AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮಾಲಿಯಾದ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಸಾವು, 63 ಜನರಿಗೆ ಗಾಯ

ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, 63 ಜನರು ಗಾಯಗೊಂಡಿದ್ದಾರೆ. ಅಲ್-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ ಅಲ್-ಶಬಾಬ್ ತನ್ನ ರೇಡಿಯೋ ಸ್ಟೇಷನ್ ಮೂಲಕ ತನ್ನ ಹೋರಾಟಗಾರರು ದಾಳಿ ನಡೆಸಿದ್ದಾರೆ ಎಂದು ಹೇಳಿದೆ.

ಸೋಮಾಲಿಯಾದ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಸಾವು, 63 ಜನರಿಗೆ ಗಾಯ
ಬಾಂಬ್ ದಾಳಿ
ನಯನಾ ರಾಜೀವ್
|

Updated on: Aug 04, 2024 | 9:37 AM

Share

ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, 63 ಜನರು ಗಾಯಗೊಂಡಿದ್ದಾರೆ. ಅಲ್-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ ಅಲ್-ಶಬಾಬ್ ತನ್ನ ರೇಡಿಯೋ ಸ್ಟೇಷನ್ ಮೂಲಕ ತನ್ನ ಹೋರಾಟಗಾರರು ದಾಳಿ ನಡೆಸಿದ್ದಾರೆ ಎಂದು ಹೇಳಿದೆ.

ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಉಳಿದವರು ನಾಗರಿಕರು ಎಂದು ಪೊಲೀಸ್ ವಕ್ತಾರ ಮೇಜರ್ ಅಬ್ದಿಫತಾ ಆದಾನ್ ಹಸನ್ ಪತ್ರಕರ್ತರಿಗೆ ತಿಳಿಸಿದ್ದಾರೆ. ದಾಳಿಯಲ್ಲಿ ಮತ್ತೊಬ್ಬ ಯೋಧ ಕೂಡ ಗಾಯಗೊಂಡಿದ್ದಾರೆ ಎಂದು ಹಾಸನ ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿರುವುದಾಗಿ ತಿಳಿಸಿದ್ದಾರೆ.

ಸೊಮಾಲಿಯಾದಲ್ಲಿ ಅಂತಾರಾಷ್ಟ್ರೀಯ ಬೆಂಬಲ ಪಡೆದಿರುವ ಫೆಡರಲ್ ಸರ್ಕಾರದ ವಿರುದ್ಧ ಬಂಡೆದ್ದಿರುವ ಅಲ್​ಖೈದಾದ ಜತೆ ಸಂಪರ್ಕವಿರುವ ಅಲ್​-ಶದಾಬ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಮತ್ತಷ್ಟು ಓದಿ: ಕರಾಚಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ, ಜಪಾನಿನ ಐವರು ಪಾರು, ಮೂವರಿಗೆ ಗಾಯ

ಓರ್ವ ಪ್ರತ್ಯಕ್ಷದರ್ಶಿ ಮೊಹಮ್ಮದ್ ಮೊಲಿದ್ ಎಂಬುವವರು, ಆ ವ್ಯಕ್ತಿ ಹೋಟೆಲ್​ನನ್ನು ತನ್ನನ್ನು ತಾನು ಸ್ಫೋಟಿಸಿಕೊಳ್ಳುವುದಕ್ಕೂ ಮುನ್ನ ಸ್ಫೋಟಕ ಉಡುಪನ್ನು ಧರಿಸಿದ ದಾಳಿಕೋರನನ್ನು ತಾನು ನೋಡಿದ್ದಾಗಿ ವಿವರಿಸಿದ್ದಾರೆ.

ಹೋಟೆಲ್​ನಲ್ಲಿ ಅವರೊಂದಿಗಿದ್ದ ಕೆಲವು ಸ್ನೇಹಿತರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಕಳೆದ ವರ್ಷ ನಡೆದ ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಅಲ್​ ಶಬಾಬ್ ದಕ್ಷಿಣ ಮತ್ತು ಮಧ್ಯ ಸೊಮಾಲಿಯಾದ ಭಾಗಗಳನ್ನು ನಿಯಂತ್ರಿಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ