AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Freddy Cyclone: ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ, ಕನಿಷ್ಠ 326 ಜನ ಸಾವು, ಜಾಗತಿಕ ನೆರವಿಗೆ ಮನವಿ

ಫ್ರೆಡ್ಡಿ ಚಂಡಮಾರುತಕ್ಕೆ ಆಗ್ನೇಯ ಆಫ್ರಿಕಾದ ಮಲಾವಿ ತತ್ತರಿಸಿ ಹೋಗಿದ್ದು, ಭಾರಿ ಪ್ರವಾಹ, ಮಣ್ಣು ಕುಸಿತವಾಗಿದೆ. ಇದರಿಂದ ಬಹಳಷ್ಟು ಸಾವು ನೋವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಜಾಗತಿಕ ನೆರವಿಗೆ ಮನವಿ ಮಾಡಿದೆ.

Freddy Cyclone: ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ, ಕನಿಷ್ಠ 326 ಜನ ಸಾವು, ಜಾಗತಿಕ ನೆರವಿಗೆ ಮನವಿ
ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ
ರಮೇಶ್ ಬಿ. ಜವಳಗೇರಾ
|

Updated on: Mar 17, 2023 | 7:05 AM

Share

ಮಲಾವಿ: ಆಗ್ನೇಯ ಆಫ್ರಿಕಾದ ಮಲಾವಿಗೆ( Malawi) ಅಪ್ಪಳಿಸಿರುವ ಫ್ರೆಡ್ಡಿ ಚಂಡಮಾರುತದ(Freddy) ಅಬ್ಬರದಿಂದ ಭಾರೀ ಮಳೆ ಜೊತೆಗೆ ಹಲವೆಡೆ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 326ಕ್ಕೆ ಏರಿಕೆಯಾಗಿದೆ. ಇನ್ನು ಇದರಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆಯ(ಮಾ.16) ಹೊತ್ತಿಗೆ ಸಾವಿನ ಸಂಖ್ಯೆ 225 ರಿಂದ 326 ಕ್ಕೆ ಏರಿದ್ದು, 183,159 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಲಾವಿಯದ ಅಧ್ಯಕ್ಷ ಲಾಝರಸ್​ ಚಕ್ವೇರ ತಿಳಿಸಿದ್ದಾರೆ. ಮಳೆಯಿಂದ ಉಂಟಾದ ಪ್ರವಾಹ ಮತ್ತು ಮಣ್ಣಿನ ಕುಸಿತದಲ್ಲಿ ಸಿಲುಕೊಂಡಿರುವವರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಸೇನೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾರ್ಯಚರಣೆ ಮುಂದುವರೆದಿದೆ. 300 ಕ್ಕೂ ಹೆಚ್ಚು ತುರ್ತು ಶೆಲ್ಟರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿರುವ ಚಕ್ವೆರಾ, ಜಾಗತಿಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಕಳೆದ ಮೂರು ವಾರಗಳಲ್ಲಿ ಎರಡನೇ ಬಾರಿಗೆ ಆಫ್ರಿಕಾದ ಕರಾವಳಿಗೆ ಫ್ರೆಡ್ಡಿ ಚಂಡಮಾರುತ ಅಪ್ಪಳಿಸಿದ್ದು, ನೆರೆ ಪ್ರದೇಶ ಮೊಝಾಂಬಿಕ್​ನಲ್ಲೂ ಸಹ ಬಹಳ ಅನಾಹುತ ಸೃಷ್ಟಿಸಿದ್ದು, ಜನ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ವಾರ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ.

ನಮ್ಮಲ್ಲಿರುವ ಸಂಪನ್ಮೂಲಗಳ ಮಟ್ಟಕ್ಕಿಂತ ಹಲವು ಪಟ್ಟು ಅಧಿಕ ನಷ್ಟ ಸಂಭವಿಸಿದ್ದು, ಅಂತಾರಾಷ್ಟ್ರೀಯ ಸೆರವಿಗೆ ಮನವಿ ಮಾಡಿರುವುದಾಗಿ ಅಧ್ಯಕ್ಷ ಲಾಝರಸ್​ ಚಕ್ವೇರ ಹೇಳಿದ್ದಾರೆ. ಚಂಡಮಾರುತದಿಂದ ಸಂತ್ರಸ್ತರಿಗೆ ನೆರವಾಗಲು ತಕ್ಷಣ 1.5 ದಶ ಲಕ್ಷ ಡಾಲರ್ ಬಿಡುಗಡೆ ಮಾಡಲಾಗುವುದು. ಕಳೆದ 13 ತಿಂಗಳಲ್ಲಿ ಮಲಾವಿಗೆ ಮೂರನೇ ಬಾರಿಗೆ ಚಂಡಮಾರುತ ಅಪ್ಪಳಿಸಿದ್ದು, ಇದು ಹವಮಾನ ಬದಲಾವಣೆಯ ನೈಜಕತೆಗೆ ಸಾಕ್ಷಿಯಾಗಿದ್ದು, ಇದೊಂದು ರಾಷ್ಟ್ರೀಯ ದುರಂತವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿದೇಶಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ