AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಯೋಗಕ್ಕೆ ಹಿನ್ನಡೆ: ಲಸಿಕೆ ಪ್ರಯೋಗದಲ್ಲಿದ್ದ ವ್ಯಕ್ತಿಗೆ ಕಾಯಿಲೆ!

ಕೊರೊನಾ ಸೋಂಕಿನಿಂದ ಬಳಲಿರುವ ಇಡೀ ವಿಶ್ವವೇ ಸೋಂಕು ನಿವಾರಣೆಯ ಲಸಿಕೆ ಪತ್ತೆ ಹಚ್ಚುವಲ್ಲಿ ನಾ ಮುಂದೆ ತಾ ಮುಂದೆ ಎಂಬಂತೆ ಲಸಿಕೆಯ ಹಿಂದೆ ಬಿದ್ದಿವೆ. ಆದರೆ ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಆಘಾತಕಾರಿ ವಿಚಾರ ಹೊರಬಿದ್ದಿದೆ. ಕೊರೊನಾ ವೈರಸ್ ವಿರುದ್ಧದ ಲಸಿಕೆಯ ಪ್ರಯೋಗಕ್ಕೆ ಹಿನ್ನಡೆಯಾಗಿದ್ದು, ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅಸ್ಟ್ರಾಜನಿಕ್ ಕಂಪನಿಯಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ತಡೆ ನೀಡಲಾಗಿದೆ. ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಹೌದು. ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ […]

ಕೊರೊನಾ ಲಸಿಕೆ ಪ್ರಯೋಗಕ್ಕೆ ಹಿನ್ನಡೆ: ಲಸಿಕೆ ಪ್ರಯೋಗದಲ್ಲಿದ್ದ ವ್ಯಕ್ತಿಗೆ ಕಾಯಿಲೆ!
ಕೊರೊನಾ ವ್ಯಾಕ್ಸಿನ್
ಸಾಧು ಶ್ರೀನಾಥ್​
|

Updated on: Sep 09, 2020 | 10:44 AM

Share

ಕೊರೊನಾ ಸೋಂಕಿನಿಂದ ಬಳಲಿರುವ ಇಡೀ ವಿಶ್ವವೇ ಸೋಂಕು ನಿವಾರಣೆಯ ಲಸಿಕೆ ಪತ್ತೆ ಹಚ್ಚುವಲ್ಲಿ ನಾ ಮುಂದೆ ತಾ ಮುಂದೆ ಎಂಬಂತೆ ಲಸಿಕೆಯ ಹಿಂದೆ ಬಿದ್ದಿವೆ. ಆದರೆ ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಆಘಾತಕಾರಿ ವಿಚಾರ ಹೊರಬಿದ್ದಿದೆ.

ಕೊರೊನಾ ವೈರಸ್ ವಿರುದ್ಧದ ಲಸಿಕೆಯ ಪ್ರಯೋಗಕ್ಕೆ ಹಿನ್ನಡೆಯಾಗಿದ್ದು, ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅಸ್ಟ್ರಾಜನಿಕ್ ಕಂಪನಿಯಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ತಡೆ ನೀಡಲಾಗಿದೆ.

ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಹೌದು. ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದು, ವ್ಯಕ್ತಿಗೆ ಕಾಣಿಸಿಕೊಂಡಿರುವುದು ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಾಗಿ ಸ್ವಪ್ರೇರಣೆಯಿಂದ 3ನೇ ಹಂತದ ಲಸಿಕೆ ಪ್ರಯೋಗವನ್ನು ಅಸ್ಟ್ರಾಜನಿಕ್ ಕಂಪನಿ ನಿಲ್ಲಿಸಿದೆ.

ಬ್ರಿಟನ್​ನಲ್ಲಿ ಲಸಿಕೆ ಪ್ರಯೋಗಕ್ಕೆ ತಾತ್ಕಾಲಿಕ ತಡೆ ಕೊರೊನಾ ವೈರಸ್ ವಿರುದ್ಧದ ಲಸಿಕೆ ಪ್ರಯೋಗದಲ್ಲಿ ಮುಂಚೂಣಿಯಲ್ಲಿದ್ದ ಅಸ್ಟ್ರಾಜನಿಕ್ ಕಂಪನಿಯ ಲಸಿಕೆಯ ಬಗ್ಗೆ ಈಗ ಸ್ವತಂತ್ರ ಸಮಿತಿಯಿಂದ ಲಸಿಕೆಯ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಲಿದೆ. ಬ್ರಿಟನ್​ನಲ್ಲಿ ಲಸಿಕೆ ಪ್ರಯೋಗಕ್ಕೆ ತಾತ್ಕಾಲಿಕ ತಡೆ ನೀಡಿರುವುದರಿಂದ ಅಸ್ಟ್ರಾಜನಿಕ್ ಕಂಪನಿಯ ಷೇರುಗಳ ಬೆಲೆ ಶೇಕಡಾ 6 ರಷ್ಟು ಕುಸಿತ‌‌ ಕಂಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆಯ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜನಿಕ್ ಕಂಪನಿ ಆಕ್ಸ್‌ಫರ್ಡ್ ವಿವಿ ಜೊತೆ ಸೇರಿ ಲಸಿಕೆ ಅಭಿವೃದ್ಧಿಪಡಿಸುತ್ತಿತ್ತು. 3 ನೇ ಹಂತ ಪ್ರವೇಶಿಸಿದ 3 ಕಂಪನಿಗಳಲ್ಲಿ ಅಸ್ಟ್ರಾಜನಿಕ್ ಕೂಡ ಒಂದಾಗಿತ್ತು. ಅಸ್ಟ್ರಾಜನಿಕ್- ಆಕ್ಸ್‌ಫರ್ಡ್ ವಿವಿ ಜೊತೆಗೆ ಭಾರತದ ಸೆರಮ್ ಇನ್ಸ್ಟಿಟ್ಯೂಟ್ ನಿಂದ ಲಸಿಕೆ ಅಭಿವೃದ್ಧಿ, ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿದ್ದವು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ