AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ನಲ್ಲಿ ಬಂದೂಕುಧಾರಿಯಿಂದ ಫೈರಿಂಗ್‌, ಕನಿಷ್ಠ 15 ಜನ ಸಾವು, ಹಲವರಿಗೆ ಗಾಯ

ಇರಾನ್​ನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ತಲೆದೋರಿರುವ ಮಧ್ಯೆ ಶಿಯಾ ಸಮುದಾಯದ ಯಾತ್ರಾಸ್ಥಳದಲ್ಲಿ ಭಕ್ತರ ಮೇಲೆ ಬಂದೂಕುಧಾರಿಗಳು ಫೈರಿಂಗ್‌ ನಡೆಸಿದ್ದಾರೆ.

ಇರಾನ್​ನಲ್ಲಿ ಬಂದೂಕುಧಾರಿಯಿಂದ ಫೈರಿಂಗ್‌, ಕನಿಷ್ಠ 15 ಜನ ಸಾವು, ಹಲವರಿಗೆ ಗಾಯ
Gunmen attack Shiite holy site in Iran
TV9 Web
| Edited By: |

Updated on:Oct 26, 2022 | 10:40 PM

Share

ಇರಾನ್ ನಲ್ಲಿ ವಸ್ತ್ರ ಸಂಹಿತೆ ವಿರೋಧಿ ಚಳವಳಿ ವ್ಯಾಪಕಗೊಂಡಿದ್ದು, ಪ್ರತಿಭಟನೆಯ ಕಾವು ತೀವ್ರಗೊಂಡಿದೆ. ಇದರ ಮಧ್ಯೆ ಬಂದೂಕುಧಾರಿಗಳು ಶಿಯಾ ಸಮುದಾಯದ ಪ್ರಮುಖ ಪ್ರಾರ್ಥನಾ ಮಂದಿರದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ 15 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶಿರಾಜ್​ ನಗರದಲ್ಲಿ ಈ ದುರ್ಘಟನೆ ನಡೆದಿದೆ.

ಶಿರಾಜ್‌ ನಗರದಲ್ಲಿ ಶಿಯಾ ಸಮುದಾಯದ ಭಕ್ತರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದೆ. ಇಬ್ಬರು ಬಂದೂಕುಧಾರಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಇರಾನ್​ನಲ್ಲಿ ಪ್ರತಿಭಟನೆಗಳು ಮುಂದುವರಿದಿರುವಂತೆಯೇ ಅಲ್ಲಿನ ಪರಮಾಣು ಶಕ್ತಿ ಸಂಸ್ಥೆಯ ವಿವರಗಳನ್ನು ಹ್ಯಾಕ್ ಮಾಡಲಾಗಿದೆ!

ಈ ಹಿಂದೆ ಸುನ್ನಿ ಉಗ್ರಗಾಮಿಗಳು ಬಹುಸಂಖ್ಯಾತ ಶಿಯಾ ಸಮುದಾಯದ ಪವಿತ್ರ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದರು. ಕಳೆದ ಹಲವು ದಿನಗಳಿಂದ ಇರಾನ್​ ಸರ್ಕಾರದ ವಿರುದ್ಧ ವಸ್ತ್ರ ಸಂಹಿತೆ ವಿಚಾರ ಸೇರಿದಂತೆ ಹಲವು ವಿಚಾರಕ್ಕೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದರ ಮಧ್ಯೆ ಈ ದಾಳಿ ನಡೆಸಿದ್ದು, ಆತಂಕಕ್ಕೆ ಕಾರಣವಾಗಿದೆ.

ಇರಾನ್ ನ ಕಟ್ಟುನಿಟ್ಟಾದ ಇಸ್ಲಾಮಿಕ್ ವಸ್ತ್ರಸಂಹಿತೆಯನ್ನು ಉಲ್ಲಂಘಿಸಿ ಬಂಧನಕ್ಕೊಳಗಾದ 22-ವರ್ಷ-ವಯಸ್ಸಿನ ಮಹ್ಸಾ ಅಮಿನಿ ಕಸ್ಟಡಿಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ನಂತರ ಆ ದೇಶದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ತಲೆದೋರಿದೆ. ದೇಶದಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಸರ್ಕಾರ ಬಲಪ್ರಯೋಗ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಅಸಲಿಗೆ ಇರಾನಲ್ಲಿ ಮಹಿಳೆಯರಿಗೆ ಕಡ್ಡಾಯಗೊಳಿಸಿರುವ ಹಿಜಾಬ್​ ಅನ್ನು ವಿರೋಧಿಸಿ ಪ್ರತಿಭಟನೆಗಳು ಶುರುವಾಗಿದ್ದು. ಆದರೆ ಕ್ರಮೇಣ ಪ್ರತಿಭಟನೆಗಳು ಅಲ್ಲಿನ ಸರ್ಕಾರವನ್ನು ನಡೆಸುತ್ತಿರುವ ಧಾರ್ಮಿಕ ಗುರುಗಳ (ಮೌಲ್ವಿ) ಕಡೆ ತಿರುಗಿದ್ದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

Published On - 10:36 pm, Wed, 26 October 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ