AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Freddy Cyclone: ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ, ಕನಿಷ್ಠ 326 ಜನ ಸಾವು, ಜಾಗತಿಕ ನೆರವಿಗೆ ಮನವಿ

ಫ್ರೆಡ್ಡಿ ಚಂಡಮಾರುತಕ್ಕೆ ಆಗ್ನೇಯ ಆಫ್ರಿಕಾದ ಮಲಾವಿ ತತ್ತರಿಸಿ ಹೋಗಿದ್ದು, ಭಾರಿ ಪ್ರವಾಹ, ಮಣ್ಣು ಕುಸಿತವಾಗಿದೆ. ಇದರಿಂದ ಬಹಳಷ್ಟು ಸಾವು ನೋವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಜಾಗತಿಕ ನೆರವಿಗೆ ಮನವಿ ಮಾಡಿದೆ.

Freddy Cyclone: ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ, ಕನಿಷ್ಠ 326 ಜನ ಸಾವು, ಜಾಗತಿಕ ನೆರವಿಗೆ ಮನವಿ
ಫ್ರೆಡ್ಡಿ ಚಂಡಮಾರುತಕ್ಕೆ ಮಲಾವಿ ತತ್ತರ
ರಮೇಶ್ ಬಿ. ಜವಳಗೇರಾ
|

Updated on: Mar 17, 2023 | 7:05 AM

Share

ಮಲಾವಿ: ಆಗ್ನೇಯ ಆಫ್ರಿಕಾದ ಮಲಾವಿಗೆ( Malawi) ಅಪ್ಪಳಿಸಿರುವ ಫ್ರೆಡ್ಡಿ ಚಂಡಮಾರುತದ(Freddy) ಅಬ್ಬರದಿಂದ ಭಾರೀ ಮಳೆ ಜೊತೆಗೆ ಹಲವೆಡೆ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 326ಕ್ಕೆ ಏರಿಕೆಯಾಗಿದೆ. ಇನ್ನು ಇದರಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆಯ(ಮಾ.16) ಹೊತ್ತಿಗೆ ಸಾವಿನ ಸಂಖ್ಯೆ 225 ರಿಂದ 326 ಕ್ಕೆ ಏರಿದ್ದು, 183,159 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಲಾವಿಯದ ಅಧ್ಯಕ್ಷ ಲಾಝರಸ್​ ಚಕ್ವೇರ ತಿಳಿಸಿದ್ದಾರೆ. ಮಳೆಯಿಂದ ಉಂಟಾದ ಪ್ರವಾಹ ಮತ್ತು ಮಣ್ಣಿನ ಕುಸಿತದಲ್ಲಿ ಸಿಲುಕೊಂಡಿರುವವರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಸೇನೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾರ್ಯಚರಣೆ ಮುಂದುವರೆದಿದೆ. 300 ಕ್ಕೂ ಹೆಚ್ಚು ತುರ್ತು ಶೆಲ್ಟರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿರುವ ಚಕ್ವೆರಾ, ಜಾಗತಿಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಕಳೆದ ಮೂರು ವಾರಗಳಲ್ಲಿ ಎರಡನೇ ಬಾರಿಗೆ ಆಫ್ರಿಕಾದ ಕರಾವಳಿಗೆ ಫ್ರೆಡ್ಡಿ ಚಂಡಮಾರುತ ಅಪ್ಪಳಿಸಿದ್ದು, ನೆರೆ ಪ್ರದೇಶ ಮೊಝಾಂಬಿಕ್​ನಲ್ಲೂ ಸಹ ಬಹಳ ಅನಾಹುತ ಸೃಷ್ಟಿಸಿದ್ದು, ಜನ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ವಾರ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ.

ನಮ್ಮಲ್ಲಿರುವ ಸಂಪನ್ಮೂಲಗಳ ಮಟ್ಟಕ್ಕಿಂತ ಹಲವು ಪಟ್ಟು ಅಧಿಕ ನಷ್ಟ ಸಂಭವಿಸಿದ್ದು, ಅಂತಾರಾಷ್ಟ್ರೀಯ ಸೆರವಿಗೆ ಮನವಿ ಮಾಡಿರುವುದಾಗಿ ಅಧ್ಯಕ್ಷ ಲಾಝರಸ್​ ಚಕ್ವೇರ ಹೇಳಿದ್ದಾರೆ. ಚಂಡಮಾರುತದಿಂದ ಸಂತ್ರಸ್ತರಿಗೆ ನೆರವಾಗಲು ತಕ್ಷಣ 1.5 ದಶ ಲಕ್ಷ ಡಾಲರ್ ಬಿಡುಗಡೆ ಮಾಡಲಾಗುವುದು. ಕಳೆದ 13 ತಿಂಗಳಲ್ಲಿ ಮಲಾವಿಗೆ ಮೂರನೇ ಬಾರಿಗೆ ಚಂಡಮಾರುತ ಅಪ್ಪಳಿಸಿದ್ದು, ಇದು ಹವಮಾನ ಬದಲಾವಣೆಯ ನೈಜಕತೆಗೆ ಸಾಕ್ಷಿಯಾಗಿದ್ದು, ಇದೊಂದು ರಾಷ್ಟ್ರೀಯ ದುರಂತವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿದೇಶಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!