AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಯೋಗಕ್ಕೆ ಹಿನ್ನಡೆ: ಲಸಿಕೆ ಪ್ರಯೋಗದಲ್ಲಿದ್ದ ವ್ಯಕ್ತಿಗೆ ಕಾಯಿಲೆ!

ಕೊರೊನಾ ಸೋಂಕಿನಿಂದ ಬಳಲಿರುವ ಇಡೀ ವಿಶ್ವವೇ ಸೋಂಕು ನಿವಾರಣೆಯ ಲಸಿಕೆ ಪತ್ತೆ ಹಚ್ಚುವಲ್ಲಿ ನಾ ಮುಂದೆ ತಾ ಮುಂದೆ ಎಂಬಂತೆ ಲಸಿಕೆಯ ಹಿಂದೆ ಬಿದ್ದಿವೆ. ಆದರೆ ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಆಘಾತಕಾರಿ ವಿಚಾರ ಹೊರಬಿದ್ದಿದೆ. ಕೊರೊನಾ ವೈರಸ್ ವಿರುದ್ಧದ ಲಸಿಕೆಯ ಪ್ರಯೋಗಕ್ಕೆ ಹಿನ್ನಡೆಯಾಗಿದ್ದು, ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅಸ್ಟ್ರಾಜನಿಕ್ ಕಂಪನಿಯಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ತಡೆ ನೀಡಲಾಗಿದೆ. ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಹೌದು. ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ […]

ಕೊರೊನಾ ಲಸಿಕೆ ಪ್ರಯೋಗಕ್ಕೆ ಹಿನ್ನಡೆ: ಲಸಿಕೆ ಪ್ರಯೋಗದಲ್ಲಿದ್ದ ವ್ಯಕ್ತಿಗೆ ಕಾಯಿಲೆ!
ಕೊರೊನಾ ವ್ಯಾಕ್ಸಿನ್
ಸಾಧು ಶ್ರೀನಾಥ್​
|

Updated on: Sep 09, 2020 | 10:44 AM

Share

ಕೊರೊನಾ ಸೋಂಕಿನಿಂದ ಬಳಲಿರುವ ಇಡೀ ವಿಶ್ವವೇ ಸೋಂಕು ನಿವಾರಣೆಯ ಲಸಿಕೆ ಪತ್ತೆ ಹಚ್ಚುವಲ್ಲಿ ನಾ ಮುಂದೆ ತಾ ಮುಂದೆ ಎಂಬಂತೆ ಲಸಿಕೆಯ ಹಿಂದೆ ಬಿದ್ದಿವೆ. ಆದರೆ ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಆಘಾತಕಾರಿ ವಿಚಾರ ಹೊರಬಿದ್ದಿದೆ.

ಕೊರೊನಾ ವೈರಸ್ ವಿರುದ್ಧದ ಲಸಿಕೆಯ ಪ್ರಯೋಗಕ್ಕೆ ಹಿನ್ನಡೆಯಾಗಿದ್ದು, ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅಸ್ಟ್ರಾಜನಿಕ್ ಕಂಪನಿಯಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ತಡೆ ನೀಡಲಾಗಿದೆ.

ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಹೌದು. ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದು, ವ್ಯಕ್ತಿಗೆ ಕಾಣಿಸಿಕೊಂಡಿರುವುದು ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಾಗಿ ಸ್ವಪ್ರೇರಣೆಯಿಂದ 3ನೇ ಹಂತದ ಲಸಿಕೆ ಪ್ರಯೋಗವನ್ನು ಅಸ್ಟ್ರಾಜನಿಕ್ ಕಂಪನಿ ನಿಲ್ಲಿಸಿದೆ.

ಬ್ರಿಟನ್​ನಲ್ಲಿ ಲಸಿಕೆ ಪ್ರಯೋಗಕ್ಕೆ ತಾತ್ಕಾಲಿಕ ತಡೆ ಕೊರೊನಾ ವೈರಸ್ ವಿರುದ್ಧದ ಲಸಿಕೆ ಪ್ರಯೋಗದಲ್ಲಿ ಮುಂಚೂಣಿಯಲ್ಲಿದ್ದ ಅಸ್ಟ್ರಾಜನಿಕ್ ಕಂಪನಿಯ ಲಸಿಕೆಯ ಬಗ್ಗೆ ಈಗ ಸ್ವತಂತ್ರ ಸಮಿತಿಯಿಂದ ಲಸಿಕೆಯ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಲಿದೆ. ಬ್ರಿಟನ್​ನಲ್ಲಿ ಲಸಿಕೆ ಪ್ರಯೋಗಕ್ಕೆ ತಾತ್ಕಾಲಿಕ ತಡೆ ನೀಡಿರುವುದರಿಂದ ಅಸ್ಟ್ರಾಜನಿಕ್ ಕಂಪನಿಯ ಷೇರುಗಳ ಬೆಲೆ ಶೇಕಡಾ 6 ರಷ್ಟು ಕುಸಿತ‌‌ ಕಂಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆಯ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜನಿಕ್ ಕಂಪನಿ ಆಕ್ಸ್‌ಫರ್ಡ್ ವಿವಿ ಜೊತೆ ಸೇರಿ ಲಸಿಕೆ ಅಭಿವೃದ್ಧಿಪಡಿಸುತ್ತಿತ್ತು. 3 ನೇ ಹಂತ ಪ್ರವೇಶಿಸಿದ 3 ಕಂಪನಿಗಳಲ್ಲಿ ಅಸ್ಟ್ರಾಜನಿಕ್ ಕೂಡ ಒಂದಾಗಿತ್ತು. ಅಸ್ಟ್ರಾಜನಿಕ್- ಆಕ್ಸ್‌ಫರ್ಡ್ ವಿವಿ ಜೊತೆಗೆ ಭಾರತದ ಸೆರಮ್ ಇನ್ಸ್ಟಿಟ್ಯೂಟ್ ನಿಂದ ಲಸಿಕೆ ಅಭಿವೃದ್ಧಿ, ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿದ್ದವು.

Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!