AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Freddy Cyclone: ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ, ಕನಿಷ್ಠ 326 ಜನ ಸಾವು, ಜಾಗತಿಕ ನೆರವಿಗೆ ಮನವಿ

ಫ್ರೆಡ್ಡಿ ಚಂಡಮಾರುತಕ್ಕೆ ಆಗ್ನೇಯ ಆಫ್ರಿಕಾದ ಮಲಾವಿ ತತ್ತರಿಸಿ ಹೋಗಿದ್ದು, ಭಾರಿ ಪ್ರವಾಹ, ಮಣ್ಣು ಕುಸಿತವಾಗಿದೆ. ಇದರಿಂದ ಬಹಳಷ್ಟು ಸಾವು ನೋವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಜಾಗತಿಕ ನೆರವಿಗೆ ಮನವಿ ಮಾಡಿದೆ.

Freddy Cyclone: ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ, ಕನಿಷ್ಠ 326 ಜನ ಸಾವು, ಜಾಗತಿಕ ನೆರವಿಗೆ ಮನವಿ
ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ
ರಮೇಶ್ ಬಿ. ಜವಳಗೇರಾ
|

Updated on: Mar 17, 2023 | 7:05 AM

Share

ಮಲಾವಿ: ಆಗ್ನೇಯ ಆಫ್ರಿಕಾದ ಮಲಾವಿಗೆ( Malawi) ಅಪ್ಪಳಿಸಿರುವ ಫ್ರೆಡ್ಡಿ ಚಂಡಮಾರುತದ(Freddy) ಅಬ್ಬರದಿಂದ ಭಾರೀ ಮಳೆ ಜೊತೆಗೆ ಹಲವೆಡೆ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 326ಕ್ಕೆ ಏರಿಕೆಯಾಗಿದೆ. ಇನ್ನು ಇದರಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆಯ(ಮಾ.16) ಹೊತ್ತಿಗೆ ಸಾವಿನ ಸಂಖ್ಯೆ 225 ರಿಂದ 326 ಕ್ಕೆ ಏರಿದ್ದು, 183,159 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಲಾವಿಯದ ಅಧ್ಯಕ್ಷ ಲಾಝರಸ್​ ಚಕ್ವೇರ ತಿಳಿಸಿದ್ದಾರೆ. ಮಳೆಯಿಂದ ಉಂಟಾದ ಪ್ರವಾಹ ಮತ್ತು ಮಣ್ಣಿನ ಕುಸಿತದಲ್ಲಿ ಸಿಲುಕೊಂಡಿರುವವರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಸೇನೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾರ್ಯಚರಣೆ ಮುಂದುವರೆದಿದೆ. 300 ಕ್ಕೂ ಹೆಚ್ಚು ತುರ್ತು ಶೆಲ್ಟರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿರುವ ಚಕ್ವೆರಾ, ಜಾಗತಿಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಕಳೆದ ಮೂರು ವಾರಗಳಲ್ಲಿ ಎರಡನೇ ಬಾರಿಗೆ ಆಫ್ರಿಕಾದ ಕರಾವಳಿಗೆ ಫ್ರೆಡ್ಡಿ ಚಂಡಮಾರುತ ಅಪ್ಪಳಿಸಿದ್ದು, ನೆರೆ ಪ್ರದೇಶ ಮೊಝಾಂಬಿಕ್​ನಲ್ಲೂ ಸಹ ಬಹಳ ಅನಾಹುತ ಸೃಷ್ಟಿಸಿದ್ದು, ಜನ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ವಾರ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ.

ನಮ್ಮಲ್ಲಿರುವ ಸಂಪನ್ಮೂಲಗಳ ಮಟ್ಟಕ್ಕಿಂತ ಹಲವು ಪಟ್ಟು ಅಧಿಕ ನಷ್ಟ ಸಂಭವಿಸಿದ್ದು, ಅಂತಾರಾಷ್ಟ್ರೀಯ ಸೆರವಿಗೆ ಮನವಿ ಮಾಡಿರುವುದಾಗಿ ಅಧ್ಯಕ್ಷ ಲಾಝರಸ್​ ಚಕ್ವೇರ ಹೇಳಿದ್ದಾರೆ. ಚಂಡಮಾರುತದಿಂದ ಸಂತ್ರಸ್ತರಿಗೆ ನೆರವಾಗಲು ತಕ್ಷಣ 1.5 ದಶ ಲಕ್ಷ ಡಾಲರ್ ಬಿಡುಗಡೆ ಮಾಡಲಾಗುವುದು. ಕಳೆದ 13 ತಿಂಗಳಲ್ಲಿ ಮಲಾವಿಗೆ ಮೂರನೇ ಬಾರಿಗೆ ಚಂಡಮಾರುತ ಅಪ್ಪಳಿಸಿದ್ದು, ಇದು ಹವಮಾನ ಬದಲಾವಣೆಯ ನೈಜಕತೆಗೆ ಸಾಕ್ಷಿಯಾಗಿದ್ದು, ಇದೊಂದು ರಾಷ್ಟ್ರೀಯ ದುರಂತವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿದೇಶಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್