AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 02, 2022 | 3:14 PM

Share

ಅಫ್ಘಾನಿಸ್ತಾನದ (Afghanistan) ಪಶ್ಚಿಮ ಪ್ರಾಂತ್ಯವಾದ ಹೆರಾತ್​​ನಲ್ಲಿನಡೆದ ಕಾರ್​ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತ್ಯದ ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ. ಅಂದಹಾಗೇ, ಕ್ರೀಡಾಂಗಣವೊಂದರಲ್ಲಿ ಸ್ಫೋಟವುಂಟಾಗಿದ್ದು, ಈ ವೇಳೆ ಅಲ್ಲಿ ಅನೇಕ ಯುವಕರು ಆಟವಾಡುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಯಾವುದೇ ಸಂಘಟನೆಗಳೂ ಈ ಸ್ಫೋಟದ ಹೊಣೆ ಹೊತ್ತಿಲ್ಲ. ಅಂದರೆ ಇದನ್ನು ಮಾಡಿದ್ದು ನಾವೇ ಎಂದು ಯಾರೂ ಒಪ್ಪಿಕೊಂಡಿಲ್ಲ.

ಇಂದು ಫಿರಂಗಿ ಸ್ಫೋಟ !

ಅಫ್ಘಾನಿಸ್ತಾನದ ಹೆಲ್ಮಂಡ್​ ಪ್ರಾಂತ್ಯದಲ್ಲಿ ಫಿರಂಗಿ ಸ್ಫೋಟವಾಗಿ ಐದು ಮಕ್ಕಳು ಮೃತಪಟ್ಟಿದ್ದಾರೆ.  ಹಾಗೇ ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಹೆಲ್ಮಂಡ್​ ಪ್ರಾಂತ್ಯದ ಮರ್ಜಾ ಜಿಲ್ಲೆಯಲ್ಲಿ ನಡೆದಿದೆ. ಸುಮ್ಮನೆ ಇಡಲಾಗಿದ್ದ ಫಿರಂಗಿಯೊಂದಿಗೆ ಮಕ್ಕಳು ಆಟವಾಡುತ್ತಿದ್ದಾಗ ಅಕಸ್ಮಾತ್ ಆಗಿ ಸ್ಫೋಟಗೊಂಡು ಮಕ್ಕಳು ಮೃತಪಟ್ಟಿದ್ದಾರೆ.

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ. ಇನ್ನು ಹೀಗೆ ಫಿರಂಗಿಗಳು, ರಾಕೆಟ್​​ಗಳಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಇಲ್ಲಿ ನೋಡು ‘ಮಾರಾಯ’: ಮೈ ಆಟೋಗ್ರಾಫ್​ ಚಿತ್ರದಲ್ಲಿ ಹೈಸ್ಕೂಲ್​ ಹುಡುಗನಾಗಿದ್ದ ನಟ ಈಗ ಹೇಗಿದ್ದಾರೆ?

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು