AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Freddy Cyclone: ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ, ಕನಿಷ್ಠ 326 ಜನ ಸಾವು, ಜಾಗತಿಕ ನೆರವಿಗೆ ಮನವಿ

ಫ್ರೆಡ್ಡಿ ಚಂಡಮಾರುತಕ್ಕೆ ಆಗ್ನೇಯ ಆಫ್ರಿಕಾದ ಮಲಾವಿ ತತ್ತರಿಸಿ ಹೋಗಿದ್ದು, ಭಾರಿ ಪ್ರವಾಹ, ಮಣ್ಣು ಕುಸಿತವಾಗಿದೆ. ಇದರಿಂದ ಬಹಳಷ್ಟು ಸಾವು ನೋವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಜಾಗತಿಕ ನೆರವಿಗೆ ಮನವಿ ಮಾಡಿದೆ.

Freddy Cyclone: ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ, ಕನಿಷ್ಠ 326 ಜನ ಸಾವು, ಜಾಗತಿಕ ನೆರವಿಗೆ ಮನವಿ
ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ
ರಮೇಶ್ ಬಿ. ಜವಳಗೇರಾ
|

Updated on: Mar 17, 2023 | 7:05 AM

Share

ಮಲಾವಿ: ಆಗ್ನೇಯ ಆಫ್ರಿಕಾದ ಮಲಾವಿಗೆ( Malawi) ಅಪ್ಪಳಿಸಿರುವ ಫ್ರೆಡ್ಡಿ ಚಂಡಮಾರುತದ(Freddy) ಅಬ್ಬರದಿಂದ ಭಾರೀ ಮಳೆ ಜೊತೆಗೆ ಹಲವೆಡೆ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 326ಕ್ಕೆ ಏರಿಕೆಯಾಗಿದೆ. ಇನ್ನು ಇದರಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆಯ(ಮಾ.16) ಹೊತ್ತಿಗೆ ಸಾವಿನ ಸಂಖ್ಯೆ 225 ರಿಂದ 326 ಕ್ಕೆ ಏರಿದ್ದು, 183,159 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಲಾವಿಯದ ಅಧ್ಯಕ್ಷ ಲಾಝರಸ್​ ಚಕ್ವೇರ ತಿಳಿಸಿದ್ದಾರೆ. ಮಳೆಯಿಂದ ಉಂಟಾದ ಪ್ರವಾಹ ಮತ್ತು ಮಣ್ಣಿನ ಕುಸಿತದಲ್ಲಿ ಸಿಲುಕೊಂಡಿರುವವರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಸೇನೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾರ್ಯಚರಣೆ ಮುಂದುವರೆದಿದೆ. 300 ಕ್ಕೂ ಹೆಚ್ಚು ತುರ್ತು ಶೆಲ್ಟರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿರುವ ಚಕ್ವೆರಾ, ಜಾಗತಿಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಕಳೆದ ಮೂರು ವಾರಗಳಲ್ಲಿ ಎರಡನೇ ಬಾರಿಗೆ ಆಫ್ರಿಕಾದ ಕರಾವಳಿಗೆ ಫ್ರೆಡ್ಡಿ ಚಂಡಮಾರುತ ಅಪ್ಪಳಿಸಿದ್ದು, ನೆರೆ ಪ್ರದೇಶ ಮೊಝಾಂಬಿಕ್​ನಲ್ಲೂ ಸಹ ಬಹಳ ಅನಾಹುತ ಸೃಷ್ಟಿಸಿದ್ದು, ಜನ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ವಾರ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ.

ನಮ್ಮಲ್ಲಿರುವ ಸಂಪನ್ಮೂಲಗಳ ಮಟ್ಟಕ್ಕಿಂತ ಹಲವು ಪಟ್ಟು ಅಧಿಕ ನಷ್ಟ ಸಂಭವಿಸಿದ್ದು, ಅಂತಾರಾಷ್ಟ್ರೀಯ ಸೆರವಿಗೆ ಮನವಿ ಮಾಡಿರುವುದಾಗಿ ಅಧ್ಯಕ್ಷ ಲಾಝರಸ್​ ಚಕ್ವೇರ ಹೇಳಿದ್ದಾರೆ. ಚಂಡಮಾರುತದಿಂದ ಸಂತ್ರಸ್ತರಿಗೆ ನೆರವಾಗಲು ತಕ್ಷಣ 1.5 ದಶ ಲಕ್ಷ ಡಾಲರ್ ಬಿಡುಗಡೆ ಮಾಡಲಾಗುವುದು. ಕಳೆದ 13 ತಿಂಗಳಲ್ಲಿ ಮಲಾವಿಗೆ ಮೂರನೇ ಬಾರಿಗೆ ಚಂಡಮಾರುತ ಅಪ್ಪಳಿಸಿದ್ದು, ಇದು ಹವಮಾನ ಬದಲಾವಣೆಯ ನೈಜಕತೆಗೆ ಸಾಕ್ಷಿಯಾಗಿದ್ದು, ಇದೊಂದು ರಾಷ್ಟ್ರೀಯ ದುರಂತವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿದೇಶಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ