AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ನಲ್ಲಿ ಬಂದೂಕುಧಾರಿಯಿಂದ ಫೈರಿಂಗ್‌, ಕನಿಷ್ಠ 15 ಜನ ಸಾವು, ಹಲವರಿಗೆ ಗಾಯ

ಇರಾನ್​ನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ತಲೆದೋರಿರುವ ಮಧ್ಯೆ ಶಿಯಾ ಸಮುದಾಯದ ಯಾತ್ರಾಸ್ಥಳದಲ್ಲಿ ಭಕ್ತರ ಮೇಲೆ ಬಂದೂಕುಧಾರಿಗಳು ಫೈರಿಂಗ್‌ ನಡೆಸಿದ್ದಾರೆ.

ಇರಾನ್​ನಲ್ಲಿ ಬಂದೂಕುಧಾರಿಯಿಂದ ಫೈರಿಂಗ್‌, ಕನಿಷ್ಠ 15 ಜನ ಸಾವು, ಹಲವರಿಗೆ ಗಾಯ
Gunmen attack Shiite holy site in Iran
TV9 Web
| Edited By: |

Updated on:Oct 26, 2022 | 10:40 PM

Share

ಇರಾನ್ ನಲ್ಲಿ ವಸ್ತ್ರ ಸಂಹಿತೆ ವಿರೋಧಿ ಚಳವಳಿ ವ್ಯಾಪಕಗೊಂಡಿದ್ದು, ಪ್ರತಿಭಟನೆಯ ಕಾವು ತೀವ್ರಗೊಂಡಿದೆ. ಇದರ ಮಧ್ಯೆ ಬಂದೂಕುಧಾರಿಗಳು ಶಿಯಾ ಸಮುದಾಯದ ಪ್ರಮುಖ ಪ್ರಾರ್ಥನಾ ಮಂದಿರದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ 15 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶಿರಾಜ್​ ನಗರದಲ್ಲಿ ಈ ದುರ್ಘಟನೆ ನಡೆದಿದೆ.

ಶಿರಾಜ್‌ ನಗರದಲ್ಲಿ ಶಿಯಾ ಸಮುದಾಯದ ಭಕ್ತರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದೆ. ಇಬ್ಬರು ಬಂದೂಕುಧಾರಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಇರಾನ್​ನಲ್ಲಿ ಪ್ರತಿಭಟನೆಗಳು ಮುಂದುವರಿದಿರುವಂತೆಯೇ ಅಲ್ಲಿನ ಪರಮಾಣು ಶಕ್ತಿ ಸಂಸ್ಥೆಯ ವಿವರಗಳನ್ನು ಹ್ಯಾಕ್ ಮಾಡಲಾಗಿದೆ!

ಈ ಹಿಂದೆ ಸುನ್ನಿ ಉಗ್ರಗಾಮಿಗಳು ಬಹುಸಂಖ್ಯಾತ ಶಿಯಾ ಸಮುದಾಯದ ಪವಿತ್ರ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದರು. ಕಳೆದ ಹಲವು ದಿನಗಳಿಂದ ಇರಾನ್​ ಸರ್ಕಾರದ ವಿರುದ್ಧ ವಸ್ತ್ರ ಸಂಹಿತೆ ವಿಚಾರ ಸೇರಿದಂತೆ ಹಲವು ವಿಚಾರಕ್ಕೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದರ ಮಧ್ಯೆ ಈ ದಾಳಿ ನಡೆಸಿದ್ದು, ಆತಂಕಕ್ಕೆ ಕಾರಣವಾಗಿದೆ.

ಇರಾನ್ ನ ಕಟ್ಟುನಿಟ್ಟಾದ ಇಸ್ಲಾಮಿಕ್ ವಸ್ತ್ರಸಂಹಿತೆಯನ್ನು ಉಲ್ಲಂಘಿಸಿ ಬಂಧನಕ್ಕೊಳಗಾದ 22-ವರ್ಷ-ವಯಸ್ಸಿನ ಮಹ್ಸಾ ಅಮಿನಿ ಕಸ್ಟಡಿಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ನಂತರ ಆ ದೇಶದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ತಲೆದೋರಿದೆ. ದೇಶದಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಸರ್ಕಾರ ಬಲಪ್ರಯೋಗ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಅಸಲಿಗೆ ಇರಾನಲ್ಲಿ ಮಹಿಳೆಯರಿಗೆ ಕಡ್ಡಾಯಗೊಳಿಸಿರುವ ಹಿಜಾಬ್​ ಅನ್ನು ವಿರೋಧಿಸಿ ಪ್ರತಿಭಟನೆಗಳು ಶುರುವಾಗಿದ್ದು. ಆದರೆ ಕ್ರಮೇಣ ಪ್ರತಿಭಟನೆಗಳು ಅಲ್ಲಿನ ಸರ್ಕಾರವನ್ನು ನಡೆಸುತ್ತಿರುವ ಧಾರ್ಮಿಕ ಗುರುಗಳ (ಮೌಲ್ವಿ) ಕಡೆ ತಿರುಗಿದ್ದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

Published On - 10:36 pm, Wed, 26 October 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ