AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕ್ಷಮೆಯಾಚಿಸಿ; ಟ್ರಂಪ್ ಸುಂಕ ನೀತಿಗೆ ಅಮೆರಿಕದ ತಜ್ಞರಿಂದಲೇ ಟೀಕೆ

ರಷ್ಯಾದಿಂದ ತೈಲ ಖರೀದಿಸುತ್ತಿದೆ ಎಂಬ ಕಾರಣ ನೀಡಿ ಅಮೆರಿಕ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25ರಷ್ಟು ಸುಂಕ ವಿಧಿಸುವ ಮೂಲಕ ಒಟ್ಟು ಸುಂಕವನ್ನು ಶೇ. 50ಕ್ಕೆ ಏರಿಸಿದೆ. ಆದರೆ, ಇದಕ್ಕೆ ಅಮೆರಿಕದ ತಜ್ಞರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಚೀನಾದ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯ ರಾಜತಾಂತ್ರಿಕ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅಮೆರಿಕ ಆರ್ಥಿಕ ತಜ್ಞರೊಬ್ಬರು ಡೊನಾಲ್ಡ್ ಟ್ರಂಪ್ ಭಾರತದ ಕ್ಷಮೆ ಯಾಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರತದ ಕ್ಷಮೆಯಾಚಿಸಿ; ಟ್ರಂಪ್ ಸುಂಕ ನೀತಿಗೆ ಅಮೆರಿಕದ ತಜ್ಞರಿಂದಲೇ ಟೀಕೆ
Trump
ಸುಷ್ಮಾ ಚಕ್ರೆ
|

Updated on: Sep 03, 2025 | 8:57 PM

Share

ವಾಷಿಂಗ್ಟನ್, ಸೆಪ್ಟೆಂಬರ್ 3: ಭಾರತದ ಮೇಲೆ ಅಮೆರಿಕ ಹೆಚ್ಚುವರಿ ಸುಂಕ ವಿಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚೀನಾದ ಶೃಂಗಸಭೆಯಲ್ಲಿ ಚೀನಾ ಮತ್ತು ರಷ್ಯಾದ ಅಧ್ಯಕ್ಷರ ಜೊತೆ ಬಹಳ ಆಪ್ತವಾಗಿ ಕಾಣಿಸಿಕೊಂಡು ಅಮೆರಿಕಕ್ಕೆ ಬಿಸಿ ಮುಟ್ಟಿಸಿದ್ದರು. ಈ ನಡುವೆ ಅಮೆರಿಕದ ತಜ್ಞರೊಬ್ಬರು ಟ್ರಂಪ್ ನಿರ್ಧಾರವನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಭಾರತದ ಮೇಲಿನ ಹೆಚ್ಚಿನ ಸುಂಕಗಳನ್ನು ಹಿಂದಕ್ಕೆ ಪಡೆಯಬೇಕು, ಆ ಸುಂಕವನ್ನು ಶೂನ್ಯಕ್ಕೆ ಇಳಿಸಬೇಕು ಮತ್ತು ಭಾರತದ ಕ್ಷಮೆ ಯಾಚಿಸಬೇಕು ಎಂದು ಅಮೆರಿಕದ ಪ್ರಮುಖ ತಜ್ಞರೊಬ್ಬರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಒತ್ತಾಯಿಸಿದ್ದಾರೆ.

ಹಾಗೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ, ರಷ್ಯಾ ಮತ್ತು ಚೀನಾದ ಜೊತೆಗಿನ ಸಂಬಂಧಗಳನ್ನು ನಿರ್ವಹಿಸುವಲ್ಲಿ ಬಹಳ ಉತ್ತಮ ರಾಜತಾಂತ್ರಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಬಣ್ಣಿಸಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎಡ್ವರ್ಡ್ ಪ್ರೈಸ್ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದು, ಭಾರತವು 21ನೇ ಶತಮಾನವನ್ನು ರೂಪಿಸುವಲ್ಲಿ “ನಿರ್ಣಾಯಕ” ಪಾತ್ರ ಹೊಂದಿದೆ. ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಯು ವಾಷಿಂಗ್ಟನ್‌ನ ಅತ್ಯಂತ ಪ್ರಮುಖ ಪಾಲುದಾರಿಕೆಯನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಚೀನಾ, ರಷ್ಯಾದ ಅಧ್ಯಕ್ಷರಿಗೆ ಹಸ್ತಲಾಘವ, ಅಪ್ಪುಗೆ, ತಮಾಷೆ; ಟ್ರಂಪ್ ನಿದ್ರೆಗೆಡಿಸಿದ ಮೋದಿಯ ವಿಡಿಯೋ ಇಲ್ಲಿದೆ

“ಭಾರತ ಮತ್ತು ಅಮೆರಿಕದ ನಡುವಿನ ಪಾಲುದಾರಿಕೆಯನ್ನು 21ನೇ ಶತಮಾನದ ಅತ್ಯಂತ ನಿರ್ಣಾಯಕ ಪಾಲುದಾರಿಕೆ ಎಂದು ನಾನು ಪರಿಗಣಿಸುತ್ತೇನೆ. ಈ ಪಾಲುದಾರಿಕೆಯು ಚೀನಾ ಮತ್ತು ರಷ್ಯಾ ನಡುವೆ ಏನಾಗುತ್ತದೆ ಎಂಬುದನ್ನು ನಿರ್ಧರಿಸುತ್ತದೆ. 21ನೇ ಶತಮಾನದಲ್ಲಿ ಭಾರತವು ನಿರ್ಣಾಯಕ ಪಾತ್ರವನ್ನು ಹೊಂದಿದೆ. ಚೀನಾದೊಂದಿಗೆ ಮುಖಾಮುಖಿಯಾಗಿ ಮತ್ತು ರಷ್ಯಾದೊಂದಿಗಿನ ಯುದ್ಧದಲ್ಲಿ ಅಮೆರಿಕದ ಅಧ್ಯಕ್ಷ ಟ್ರಂಪ್ ಭಾರತದ ಮೇಲೆ ಶೇ. 50ರಷ್ಟು ಸುಂಕಗಳನ್ನು ಏಕೆ ವಿಧಿಸುತ್ತಾರೆ ಎಂಬುದನ್ನು ನನಗೆ ಅರ್ಥವಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

“ನಾವು ಭಾರತದ ಮೇಲಿನ 50% ಸುಂಕವನ್ನು ತೆಗೆದುಹಾಕಬೇಕು. ನಾನು ಭಾರತದ ಮೇಲೆ ಸುಂಕವನ್ನು ಶೂನ್ಯಕ್ಕೆ ಇಳಿಸಬೇಕೆಂದು ಸೂಚಿಸುತ್ತೇನೆ ಮತ್ತು ಕ್ಷಮೆಯಾಚಿಸಬೇಕೆಂದು ಕೋರುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆಗೆ ಜಗ್ಗದ ಮೋದಿ, ಚೀನಾದಲ್ಲಿ ಷಿ ಜಿನ್​​ಪಿಂಗ್, ಪುಟಿನ್ ಜತೆ ಮಾತುಕತೆ

“ಪ್ರಧಾನಿ ಮೋದಿ ಸಾಕಷ್ಟು ಬುದ್ಧಿವಂತರಾಗಿದ್ದಾರೆ. ಅವರಿಗೆ ಅಮೆರಿಕದ ಹೊರತು ಆಯ್ಕೆಗಳಿವೆ, ಆದರೆ ಅವರು ಚೀನಾ ಮತ್ತು ರಷ್ಯಾವನ್ನು ಸಂಪೂರ್ಣವಾಗಿ ಸ್ವೀಕರಿಸಿಲ್ಲ. ಉದಾಹರಣೆಗೆ, ಅವರು ಮಿಲಿಟರಿ ಮೆರವಣಿಗೆಯಲ್ಲಿ ಭಾಗವಹಿಸುತ್ತಿಲ್ಲ” ಎಂದು ಎಡ್ವರ್ಡ್ ಪ್ರೈಸ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು