AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಇಂದು (ಆ.12) ನೇಮಕ ಮಾಡಲಾಗಿದೆ. ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರನ್ನು ಮುಂದಿನ ಚುನಾವಣೆ ವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ
ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 12, 2023 | 5:23 PM

ಇಸ್ಲಾಮಾಬಾದ್, ಆ.12: ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಇಂದು (ಆ.12) ನೇಮಕ ಮಾಡಲಾಗಿದೆ. ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರಿಸಲಾಗಿದೆ.

ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರು ಮುಂದಿನ ಚುನಾವಣೆವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ಪಾಕಿಸ್ತಾನದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರ ಶಿಫಾರಸಿನ ಮೇರೆಗೆ ಬುಧವಾರ ಸಂಜೆ ಸಂಸತ್ ವಿಸರ್ಜಿಸಿದ್ದು, ಸಾರ್ವತ್ರಿಕ ಚುನಾವಣೆಗೆ ಮುಂದಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಸಂಸತ್ ವಿಸರ್ಜನೆ: 90 ದಿನಗಳಲ್ಲಿ ಚುನಾವಣೆ ನಡೆಸಲು ಕಾಲಾವಕಾಶ

ಇನ್ನು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಪಾಕಿಸ್ತಾನದ ಅಧ್ಯಕ್ಷರು 90 ದಿನಗಳ ಕಾಲಾವಕಾಶ ನೀಡಿದ್ದಾರೆ. ಆದರೆ, ಹೊರಹೋಗುವ ಸರ್ಕಾರ ಮುಂದಿನ ವರ್ಷಕ್ಕೆ ಚುನಾವಣೆ ವಿಳಂಬವಾಗಬಹುದು ಎಂದು ಎಚ್ಚರಿಸಿದೆ. ಪಾಕಿಸ್ತಾನದಲ್ಲಿ ಈಗಾಗಲೇ ಆರ್ಥಿಕ ಅಸ್ಥಿರತೆ ಉಂಟಾಗಿದ್ದು ಚುನಾವಣೆ ನಡೆಸಲು ಹಣವಿಲ್ಲದ ಕಾರಣ ಚುನಾವಣೆ ಮುಂದಿನ ವರ್ಷಕ್ಕೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿದೆ. ಆದರೆ ಇದೀಗ ಚುನಾವಣೆಗೆ 90 ದಿನಗಳ ಕಾಲಾವಕಾಶ ಇರುವ ಸಮಯದಲ್ಲಿ ಹಂಗಾಮಿ ಪ್ರಧಾನಿಯನ್ನು ಆಯ್ಕೆ ಮಾಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Sat, 12 August 23

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ