AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಇಂದು (ಆ.12) ನೇಮಕ ಮಾಡಲಾಗಿದೆ. ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರನ್ನು ಮುಂದಿನ ಚುನಾವಣೆ ವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ
ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್
ಅಕ್ಷಯ್​ ಪಲ್ಲಮಜಲು​​
|

Updated on:Aug 12, 2023 | 5:23 PM

Share

ಇಸ್ಲಾಮಾಬಾದ್, ಆ.12: ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಇಂದು (ಆ.12) ನೇಮಕ ಮಾಡಲಾಗಿದೆ. ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರಿಸಲಾಗಿದೆ.

ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರು ಮುಂದಿನ ಚುನಾವಣೆವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ಪಾಕಿಸ್ತಾನದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರ ಶಿಫಾರಸಿನ ಮೇರೆಗೆ ಬುಧವಾರ ಸಂಜೆ ಸಂಸತ್ ವಿಸರ್ಜಿಸಿದ್ದು, ಸಾರ್ವತ್ರಿಕ ಚುನಾವಣೆಗೆ ಮುಂದಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಸಂಸತ್ ವಿಸರ್ಜನೆ: 90 ದಿನಗಳಲ್ಲಿ ಚುನಾವಣೆ ನಡೆಸಲು ಕಾಲಾವಕಾಶ

ಇನ್ನು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಪಾಕಿಸ್ತಾನದ ಅಧ್ಯಕ್ಷರು 90 ದಿನಗಳ ಕಾಲಾವಕಾಶ ನೀಡಿದ್ದಾರೆ. ಆದರೆ, ಹೊರಹೋಗುವ ಸರ್ಕಾರ ಮುಂದಿನ ವರ್ಷಕ್ಕೆ ಚುನಾವಣೆ ವಿಳಂಬವಾಗಬಹುದು ಎಂದು ಎಚ್ಚರಿಸಿದೆ. ಪಾಕಿಸ್ತಾನದಲ್ಲಿ ಈಗಾಗಲೇ ಆರ್ಥಿಕ ಅಸ್ಥಿರತೆ ಉಂಟಾಗಿದ್ದು ಚುನಾವಣೆ ನಡೆಸಲು ಹಣವಿಲ್ಲದ ಕಾರಣ ಚುನಾವಣೆ ಮುಂದಿನ ವರ್ಷಕ್ಕೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿದೆ. ಆದರೆ ಇದೀಗ ಚುನಾವಣೆಗೆ 90 ದಿನಗಳ ಕಾಲಾವಕಾಶ ಇರುವ ಸಮಯದಲ್ಲಿ ಹಂಗಾಮಿ ಪ್ರಧಾನಿಯನ್ನು ಆಯ್ಕೆ ಮಾಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Sat, 12 August 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು