AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈತಿಯಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿ, ಭಾರಿ ಸ್ಫೋಟ, 25 ಮಂದಿ ಸಾವು, 40 ಜನರಿಗೆ ಗಾಯ

ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​ ಪಲ್ಟಿಯಾದ ಪರಿಣಾಮ ಭಾರಿ ಸ್ಫೋಟ ಸಂಭವಿಸಿ 25 ಮಂದಿ ಸಾವನ್ನಪ್ಪಿರುವ ಘಟನೆ ಹೈತಿಯಲ್ಲಿ ನಡೆದಿದೆ. 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಸುಟ್ಟ ರೋಗಿಗಳಿಗೆ ಚಿಕಿತ್ಸೆ ನೀಡಲು ಹೈತಿಯ ಆಸ್ಪತ್ರೆಗಳು ಸಾಕಷ್ಟು ಸೌಲಭ್ಯಗಳನ್ನು ಹೊಂದಿಲ್ಲ.

ಹೈತಿಯಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿ, ಭಾರಿ ಸ್ಫೋಟ, 25 ಮಂದಿ ಸಾವು, 40 ಜನರಿಗೆ ಗಾಯ
ಸ್ಫೋಟImage Credit source: Global News
ನಯನಾ ರಾಜೀವ್
|

Updated on: Sep 15, 2024 | 9:30 AM

Share

ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​ ಪಲ್ಟಿಯಾದ ಪರಿಣಾಮ ಭಾರಿ ಸ್ಫೋಟ ಸಂಭವಿಸಿ 25 ಮಂದಿ ಸಾವನ್ನಪ್ಪಿರುವ ಘಟನೆ ಹೈತಿಯಲ್ಲಿ ನಡೆದಿದೆ. 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಸುಟ್ಟ ರೋಗಿಗಳಿಗೆ ಚಿಕಿತ್ಸೆ ನೀಡಲು ಹೈತಿಯ ಆಸ್ಪತ್ರೆಗಳು ಸಾಕಷ್ಟು ಸೌಲಭ್ಯಗಳನ್ನು ಹೊಂದಿಲ್ಲ.

1.2 ಕೋಟಿ ಜನಸಂಖ್ಯೆ ಹೊಂದಿರುವ ಈ ದೇಶವು ಇಂಧನ ಕೊರತೆಯಿಂದ ಸಂಕಷ್ಟದಲ್ಲಿದೆ. ಗುಂಪುಗಳ ನಡುವಿನ ಕಾಳಗದಿಂದಾಗಿ ದೇಶಕ್ಕೆ ಸರಕುಗಳನ್ನು ಆಮದು ಮಾಡಿಕೊಳ್ಳುವುದು ಕಷ್ಟಕರವಾಗಿದೆ. ಮೂರು ವರ್ಷಗಳ ಹಿಂದೆ ಪ್ರಬಲ ಭೂಕಂಪದಿಂದ ತತ್ತರಿಸಿದ್ದ 60,000 ಜನರು ವಾಸಿಸುವ ಮಿರಾಗೋನೆಯಲ್ಲಿ ಶನಿವಾರದ ಅಪಘಾತ ಸಂಭವಿಸಿದೆ.

2021 ರಲ್ಲಿ, ಹೈtಇಯ ಎರಡನೇ ಅತಿದೊಡ್ಡ ನಗರವಾದ ಕ್ಯಾಪ್-ಹೈಟಿಯನ್‌ನಲ್ಲಿ ಇಂಧನ ತುಂಬಿದ ಟ್ರಕ್ ಉರುಳಿಬಿದ್ದು ಸ್ಫೋಟಗೊಂಡಾಗ 75 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: Haiti Blast: ಹೈಟಿಯಲ್ಲಿ ಗ್ಯಾಸ್​ ಟ್ಯಾಂಕರ್ ಸ್ಫೋಟ; 50ಕ್ಕೂ ಹೆಚ್ಚು ಜನ ಸಜೀವ ದಹನ, 20 ಮನೆ ಸುಟ್ಟು ಭಸ್ಮ

ನಗರದ ಪೂರ್ವ ಅಂಚಿನಲ್ಲಿರುವ ಸನ್ಮಾರಿ ಪ್ರದೇಶದಲ್ಲಿ ಮಧ್ಯರಾತ್ರಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ನಂತರ ಟ್ಯಾಂಕರ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಸುಮಾರು 20 ಮನೆಗಳೂ ಸುಟ್ಟು ಕರಕಲಾಗಿದ್ದವು.

ಟ್ಯಾಂಕರ್ ಪಲ್ಟಿಯಾದ ನಂತರ ಕೆಲವರು ರಸ್ತೆಯಲ್ಲಿ ಸುರಿದ ಪೆಟ್ರೋಲ್ ಸಂಗ್ರಹಿಸಲು ಓಡಿದರು. ಈ ಸಂದರ್ಭದಲ್ಲಿ ಇಂಧನ ಟ್ಯಾಂಕರ್‌ನಲ್ಲಿ ಸ್ಫೋಟ ಸಂಭವಿಸಿದೆ. ಬೆಂಕಿ ವೇಗವಾಗಿ ಹರಡಿತು. ಇದರಿಂದಾಗಿ ಜನರು ಸಜೀವ ದಹನವಾದರು.

ಈ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ದೇಶದ ಪ್ರಧಾನಿ ಏರಿಯಲ್ ಹೆನ್ರಿ, ಸುಟ್ಟಗಾಯಗಳಿಂದ ಸಾವನ್ನಪ್ಪಿರುವವರ ಗುರುತು ಪತ್ತೆ ಹಚ್ಚುವುದು ಕಷ್ಟದ ವಿಷಯವಾಗಿದೆ ಎಂದು ಹೇಳಿದರು. ಮೇಯರ್ ಪ್ರಕಾರ, ವೇಗವಾಗಿ ಬಂದ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ, ನಂತರ ಹತ್ತಿರದಲ್ಲಿದ್ದ ಜನರು ಇಂಧನ ಸಂಗ್ರಹಿಸಲು ಓಡಿದಾಗ ಸ್ಫೋಟ ಸಂಭವಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!