AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 02, 2022 | 3:14 PM

Share

ಅಫ್ಘಾನಿಸ್ತಾನದ (Afghanistan) ಪಶ್ಚಿಮ ಪ್ರಾಂತ್ಯವಾದ ಹೆರಾತ್​​ನಲ್ಲಿನಡೆದ ಕಾರ್​ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತ್ಯದ ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ. ಅಂದಹಾಗೇ, ಕ್ರೀಡಾಂಗಣವೊಂದರಲ್ಲಿ ಸ್ಫೋಟವುಂಟಾಗಿದ್ದು, ಈ ವೇಳೆ ಅಲ್ಲಿ ಅನೇಕ ಯುವಕರು ಆಟವಾಡುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಯಾವುದೇ ಸಂಘಟನೆಗಳೂ ಈ ಸ್ಫೋಟದ ಹೊಣೆ ಹೊತ್ತಿಲ್ಲ. ಅಂದರೆ ಇದನ್ನು ಮಾಡಿದ್ದು ನಾವೇ ಎಂದು ಯಾರೂ ಒಪ್ಪಿಕೊಂಡಿಲ್ಲ.

ಇಂದು ಫಿರಂಗಿ ಸ್ಫೋಟ !

ಅಫ್ಘಾನಿಸ್ತಾನದ ಹೆಲ್ಮಂಡ್​ ಪ್ರಾಂತ್ಯದಲ್ಲಿ ಫಿರಂಗಿ ಸ್ಫೋಟವಾಗಿ ಐದು ಮಕ್ಕಳು ಮೃತಪಟ್ಟಿದ್ದಾರೆ.  ಹಾಗೇ ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಹೆಲ್ಮಂಡ್​ ಪ್ರಾಂತ್ಯದ ಮರ್ಜಾ ಜಿಲ್ಲೆಯಲ್ಲಿ ನಡೆದಿದೆ. ಸುಮ್ಮನೆ ಇಡಲಾಗಿದ್ದ ಫಿರಂಗಿಯೊಂದಿಗೆ ಮಕ್ಕಳು ಆಟವಾಡುತ್ತಿದ್ದಾಗ ಅಕಸ್ಮಾತ್ ಆಗಿ ಸ್ಫೋಟಗೊಂಡು ಮಕ್ಕಳು ಮೃತಪಟ್ಟಿದ್ದಾರೆ.

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ. ಇನ್ನು ಹೀಗೆ ಫಿರಂಗಿಗಳು, ರಾಕೆಟ್​​ಗಳಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಇಲ್ಲಿ ನೋಡು ‘ಮಾರಾಯ’: ಮೈ ಆಟೋಗ್ರಾಫ್​ ಚಿತ್ರದಲ್ಲಿ ಹೈಸ್ಕೂಲ್​ ಹುಡುಗನಾಗಿದ್ದ ನಟ ಈಗ ಹೇಗಿದ್ದಾರೆ?

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ