AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಪ್ರತಿಭಟನೆ ಕಚೇರಿ ತಲುಪುತ್ತಿದ್ದಂತೆ ಗ್ಯಾಸ್ ವಿತರಣೆಗೆ ಅಜ್ಞಾತ ಸ್ಥಳದಿಂದಲೇ ಆದೇಶಿಸಿದ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ

ಇಂದು ಮಧ್ಯಾಹ್ನ ಮೊದಲ ಹಡಗು ಕೆರವಲಪಿಟಿಯಕ್ಕೆ ಆಗಮಿಸುತ್ತಿದ್ದಂತೆ ಅನಿಲ ಇಳಿಸುವಿಕೆ ಮತ್ತು ವಿತರಣೆಯನ್ನು ಕೈಗೊಳ್ಳುವಂತೆ ಅಧ್ಯಕ್ಷ ರಾಜಪಕ್ಸೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜನರ ಪ್ರತಿಭಟನೆ ಕಚೇರಿ ತಲುಪುತ್ತಿದ್ದಂತೆ ಗ್ಯಾಸ್ ವಿತರಣೆಗೆ ಅಜ್ಞಾತ ಸ್ಥಳದಿಂದಲೇ ಆದೇಶಿಸಿದ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ
ಗೊಟಬಯ ರಾಜಪಕ್ಸೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 10, 2022 | 8:52 PM

Share

ಕೊಲಂಬೊ: ಪ್ರತಿಭಟನಾಕಾರರು ತಮ್ಮ ಕಚೇರಿ ಮತ್ತು ಅಧಿಕೃತ ನಿವಾಸ ಎರಡನ್ನೂ ಆಕ್ರಮಿಸಿಕೊಂಡಾಗಿನಿಂದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ (Gotabaya Rajapaksa) ಎಲ್ಲಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಇಂಧನವಿಲ್ಲದೆ ಪರಿತಪಿಸುತ್ತಿರುವ ಶ್ರೀಲಂಕಾಕ್ಕೆ (Sri Lanka )ಇದೀಗ 3,700 ಮೆಟ್ರಿಕ್ ಟನ್ ಎಲ್‌ಪಿ ಗ್ಯಾಸ್ (LPG) ಪಡೆದಿದ್ದು ,ಅಡುಗೆ ಅನಿಲವನ್ನು ಸುಗಮವಾಗಿ ವಿತರಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ ಎಂದು ಅವರ ಕಚೇರಿ ಭಾನುವಾರ ತಿಳಿಸಿದೆ. ಶ್ರೀಲಂಕಾ ತೀವ್ರವಾದ ಅನಿಲ ಕೊರತೆಯ ಅನುಭವಿಸುತ್ತಿದ್ದು ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ ಜನರು ದೇಶದಾದ್ಯಂತ ರಸ್ತೆಗಳನ್ನು ನಿರ್ಬಂಧಿಸುತ್ತಿದ್ದಾರೆ. ಇಂದು ಮಧ್ಯಾಹ್ನ ಮೊದಲ ಹಡಗು ಕೆರವಲಪಿಟಿಯಕ್ಕೆ ಆಗಮಿಸುತ್ತಿದ್ದಂತೆ ಅನಿಲ ಇಳಿಸುವಿಕೆ ಮತ್ತು ವಿತರಣೆಯನ್ನು ಕೈಗೊಳ್ಳುವಂತೆ ಅಧ್ಯಕ್ಷ ರಾಜಪಕ್ಸೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 3,740 ಮೆಟ್ರಿಕ್ ಟನ್ ಅನಿಲವನ್ನು ಸಾಗಿಸುವ ಎರಡನೇ ಹಡಗು ಜುಲೈ 11 ರಂದು ಬರಲಿದೆ ಮತ್ತು 3,200 ಮೆಟ್ರಿಕ್ ಟನ್ ಅನಿಲವನ್ನು ಹೊತ್ತ ಮೂರನೇ ಹಡಗು ಜುಲೈ 15 ರಂದು ತಲುಪಲಿದೆ ಎಂದು ಶ್ರೀಲಂಕಾ ಮಾಧ್ಯಮಗಳು ತಿಳಿಸಿವೆ.

ಪ್ರತಿಭಟನಾಕಾರರ ಒಂದು ದೊಡ್ಡ ಗುಂಪು ಅಧ್ಯಕ್ಷರ  ಮತ್ತು ಪ್ರಧಾನ ಮಂತ್ರಿಗಳ ಸಾಂಪ್ರದಾಯಿಕ ಆಡಳಿತಾತ್ಮಕ ಕಟ್ಟಡಗಳನ್ನು ಆಕ್ರಮಿಸುವುದನ್ನು ಮುಂದುವರೆಸಿದೆ. ಇವು ಅಧಿಕೃತ ನಿವಾಸಗಳಾಗಿಯೂ ಕಾರ್ಯನಿರ್ವಹಿಸುತ್ತವೆ. ಭಾನುವಾರ ಯಾವುದೇ ಪ್ರಮುಖ ಭದ್ರತಾ ಉಲ್ಲಂಘನೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರದಂದು ಗುಂಪೊಂದು ಕಟ್ಟಡಕ್ಕೆ ನುಗ್ಗಿದಾಗ ಅಧ್ಯಕ್ಷ ರಾಜಪಕ್ಸೆ ಅಧ್ಯಕ್ಷೀಯ ಭವನದಲ್ಲಿ ಇರಲಿಲ್ಲ.

ಇದನ್ನೂ ಓದಿ
Image
Sri Lanka Crisis: ಪ್ರವಾಸಿ ತಾಣದಂತಾದ ಶ್ರೀಲಂಕಾ ಅಧ್ಯಕ್ಷರ ನಿವಾಸ; ಮನೆಯೊಳಗೆ ನುಗ್ಗಿ ಸಂಭ್ರಮಿಸಿದ ಪ್ರತಿಭಟನಾಕಾರರು
Image
Sri Lanka Economic Crisis: ಅಧ್ಯಕ್ಷರ ನಿವಾಸದಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಯ್ತು ಎಂದ ಪ್ರತಿಭಟನಾಕಾರರು
Image
Sri Lanka Crisis: ಬೈಕಿಂದ ಇಳಿದು ಹೆಲ್ಮೆಟ್ ಎಸೆದು ಪ್ರತಿಭಟನಾಕಾರರನ್ನು ಬೆಂಬಲಿಸಿದ ಶ್ರೀಲಂಕಾದ ಪೊಲೀಸಪ್ಪ ವೈರಲ್
Image
ಶ್ರೀಲಂಕಾ ಬಿಕ್ಕಟ್ಟು: ಪ್ರತಿಭಟನೆಕಾರರ ಕ್ರಮವನ್ನು ಲೆಜೆಂಡರಿ ಕ್ರಿಕೆಟರ್​ಗಳಾದ ಸಂಗಕ್ಕಾರ ಮತ್ತು ಜಯಸೂರ್ಯ ಸಮರ್ಥಿಸಿದರು

22 ಮಿಲಿಯನ್ ಜನರಿರುವ ದೇಶವಾದ ಶ್ರೀಲಂಕಾ ಆರ್ಥಿಕ ಕೊರತೆ ಅನುಭವಿಸುತ್ತಿದೆ. ವಿದೇಶಿ ವಿನಿಮಯದ ತೀವ್ರ ಕೊರತೆಯಿಂದ ದುರ್ಬಲಗೊಂಡಿದೆ. ಹಾಗಾಗಿ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಅಗತ್ಯ ಆಮದುಗಳಿಗೆ ಪಾವತಿಸಲು ಹೆಣಗಾಡುತ್ತಿದೆ.

Published On - 8:37 pm, Sun, 10 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ