AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ, 48 ಜನ ದುರ್ಮರಣ

ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 48 ಜನ ಮೃತಪಟ್ಟಿದ್ದಾರೆ. ಕಂಟೈನರ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಾದಚಾರಿಗಲ ಮೇಲೆ ಹರಿದಿದೆ.

Accident: ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ, 48 ಜನ ದುರ್ಮರಣ
ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ
TV9 Web
| Updated By: ಆಯೇಷಾ ಬಾನು|

Updated on: Jul 01, 2023 | 7:00 AM

Share

ನೈರೋಬಿ: ಪಶ್ಚಿಮ ಕೀನ್ಯಾದ(Western Kenya) ಲೊಂಡಿಯಾನಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ( Road Accident). ದುರಂತದಲ್ಲಿ 48 ಜನ ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್, ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಪಾದಚಾರಿಗಳ ಮೇಲೆ ಹರಿದಿದೆ. ಈ ಪರಿಣಾಮ 48 ಜನ ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜಧಾನಿ ನೈರೋಬಿಯ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ (125 ಮೈಲುಗಳು) ದೂರದಲ್ಲಿರುವ ಲೊಂಡಿಯಾನಿಯ ರಿಫ್ಟ್ ವ್ಯಾಲಿ ಪಟ್ಟಣದ ಸಮೀಪ ಶುಕ್ರವಾರ ಸಂಜೆ ರಸ್ತೆ ಅಪಘಾತ ಸಂಭವಿಸಿದೆ.

ಸ್ಥಳದಲ್ಲೇ 48 ಜನ ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಪಷ್ಟ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ರಿಫ್ಟ್ ವ್ಯಾಲಿ ಪೊಲೀಸ್ ಕಮಾಂಡರ್ ಟಾಮ್ ಒಡೆರಾ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮಗಳು ಉಲ್ಲೇಖಿಸಿದ್ದಂತೆ, ಟ್ರಕ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳು ಮತ್ತು ಮಾರುಕಟ್ಟೆ ವ್ಯಾಪಾರಿಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ಘಟನೆಯ ವಿಡಿಯೋ, ಫೋಟೋಗಳನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾರಿಗೆ ಸಂಸ್ಥೆಯಿಂದ ಗುಡ್​ ನ್ಯೂಸ್​: ಜುಲೈ 15 ರವರೆಗೆ ಸಾಮಾನ್ಯ ಸೇವೆಯಲ್ಲಿ ಪ್ರಯಾಣಿಸಲು ಅವಕಾಶ

ರಾತ್ರಿ ಪೂರ್ತಿಯೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು ಭಾರೀ ಮಳೆಯು ಕಾರ್ಯಾಚರಣೆಗೆ ಅಡ್ಡಿಪಡಿಸಿತು. ಇನ್ನೂ ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್‌ಕ್ರಾಸ್ ಸೊಸೈಟಿ ಹೇಳಿದೆ.

ಲೊಂಡಿಯಾನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಂಬಂಧ ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ದೇಶವು ಶೋಕಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ