AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ನಲ್ಲಿ ಬಂದೂಕುಧಾರಿಯಿಂದ ಫೈರಿಂಗ್‌, ಕನಿಷ್ಠ 15 ಜನ ಸಾವು, ಹಲವರಿಗೆ ಗಾಯ

ಇರಾನ್​ನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ತಲೆದೋರಿರುವ ಮಧ್ಯೆ ಶಿಯಾ ಸಮುದಾಯದ ಯಾತ್ರಾಸ್ಥಳದಲ್ಲಿ ಭಕ್ತರ ಮೇಲೆ ಬಂದೂಕುಧಾರಿಗಳು ಫೈರಿಂಗ್‌ ನಡೆಸಿದ್ದಾರೆ.

ಇರಾನ್​ನಲ್ಲಿ ಬಂದೂಕುಧಾರಿಯಿಂದ ಫೈರಿಂಗ್‌, ಕನಿಷ್ಠ 15 ಜನ ಸಾವು, ಹಲವರಿಗೆ ಗಾಯ
Gunmen attack Shiite holy site in Iran
TV9 Web
| Edited By: |

Updated on:Oct 26, 2022 | 10:40 PM

Share

ಇರಾನ್ ನಲ್ಲಿ ವಸ್ತ್ರ ಸಂಹಿತೆ ವಿರೋಧಿ ಚಳವಳಿ ವ್ಯಾಪಕಗೊಂಡಿದ್ದು, ಪ್ರತಿಭಟನೆಯ ಕಾವು ತೀವ್ರಗೊಂಡಿದೆ. ಇದರ ಮಧ್ಯೆ ಬಂದೂಕುಧಾರಿಗಳು ಶಿಯಾ ಸಮುದಾಯದ ಪ್ರಮುಖ ಪ್ರಾರ್ಥನಾ ಮಂದಿರದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ 15 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶಿರಾಜ್​ ನಗರದಲ್ಲಿ ಈ ದುರ್ಘಟನೆ ನಡೆದಿದೆ.

ಶಿರಾಜ್‌ ನಗರದಲ್ಲಿ ಶಿಯಾ ಸಮುದಾಯದ ಭಕ್ತರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದೆ. ಇಬ್ಬರು ಬಂದೂಕುಧಾರಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಇರಾನ್​ನಲ್ಲಿ ಪ್ರತಿಭಟನೆಗಳು ಮುಂದುವರಿದಿರುವಂತೆಯೇ ಅಲ್ಲಿನ ಪರಮಾಣು ಶಕ್ತಿ ಸಂಸ್ಥೆಯ ವಿವರಗಳನ್ನು ಹ್ಯಾಕ್ ಮಾಡಲಾಗಿದೆ!

ಈ ಹಿಂದೆ ಸುನ್ನಿ ಉಗ್ರಗಾಮಿಗಳು ಬಹುಸಂಖ್ಯಾತ ಶಿಯಾ ಸಮುದಾಯದ ಪವಿತ್ರ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದರು. ಕಳೆದ ಹಲವು ದಿನಗಳಿಂದ ಇರಾನ್​ ಸರ್ಕಾರದ ವಿರುದ್ಧ ವಸ್ತ್ರ ಸಂಹಿತೆ ವಿಚಾರ ಸೇರಿದಂತೆ ಹಲವು ವಿಚಾರಕ್ಕೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದರ ಮಧ್ಯೆ ಈ ದಾಳಿ ನಡೆಸಿದ್ದು, ಆತಂಕಕ್ಕೆ ಕಾರಣವಾಗಿದೆ.

ಇರಾನ್ ನ ಕಟ್ಟುನಿಟ್ಟಾದ ಇಸ್ಲಾಮಿಕ್ ವಸ್ತ್ರಸಂಹಿತೆಯನ್ನು ಉಲ್ಲಂಘಿಸಿ ಬಂಧನಕ್ಕೊಳಗಾದ 22-ವರ್ಷ-ವಯಸ್ಸಿನ ಮಹ್ಸಾ ಅಮಿನಿ ಕಸ್ಟಡಿಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ನಂತರ ಆ ದೇಶದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ತಲೆದೋರಿದೆ. ದೇಶದಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಸರ್ಕಾರ ಬಲಪ್ರಯೋಗ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಅಸಲಿಗೆ ಇರಾನಲ್ಲಿ ಮಹಿಳೆಯರಿಗೆ ಕಡ್ಡಾಯಗೊಳಿಸಿರುವ ಹಿಜಾಬ್​ ಅನ್ನು ವಿರೋಧಿಸಿ ಪ್ರತಿಭಟನೆಗಳು ಶುರುವಾಗಿದ್ದು. ಆದರೆ ಕ್ರಮೇಣ ಪ್ರತಿಭಟನೆಗಳು ಅಲ್ಲಿನ ಸರ್ಕಾರವನ್ನು ನಡೆಸುತ್ತಿರುವ ಧಾರ್ಮಿಕ ಗುರುಗಳ (ಮೌಲ್ವಿ) ಕಡೆ ತಿರುಗಿದ್ದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

Published On - 10:36 pm, Wed, 26 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್