದು ಪಂಜಾಬ್‌ನ ಮೋಗಾ ಜಿಲ್ಲೆಯಿಂದ ಅಮೃತಪಾಲ್ ಅವರನ್ನು ಬಂಧಿಸಲಾಯಿತು. ಮಾರ್ಚ್ 19 ರಂದು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಮೇಲೆ ನಡೆದ ದಾಳಿಯ ಹಿಂದಿನ ಮಾಸ್ಟರ್‌ಮೈಂಡ್ ಅವತಾರ್ ಖಂಡಾ.

ಭಾರತೀಯ ಹೈಕಮಿಷನ್ ಮೇಲಿನ ದಾಳಿ ಮತ್ತು ರಾಷ್ಟ್ರಧ್ವಜವನ್ನು ಅಪವಿತ್ರಗೊಳಿಸಿದ ನಾಲ್ವರಲ್ಲಿ ಖಂಡಾ ಕೂಡ ಒಬ್ಬರು ಎಂದು ಎನ್​ಐಎ ಗುರುತಿಸಿತ್ತು. ಖಂಡಾ ವಾರಿಸ್​ ದೇ ಸಂಘಟನೆಯ ಮುಖ್ಯಸ್ಥ ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್​ ಸಿಂಗ್​ನ ನಿಕಟ ಅನುಯಾಯಿಯೂ ಆಗಿದ್ದ, ಪಂಜಾಬ್ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ವ್ಯಕ್ತಿಗಳಲ್ಲಿ ಅವತಾರ್ ಪ್ರಮುಖ. ಆತನ ನಿಜವಾದ ಹೆಸರು ರಂಜೋತ್​ ಸಿಂಗ್​ ಎಂಬ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Thu, 15 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ