AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಯೋಗಕ್ಕೆ ಹಿನ್ನಡೆ: ಲಸಿಕೆ ಪ್ರಯೋಗದಲ್ಲಿದ್ದ ವ್ಯಕ್ತಿಗೆ ಕಾಯಿಲೆ!

ಕೊರೊನಾ ಸೋಂಕಿನಿಂದ ಬಳಲಿರುವ ಇಡೀ ವಿಶ್ವವೇ ಸೋಂಕು ನಿವಾರಣೆಯ ಲಸಿಕೆ ಪತ್ತೆ ಹಚ್ಚುವಲ್ಲಿ ನಾ ಮುಂದೆ ತಾ ಮುಂದೆ ಎಂಬಂತೆ ಲಸಿಕೆಯ ಹಿಂದೆ ಬಿದ್ದಿವೆ. ಆದರೆ ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಆಘಾತಕಾರಿ ವಿಚಾರ ಹೊರಬಿದ್ದಿದೆ. ಕೊರೊನಾ ವೈರಸ್ ವಿರುದ್ಧದ ಲಸಿಕೆಯ ಪ್ರಯೋಗಕ್ಕೆ ಹಿನ್ನಡೆಯಾಗಿದ್ದು, ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅಸ್ಟ್ರಾಜನಿಕ್ ಕಂಪನಿಯಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ತಡೆ ನೀಡಲಾಗಿದೆ. ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಹೌದು. ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ […]

ಕೊರೊನಾ ಲಸಿಕೆ ಪ್ರಯೋಗಕ್ಕೆ ಹಿನ್ನಡೆ: ಲಸಿಕೆ ಪ್ರಯೋಗದಲ್ಲಿದ್ದ ವ್ಯಕ್ತಿಗೆ ಕಾಯಿಲೆ!
ಕೊರೊನಾ ವ್ಯಾಕ್ಸಿನ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 09, 2020 | 10:44 AM

Share

ಕೊರೊನಾ ಸೋಂಕಿನಿಂದ ಬಳಲಿರುವ ಇಡೀ ವಿಶ್ವವೇ ಸೋಂಕು ನಿವಾರಣೆಯ ಲಸಿಕೆ ಪತ್ತೆ ಹಚ್ಚುವಲ್ಲಿ ನಾ ಮುಂದೆ ತಾ ಮುಂದೆ ಎಂಬಂತೆ ಲಸಿಕೆಯ ಹಿಂದೆ ಬಿದ್ದಿವೆ. ಆದರೆ ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಆಘಾತಕಾರಿ ವಿಚಾರ ಹೊರಬಿದ್ದಿದೆ.

ಕೊರೊನಾ ವೈರಸ್ ವಿರುದ್ಧದ ಲಸಿಕೆಯ ಪ್ರಯೋಗಕ್ಕೆ ಹಿನ್ನಡೆಯಾಗಿದ್ದು, ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅಸ್ಟ್ರಾಜನಿಕ್ ಕಂಪನಿಯಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ತಡೆ ನೀಡಲಾಗಿದೆ.

ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಹೌದು. ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದು, ವ್ಯಕ್ತಿಗೆ ಕಾಣಿಸಿಕೊಂಡಿರುವುದು ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಾಗಿ ಸ್ವಪ್ರೇರಣೆಯಿಂದ 3ನೇ ಹಂತದ ಲಸಿಕೆ ಪ್ರಯೋಗವನ್ನು ಅಸ್ಟ್ರಾಜನಿಕ್ ಕಂಪನಿ ನಿಲ್ಲಿಸಿದೆ.

ಬ್ರಿಟನ್​ನಲ್ಲಿ ಲಸಿಕೆ ಪ್ರಯೋಗಕ್ಕೆ ತಾತ್ಕಾಲಿಕ ತಡೆ ಕೊರೊನಾ ವೈರಸ್ ವಿರುದ್ಧದ ಲಸಿಕೆ ಪ್ರಯೋಗದಲ್ಲಿ ಮುಂಚೂಣಿಯಲ್ಲಿದ್ದ ಅಸ್ಟ್ರಾಜನಿಕ್ ಕಂಪನಿಯ ಲಸಿಕೆಯ ಬಗ್ಗೆ ಈಗ ಸ್ವತಂತ್ರ ಸಮಿತಿಯಿಂದ ಲಸಿಕೆಯ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಲಿದೆ. ಬ್ರಿಟನ್​ನಲ್ಲಿ ಲಸಿಕೆ ಪ್ರಯೋಗಕ್ಕೆ ತಾತ್ಕಾಲಿಕ ತಡೆ ನೀಡಿರುವುದರಿಂದ ಅಸ್ಟ್ರಾಜನಿಕ್ ಕಂಪನಿಯ ಷೇರುಗಳ ಬೆಲೆ ಶೇಕಡಾ 6 ರಷ್ಟು ಕುಸಿತ‌‌ ಕಂಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆಯ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜನಿಕ್ ಕಂಪನಿ ಆಕ್ಸ್‌ಫರ್ಡ್ ವಿವಿ ಜೊತೆ ಸೇರಿ ಲಸಿಕೆ ಅಭಿವೃದ್ಧಿಪಡಿಸುತ್ತಿತ್ತು. 3 ನೇ ಹಂತ ಪ್ರವೇಶಿಸಿದ 3 ಕಂಪನಿಗಳಲ್ಲಿ ಅಸ್ಟ್ರಾಜನಿಕ್ ಕೂಡ ಒಂದಾಗಿತ್ತು. ಅಸ್ಟ್ರಾಜನಿಕ್- ಆಕ್ಸ್‌ಫರ್ಡ್ ವಿವಿ ಜೊತೆಗೆ ಭಾರತದ ಸೆರಮ್ ಇನ್ಸ್ಟಿಟ್ಯೂಟ್ ನಿಂದ ಲಸಿಕೆ ಅಭಿವೃದ್ಧಿ, ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿದ್ದವು.

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ