AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಹತ್ಯೆ; 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿ ಮುಂದುವರಿದಿದ್ದು, ಇಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಕೊಪಾಲಿಯಾ ಬಜಾರ್‌ನಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಗುಂಡಿನ ದಾಳಿ ನಡೆದಿದೆ. ಹತ್ಯೆಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಇತ್ತೀಚಿನ ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಸದಸ್ಯರ ಮೇಲಿನ ಸರಣಿ ಹಲ್ಲೆಗಳ ನಡುವೆ ಈ ಹತ್ಯೆ ಸಂಭವಿಸಿದೆ. ಫೆಬ್ರವರಿ 12ರಂದು ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. 

ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಹತ್ಯೆ; 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ
Rana Pratap Bairagi
ಸುಷ್ಮಾ ಚಕ್ರೆ
|

Updated on: Jan 05, 2026 | 9:39 PM

Share

ಢಾಕಾ, ಜನವರಿ 5: ಬಾಂಗ್ಲಾದೇಶದಲ್ಲಿ ಇಂದು ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಡಿನ ದಾಳಿ ನಡೆದಿದ್ದು, ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ಅಲ್ಲಿ ನಡೆದ ಅಶಾಂತಿಯ ಬಳಿಕ ಬಾಂಗ್ಲಾದೇಶದಲ್ಲಿ (Bangladesh) ನಡೆದ 5ನೇ ಘಟನೆ ಇದಾಗಿದೆ. ಮೃತ ವ್ಯಕ್ತಿಯನ್ನು ರಾಣಾ ಪ್ರತಾಪ್ ಬೈರಾಗಿ ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ ಜೆಸ್ಸೋರ್ ಜಿಲ್ಲೆಯ ಕೊಪಾಲಿಯಾ ಬಜಾರ್‌ನಲ್ಲಿ ಕೆಲವು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಬೈರಾಗಿ ಅರುವಾ ಗ್ರಾಮದ ನಿವಾಸಿಯಾಗಿದ್ದು ಶಾಲೆಯಲ್ಲಿ ಪಾಠ ಹೇಳಿಕೊಡುತ್ತಿದ್ದರು. ಅವರು ಮಾರುಕಟ್ಟೆಯಲ್ಲಿದ್ದಾಗ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಘಟನೆಯ ನಂತರ, ದಾಳಿಕೋರರು ಓಡಿಹೋದರು. ಹಲ್ಲೆಯಿಂದಾಗಿ ಬೈರಾಗಿ ಸ್ಥಳದಲ್ಲೇ ಸಾವನ್ನಪ್ಪಿದರು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ

ಬೈರಾಗಿಯ ಹತ್ಯೆ ಬಾಂಗ್ಲಾದೇಶದಲ್ಲಿ ನಡೆದ ಐದನೇ ಘಟನೆಯಾಗಿದ್ದು, ಮೊದಲನೆಯದಾಗಿ, ಡಿಸೆಂಬರ್ 18ರಂದು ಮೈಮೆನ್ಸಿಂಗ್‌ನಲ್ಲಿ ಗಾರ್ಮೆಂಟ್ಸ್ ಕಾರ್ಖಾನೆಯ ಕೆಲಸಗಾರ ದೀಪು ಚಂದ್ರ ದಾಸ್ ಅವರನ್ನು ಗುಂಪೊಂದು ಹಲ್ಲೆ ನಡೆಸಿ ಥಳಿಸಿ ಕೊಂದಿತ್ತು. ಈ ಘಟನೆಯ 6 ದಿನಗಳ ನಂತರ ಪಂಗ್ಶಾ ಉಪಜಿಲ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿ ಅಮೃತ್ ಮೊಂಡಲ್ ಅವರನ್ನು ದೇವರ ದೂಷಣೆಯ ಆರೋಪದ ಮೇಲೆ ಗುಂಪು ಥಳಿಸಿ ಕೊಂದಿತ್ತು.

ಬಳಿಕ, ಬಜೇಂದ್ರ ಬಿಸ್ವಾಸ್ ಅವರನ್ನು ಮೈಮೆನ್ಸಿಂಗ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಈ ತಿಂಗಳ ಆರಂಭದಲ್ಲಿ ಕೆಲಸದಿಂದ ಹಿಂತಿರುಗುತ್ತಿದ್ದ 50 ವರ್ಷದ ಹಿಂದೂ ಉದ್ಯಮಿ ಖೋಕೋನ್ ದಾಸ್ ಅವರ ಮೇಲೂ ಗುಂಪೊಂದು ಹಲ್ಲೆ ನಡೆಸಿ ಬೆಂಕಿ ಹಚ್ಚಿತು. ಕೆಲವು ದಿನಗಳ ಕಾಲ ಜೀವನ್ಮರಣದ ಹೋರಾಟ ನಡೆಸಿದ ನಂತರ ಅವರು ಶನಿವಾರ (ಜನವರಿ 3) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು

ಕಳೆದ ತಿಂಗಳು, ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿತ್ತು. ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಅವರು ನೆರೆಯ ದೇಶದಲ್ಲಿ ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರದ ಅಡಿಯಲ್ಲಿ ಅಲ್ಪಸಂಖ್ಯಾತರ ಮೇಲೆ 2,900ಕ್ಕೂ ಹೆಚ್ಚು ದಾಳಿ ಘಟನೆಗಳು ವರದಿಯಾಗಿವೆ ಎಂದು ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ