AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 02, 2022 | 3:14 PM

Share

ಅಫ್ಘಾನಿಸ್ತಾನದ (Afghanistan) ಪಶ್ಚಿಮ ಪ್ರಾಂತ್ಯವಾದ ಹೆರಾತ್​​ನಲ್ಲಿನಡೆದ ಕಾರ್​ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತ್ಯದ ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ. ಅಂದಹಾಗೇ, ಕ್ರೀಡಾಂಗಣವೊಂದರಲ್ಲಿ ಸ್ಫೋಟವುಂಟಾಗಿದ್ದು, ಈ ವೇಳೆ ಅಲ್ಲಿ ಅನೇಕ ಯುವಕರು ಆಟವಾಡುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಯಾವುದೇ ಸಂಘಟನೆಗಳೂ ಈ ಸ್ಫೋಟದ ಹೊಣೆ ಹೊತ್ತಿಲ್ಲ. ಅಂದರೆ ಇದನ್ನು ಮಾಡಿದ್ದು ನಾವೇ ಎಂದು ಯಾರೂ ಒಪ್ಪಿಕೊಂಡಿಲ್ಲ.

ಇಂದು ಫಿರಂಗಿ ಸ್ಫೋಟ !

ಅಫ್ಘಾನಿಸ್ತಾನದ ಹೆಲ್ಮಂಡ್​ ಪ್ರಾಂತ್ಯದಲ್ಲಿ ಫಿರಂಗಿ ಸ್ಫೋಟವಾಗಿ ಐದು ಮಕ್ಕಳು ಮೃತಪಟ್ಟಿದ್ದಾರೆ.  ಹಾಗೇ ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಹೆಲ್ಮಂಡ್​ ಪ್ರಾಂತ್ಯದ ಮರ್ಜಾ ಜಿಲ್ಲೆಯಲ್ಲಿ ನಡೆದಿದೆ. ಸುಮ್ಮನೆ ಇಡಲಾಗಿದ್ದ ಫಿರಂಗಿಯೊಂದಿಗೆ ಮಕ್ಕಳು ಆಟವಾಡುತ್ತಿದ್ದಾಗ ಅಕಸ್ಮಾತ್ ಆಗಿ ಸ್ಫೋಟಗೊಂಡು ಮಕ್ಕಳು ಮೃತಪಟ್ಟಿದ್ದಾರೆ.

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ. ಇನ್ನು ಹೀಗೆ ಫಿರಂಗಿಗಳು, ರಾಕೆಟ್​​ಗಳಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಇಲ್ಲಿ ನೋಡು ‘ಮಾರಾಯ’: ಮೈ ಆಟೋಗ್ರಾಫ್​ ಚಿತ್ರದಲ್ಲಿ ಹೈಸ್ಕೂಲ್​ ಹುಡುಗನಾಗಿದ್ದ ನಟ ಈಗ ಹೇಗಿದ್ದಾರೆ?

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ