AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 02, 2022 | 3:14 PM

Share

ಅಫ್ಘಾನಿಸ್ತಾನದ (Afghanistan) ಪಶ್ಚಿಮ ಪ್ರಾಂತ್ಯವಾದ ಹೆರಾತ್​​ನಲ್ಲಿನಡೆದ ಕಾರ್​ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತ್ಯದ ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ. ಅಂದಹಾಗೇ, ಕ್ರೀಡಾಂಗಣವೊಂದರಲ್ಲಿ ಸ್ಫೋಟವುಂಟಾಗಿದ್ದು, ಈ ವೇಳೆ ಅಲ್ಲಿ ಅನೇಕ ಯುವಕರು ಆಟವಾಡುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಯಾವುದೇ ಸಂಘಟನೆಗಳೂ ಈ ಸ್ಫೋಟದ ಹೊಣೆ ಹೊತ್ತಿಲ್ಲ. ಅಂದರೆ ಇದನ್ನು ಮಾಡಿದ್ದು ನಾವೇ ಎಂದು ಯಾರೂ ಒಪ್ಪಿಕೊಂಡಿಲ್ಲ.

ಇಂದು ಫಿರಂಗಿ ಸ್ಫೋಟ !

ಅಫ್ಘಾನಿಸ್ತಾನದ ಹೆಲ್ಮಂಡ್​ ಪ್ರಾಂತ್ಯದಲ್ಲಿ ಫಿರಂಗಿ ಸ್ಫೋಟವಾಗಿ ಐದು ಮಕ್ಕಳು ಮೃತಪಟ್ಟಿದ್ದಾರೆ.  ಹಾಗೇ ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಹೆಲ್ಮಂಡ್​ ಪ್ರಾಂತ್ಯದ ಮರ್ಜಾ ಜಿಲ್ಲೆಯಲ್ಲಿ ನಡೆದಿದೆ. ಸುಮ್ಮನೆ ಇಡಲಾಗಿದ್ದ ಫಿರಂಗಿಯೊಂದಿಗೆ ಮಕ್ಕಳು ಆಟವಾಡುತ್ತಿದ್ದಾಗ ಅಕಸ್ಮಾತ್ ಆಗಿ ಸ್ಫೋಟಗೊಂಡು ಮಕ್ಕಳು ಮೃತಪಟ್ಟಿದ್ದಾರೆ.

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ. ಇನ್ನು ಹೀಗೆ ಫಿರಂಗಿಗಳು, ರಾಕೆಟ್​​ಗಳಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಇಲ್ಲಿ ನೋಡು ‘ಮಾರಾಯ’: ಮೈ ಆಟೋಗ್ರಾಫ್​ ಚಿತ್ರದಲ್ಲಿ ಹೈಸ್ಕೂಲ್​ ಹುಡುಗನಾಗಿದ್ದ ನಟ ಈಗ ಹೇಗಿದ್ದಾರೆ?

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು