AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮಾಲಿಯಾದ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಸಾವು, 63 ಜನರಿಗೆ ಗಾಯ

ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, 63 ಜನರು ಗಾಯಗೊಂಡಿದ್ದಾರೆ. ಅಲ್-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ ಅಲ್-ಶಬಾಬ್ ತನ್ನ ರೇಡಿಯೋ ಸ್ಟೇಷನ್ ಮೂಲಕ ತನ್ನ ಹೋರಾಟಗಾರರು ದಾಳಿ ನಡೆಸಿದ್ದಾರೆ ಎಂದು ಹೇಳಿದೆ.

ಸೋಮಾಲಿಯಾದ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಸಾವು, 63 ಜನರಿಗೆ ಗಾಯ
ಬಾಂಬ್ ದಾಳಿ
ನಯನಾ ರಾಜೀವ್
|

Updated on: Aug 04, 2024 | 9:37 AM

Share

ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, 63 ಜನರು ಗಾಯಗೊಂಡಿದ್ದಾರೆ. ಅಲ್-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ ಅಲ್-ಶಬಾಬ್ ತನ್ನ ರೇಡಿಯೋ ಸ್ಟೇಷನ್ ಮೂಲಕ ತನ್ನ ಹೋರಾಟಗಾರರು ದಾಳಿ ನಡೆಸಿದ್ದಾರೆ ಎಂದು ಹೇಳಿದೆ.

ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಉಳಿದವರು ನಾಗರಿಕರು ಎಂದು ಪೊಲೀಸ್ ವಕ್ತಾರ ಮೇಜರ್ ಅಬ್ದಿಫತಾ ಆದಾನ್ ಹಸನ್ ಪತ್ರಕರ್ತರಿಗೆ ತಿಳಿಸಿದ್ದಾರೆ. ದಾಳಿಯಲ್ಲಿ ಮತ್ತೊಬ್ಬ ಯೋಧ ಕೂಡ ಗಾಯಗೊಂಡಿದ್ದಾರೆ ಎಂದು ಹಾಸನ ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿರುವುದಾಗಿ ತಿಳಿಸಿದ್ದಾರೆ.

ಸೊಮಾಲಿಯಾದಲ್ಲಿ ಅಂತಾರಾಷ್ಟ್ರೀಯ ಬೆಂಬಲ ಪಡೆದಿರುವ ಫೆಡರಲ್ ಸರ್ಕಾರದ ವಿರುದ್ಧ ಬಂಡೆದ್ದಿರುವ ಅಲ್​ಖೈದಾದ ಜತೆ ಸಂಪರ್ಕವಿರುವ ಅಲ್​-ಶದಾಬ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಮತ್ತಷ್ಟು ಓದಿ: ಕರಾಚಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ, ಜಪಾನಿನ ಐವರು ಪಾರು, ಮೂವರಿಗೆ ಗಾಯ

ಓರ್ವ ಪ್ರತ್ಯಕ್ಷದರ್ಶಿ ಮೊಹಮ್ಮದ್ ಮೊಲಿದ್ ಎಂಬುವವರು, ಆ ವ್ಯಕ್ತಿ ಹೋಟೆಲ್​ನನ್ನು ತನ್ನನ್ನು ತಾನು ಸ್ಫೋಟಿಸಿಕೊಳ್ಳುವುದಕ್ಕೂ ಮುನ್ನ ಸ್ಫೋಟಕ ಉಡುಪನ್ನು ಧರಿಸಿದ ದಾಳಿಕೋರನನ್ನು ತಾನು ನೋಡಿದ್ದಾಗಿ ವಿವರಿಸಿದ್ದಾರೆ.

ಹೋಟೆಲ್​ನಲ್ಲಿ ಅವರೊಂದಿಗಿದ್ದ ಕೆಲವು ಸ್ನೇಹಿತರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಕಳೆದ ವರ್ಷ ನಡೆದ ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಅಲ್​ ಶಬಾಬ್ ದಕ್ಷಿಣ ಮತ್ತು ಮಧ್ಯ ಸೊಮಾಲಿಯಾದ ಭಾಗಗಳನ್ನು ನಿಯಂತ್ರಿಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು