Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಜನರಲ್ ಖಾಸೆಮ್ ಸುಲೇಮಾನಿ ಸಮಾಧಿ ಬಳಿ ಅವಳಿ ಸ್ಫೋಟ; 103 ಜನರು ಸಾವು

ಸಾಹೇಬ್ ಅಲ್-ಜಮಾನ್ ಮಸೀದಿ ಬಳಿ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ. ಸಾಹೇಬ್ ಅಲ್-ಜಮಾನ್ ಮಸೀದಿಯ ಬಳಿ ಎರಡನೇ ಸ್ಫೋಟದ ಸದ್ದು ಕೇಳಿಸಿತು" ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಎಎಫ್‌ಪಿ ವರದಿ ಮಾಡಿದೆ. . ಯುಎಸ್ ಡ್ರೋನ್ ದಾಳಿಯಲ್ಲಿ ದೇಶದ ಉನ್ನತ ಕಮಾಂಡರ್ ಖಾಸೆಮ್ ಮೃತಪಟ್ಟಿದ್ದುಅವರ ಪುಣ್ಯ ಸ್ಮರಣೆ ಆಚರಿಸಲು ಜನರು ಸಮಾರಂಭವನ್ನು ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಇರಾನ್ ಜನರಲ್ ಖಾಸೆಮ್ ಸುಲೇಮಾನಿ ಸಮಾಧಿ ಬಳಿ ಅವಳಿ ಸ್ಫೋಟ; 103 ಜನರು ಸಾವು
ಇರಾನ್ ಸ್ಫೋಟ
Follow us
ರಶ್ಮಿ ಕಲ್ಲಕಟ್ಟ
|

Updated on:Jan 03, 2024 | 7:47 PM

ತೆಹ್ರಾನ್ ಜನವರಿ 03: ಆಗ್ನೇಯ ನಗರವಾದ ಕೆರ್ಮನ್‌ನಲ್ಲಿರುವ (Kerman) ಇರಾನ್ (Iran) ಜನರಲ್ ಖಾಸೆಮ್ ಸುಲೇಮಾನಿ (General Qasem Soleimani)ಅವರ ಸಮಾಧಿ ಬಳಿ ಏಕಕಾಲದಲ್ಲಿ ಸಂಭವಿಸಿದ ಎರಡು ಸ್ಫೋಟಗಳಲ್ಲಿ 103 ಜನರು ಸಾವಿಗೀಡಾಗಿದ್ದು, 141 ಮಂದಿ ಗಾಯಗೊಂಡಿದ್ದಾರೆ. ಯುಎಸ್ ಡ್ರೋನ್ ದಾಳಿಯಲ್ಲಿ ದೇಶದ ಉನ್ನತ ಕಮಾಂಡರ್ ಖಾಸೆಮ್ ಮೃತಪಟ್ಟಿದ್ದು, ಅವರ ಪುಣ್ಯ ಸ್ಮರಣೆ ಆಚರಿಸಲು ಜನರು ಸಮಾರಂಭವನ್ನು ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಸಾಹೇಬ್ ಅಲ್-ಜಮಾನ್ ಮಸೀದಿ ಬಳಿ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ. ಸಾಹೇಬ್ ಅಲ್-ಜಮಾನ್ ಮಸೀದಿಯ ಬಳಿ ಎರಡನೇ ಸ್ಫೋಟದ ಸದ್ದು ಕೇಳಿಸಿತು” ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಎಎಫ್‌ಪಿ ವರದಿ ಮಾಡಿದೆ. ನೂರ್‌ನ್ಯೂಸ್ ಪ್ರಕಾರ “ಸ್ಮಶಾನಕ್ಕೆ ಹೋಗುವ ರಸ್ತೆಯಲ್ಲಿ ಹಲವಾರು ಗ್ಯಾಸ್ ಕ್ಯಾನಿಸ್ಟರ್‌ಗಳು ಸ್ಫೋಟಗೊಂಡಿವೆ. ಸ್ಥಳೀಯ ಅಧಿಕಾರಿಯೊಬ್ಬರು “ಸ್ಫೋಟಗಳು ಗ್ಯಾಸ್ ಸಿಲಿಂಡರ್‌ಗಳಿಂದ ಸಂಭವಿಸಿವೆಯೇ ಅಥವಾ ಭಯೋತ್ಪಾದಕ ದಾಳಿಯಿಂದ ಉಂಟಾಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ” ಎಂದು ಹೇಳಿರುವುದಾಗಿ ಇರಾನ್ ಸರ್ಕಾರಿ ಮಾಧ್ಯಮವು ಉಲ್ಲೇಖಿಸಿದೆ.

ಸುಲೈಮಾನಿ ಅವರ ಪುಣ್ಯ ತಿಥಿ ಗುರುತಿಸಲು ನೂರಾರು ಇರಾನಿಯನ್ನರು ಜಮಾಯಿಸಿದ ಸಮಾರಂಭದಲ್ಲಿ  ಬಾಂಬ್ ಸ್ಫೋಟವಾಗಿದ್ದು,  ರೆಡ್ ಕ್ರೆಸೆಂಟ್ ರಕ್ಷಕರು ಗಾಯಗೊಂಡ ಜನರಿಗೆ ಸಹಾಯ ಮಾಡುತ್ತಿರುವುದನ್ನು ಸ್ಟೇಟ್ ಟಿವಿ ತೋರಿಸಿದೆ. ಕನಿಷ್ಠ 50 ಜನರು ಗಾಯಗೊಂಡಿದ್ದಾರೆ ಎಂದು ಕೆಲವು ಇರಾನ್ ಸುದ್ದಿ ಸಂಸ್ಥೆಗಳು ತಿಳಿಸಿವೆ.

ಇದನ್ನೂ ಓದಿ: ಇರಾನ್ ಮಾದಕವಸ್ತು ವ್ಯಸನ ಮುಕ್ತಿ ಕೇಂದ್ರದಲ್ಲಿ ಶುಕ್ರವಾರ ಭಾರೀ ಅಗ್ನಿ ದುರಂತ: 32 ಮಂದಿ ಸಾವು

ನಮ್ಮ ಕ್ಷಿಪ್ರ ಪ್ರತಿಕ್ರಿಯೆ ತಂಡಗಳು ಗಾಯಗೊಂಡವರನ್ನು ಸ್ಥಳಾಂತರಿಸುತ್ತಿವೆ. ಆದರೆ ಜನಸಂದಣಿಯಿಂದಾಗಿ ಸಂಚಾರ ಸುಗಮ ಆಗಿಲ್ಲ ಎಂದು ಎಂದು ಕರ್ಮನ್ ಪ್ರಾಂತ್ಯದ ರೆಡ್ ಕ್ರೆಸೆಂಟ್ ಮುಖ್ಯಸ್ಥ ರೆಜಾ ಫಲ್ಲಾಹ್ ಸ್ಟೇಟ್ ಟಿವಿಗೆ ತಿಳಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Wed, 3 January 24

ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ